ಬೆಂಗಳೂರು: ವಿಚ್ಛೇದಿತ ಮಹಿಳೆ ಮೇಲೆ ಆ್ಯಸಿಡ್ ದಾಳಿ; ಆರೋಪಿ ಬಂಧನ
Team Udayavani, Jun 10, 2022, 11:56 PM IST
ಬೆಂಗಳೂರು: ನಗರದಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದ ಪ್ರಕರಣ ಮಾಸುವ ಮುನ್ನವೇ ಶುಕ್ರವಾರ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ.
ಅಗರಬತ್ತಿ ಫ್ಯಾಕ್ಟರಿಯಲ್ಲಿ ದುಡಿಯುತ್ತಿದ್ದ ವಿಚ್ಛೇದಿತ ಮಹಿಳೆ ಮೇಲೆ ಗೋರಿಪಾಳ್ಯ ನಿವಾಸಿ ಅಹ್ಮದ್ ಎಂಬಾತ ಶುಕ್ರವಾರ ಬೆಳಗ್ಗೆ ಸಾರಕ್ಕಿ ಸಿಗ್ನಲ್ ಬಳಿ ಆ್ಯಸಿಡ್ ಎರಚಿದ್ದಾನೆ.
ಪರಿಣಾಮ 34 ವರ್ಷದ ಮಹಿಳೆಯ ಕಣ್ಣಿಗೆ ಗಾಯವಾಗಿದ್ದು, ಸಂಜಯ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣದ ವಿವರ
ಅಗರಬತ್ತಿ ಕಾರ್ಖಾನೆಯಲ್ಲಿ ವಿಚ್ಛೇದಿತ ಮಹಿಳೆ ಹಾಗೂ ಆರೋಪಿ ಕೆಲಸ ಮಾಡುತ್ತಿದ್ದು, ಇವರಿಬ್ಬರ ನಡುವೆ ಪ್ರೀತಿ ಮೂಡಿತ್ತು. ಮಹಿಳೆಗೆ ಮೂವರು ಮಕ್ಕಳಿದ್ದು, ಆರೋಪಿ ಅಹ್ಮದ್ಗೂ ಮದುವೆಯಾಗಿದೆ ಎನ್ನಲಾಗಿದೆ. ಆದರೂ ತನ್ನನ್ನು ಮದುವೆಯಾಗುವಂತೆ ಆರೋಪಿಯು ಸಂತ್ರಸ್ತೆ ಮೇಲೆ ಒತ್ತಡ ಹಾಕುತ್ತಿದ್ದ. ಆದರೆ ಆಕೆ ಸ್ಪಂದಿಸಿರಲಿಲ್ಲ. ಇದರಿಂದ ಆರೋಪಿ ಕೋಪಗೊಂಡಿದ್ದು, ಗುರುವಾರ ಇದೇ ವಿಚಾರವಾಗಿ ಮಹಿಳೆಯೊಂದಿಗೆ ಜಗಳವಾಡಿದ್ದ ಎನ್ನಲಾಗಿದೆ.
ಆ್ಯಸಿಡ್ ನಿಷೇಧಕ್ಕೆ ಚಿಂತನೆ: ಆರಗ
ಆ್ಯಸಿಡ್ ಅನ್ನು ಬೇರೆ ಕಾರ್ಯಕ್ಕೆ ಬಳಸು ವುದರಿಂದ ನಿಷೇಧ ಹೇರಬಹುದೇ ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತ ನಾಡಿರುವ ಅವರು, ದಾಳಿ ಸಂಬಂಧ ಅಧಿಕಾರಿ ಗಳಿಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು
IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ