ರಾಜಸ್ಥಾನದಲ್ಲಿ ಗೆದ್ದ ಕೈ; ಕೈಗೆ 3, ಬಿಜೆಪಿಗೆ ಒಂದು ಸ್ಥಾನ; ಸೋತ ಸುಭಾಷ್‌ ಚಂದ್ರ


Team Udayavani, Jun 11, 2022, 2:00 AM IST

ರಾಜಸ್ಥಾನದಲ್ಲಿ ಗೆದ್ದ ಕೈ; ಕೈಗೆ 3, ಬಿಜೆಪಿಗೆ ಒಂದು ಸ್ಥಾನ; ಸೋತ ಸುಭಾಷ್‌ ಚಂದ್ರ

ಜೈಪುರ: ರಾಜಸ್ಥಾನದಿಂದ ತೆರವಾಗಿದ್ದ ನಾಲ್ಕು ರಾಜ್ಯಸಭಾ ಸ್ಥಾನಗಳಿಗಾಗಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮೂರು ಸ್ಥಾನಗಳನ್ನು ಗೆದ್ದುಕೊಳ್ಳುವಲ್ಲಿ ಸಫ‌ಲವಾಗಿದೆ. ನಾಲ್ಕರಲ್ಲಿ ಎರಡು ಸ್ಥಾನಗಳಲ್ಲಿ ಕಾಂಗ್ರೆಸ್‌, ಒಂದು ಸ್ಥಾನದಲ್ಲಿ ಬಿಜೆಪಿ ಜಯಗಳಿಸುವುದು ಪಕ್ಕಾ ಆಗಿತ್ತು. ಆದರೆ ನಾಲ್ಕನೇ ಸ್ಥಾನಕ್ಕಾಗಿ ಕಾಂಗ್ರೆಸ್‌, ಬಿಜೆಪಿ ನಡುವೆ ಹಗ್ಗಜಗ್ಗಾಟ ಶುರುವಾಗಿತ್ತು.

ಇದೇ ವೇಳೆ ರಾಜ್ಯಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಧ್ಯಮ ಲೋಕದ ದೈತ್ಯ ಉದ್ಯಮಿ ಸುಭಾಷ್‌ ಚಂದ್ರ ಅವರಿಗೆ ಬಿಜೆಪಿ, ಆರ್‌ಎಲ್‌ಪಿ ಪಕ್ಷಗಳು ಬೆಂಬಲ ಘೋಷಿಸಿದ್ದವು. ಅದರ ಹೊರತಾಗಿಯೂ, ಸುಭಾಷ್‌ ಚಂದ್ರ ಅವರಿಗೆ ಗೆಲುವು ಪಡೆಯಲು 8 ಮತಗಳ ಆವಶ್ಯಕತೆಯಿತ್ತು.

ಕಳೆದ ಬಾರಿ ಹರಿಯಾಣದಲ್ಲಿ ಅಡ್ಡಮತ ಪಡೆಯಲು ಯಶಸ್ವಿಯಾಗಿದ್ದ ಸುಭಾಷ್‌ ಚಂದ್ರ ರಾಜಸ್ಥಾನದಲ್ಲಿ ಸೋತಿದ್ದಾರೆ. ಆಗ ಅಧಿಕೃತ ಅಭ್ಯರ್ಥಿಯನ್ನೇ ಅವರು ಸೋಲಿಸಿದ್ದರು. ಈ ಬಾರಿ ಕಾಂಗ್ರೆಸ್‌ನವರು ತಮ್ಮ ಶಾಸಕರನ್ನುರೆಸಾರ್ಟ್‌ನಲ್ಲೇ ಹಿಡಿದಿಟ್ಟುಕೊಂಡ ಪರಿಣಾಮ, ಅಡ್ಡಮತಕ್ಕೆ ಅವಕಾಶ ಸಿಕ್ಕಿಲ್ಲ. ಇದೇ ವೇಳೆ, ಕಾಂಗ್ರೆಸ್‌ನಿಂದ ಗೆದ್ದಿರುವ ಮುಕುಲ್‌ ವಾಸ್ನಿಕ್‌, ರಣದೀಪ್‌ ಸುಜೇìವಾಲಾಗೆ ಸಿಗಬೇಕಿದ್ದ ಮತಗಳಿಗಿಂತ ಎರಡು ಮತಗಳು ಹೆಚ್ಚಿಗೆ ಸಿಕ್ಕಿವೆ.

ಹಾಗೆಯೇ, ಬಿಜೆಪಿಯಿಂದ ಗೆದ್ದಿರುವ ಘನಶ್ಯಾಂ ತಿವಾರಿಯವರಿಗೂ ಎರಡು ಮತಗಳು ಹೆಚ್ಚಿಗೆ ಬಂದಿವೆ. ಒಂದು ಮತ ತಿರಸ್ಕೃತಗೊಂಡಿದೆ.

ರಾಣಿ ಕುಶ್ವಾಹ ವಿರುದ್ಧ “ಅಡ್ಡ ಮತ’ ಆರೋಪ: ರಾಜಸ್ಥಾನದಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಅವುಗಳಲ್ಲಿ ಎರಡಲ್ಲಿ ಆಡಳಿತಾರೂಢ ಕಾಂಗ್ರೆಸ್‌, ಒಂದರಲ್ಲಿ ಬಿಜೆಪಿ ಜಯಗಳಿಸುವುದು ನಿಚ್ಚಳವಾಗಿತ್ತು. ಆದರೆ, ನಾಲ್ಕನೇ ರಾಜ್ಯಸಭಾ ಸ್ಥಾನಕ್ಕೆ ಎರಡೂ ಪಕ್ಷಗಳ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಇದರ ನಡುವೆಯೇ, ಬಿಜೆಪಿಯ ಶಾಸಕಿ ಶೋಭಾ ರಾಣಿ ಕುಶ್ವಾಹ ಅವರು, ಕಾಂಗ್ರೆಸ್‌ ಅಭ್ಯರ್ಥಿಯ ಪರವಾಗಿ ಮತ ಹಾಕಿರುವ ಆರೋಪಗಳು ಕೇಳಿಬಂದಿವೆ. ಇದು ಬಿಜೆಪಿಗೆ ಇರುಸು ಮುರುಸು ತಂದಿದೆ.

ಮತದಾನದ ವೇಳೆ ಬಿಎಸ್‌ಪಿಯಿಂದ ಶಾಸಕ ರಾಗಿ ಆಯ್ಕೆಯಾಗಿ 2019ರಲ್ಲಿ ಕಾಂಗ್ರೆಸ್‌ ಸೇರ್ಪಡೆ ಗೊಂಡಿದ್ದ ನಾಲ್ವರು ಶಾಸಕರು ಕಾಂಗ್ರೆಸಿಗೆ ಮತ ಚಲಾಯಿಸಿದರು. ಇವರೊಂದಿಗೆ ಗುರುತಿಸಿಕೊಂಡಿ ರುವ ಇನ್ನಿಬ್ಬರು ಬಿಎಸ್‌ಪಿ ಶಾಸಕರೂ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಮತ ಹಾಕಿದರು.

ಮತದಾನದಿಂದ ದೂರ ಉಳಿದ ಬಲರಾಜ್‌ ಕುಂದು: ಹರಿಯಾಣದಿಂದ ಎರಡು ರಾಜ್ಯಸಭಾ ಸ್ಥಾನಗಳಿಗೆ ಆಯ್ಕೆಗಳು ನಡೆಯಬೇಕಿತ್ತು. ಬಿಜೆಪಿ ಯಿಂದ ಕ್ರಿಶನ್‌ ಲಾಲ್‌ ಪನ್ವಾರ್‌, ಕಾಂಗ್ರೆಸ್‌ನಿಂದ ಅಜಯ್‌ ಮಾಕನ್‌ ಕಣದಲ್ಲಿದ್ದರೆ, ಕಾರ್ತಿಕೇಯ ಶರ್ಮಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ನಿರ್ಣಾಯಕ ಎನಿಸಿದ್ದ ಹರಿಯಾಣ ವಿಧಾನಸಭೆಯ ಏಳು ಪಕ್ಷೇತರ ಶಾಸಕರಲ್ಲಿ ಆರು ಮತಗಳು ಬಿಜೆಪಿಗೆ ಹರಿದು ಬಂದಿವೆ ಎಂದು ಬಿಜೆಪಿ ನಾಯಕ ರಣಬೀರ್‌ ಸಿಂಗ್‌ ತಿಳಿಸಿದರು. ಮತ್ತೊಬ್ಬ ಪಕ್ಷೇತರ ಶಾಸಕ ಬಲರಾಜ್‌ ಕುಂದು ಅವರು ಮತದಾನದಿಂದ ದೂರ ಉಳಿದಿದ್ದರು.

ಹರಿಯಾಣ, ಮಹಾರಾಷ್ಟ್ರದಲ್ಲಿ ಎಣಿಕೆ ವಿಳಂಬ
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮೂವರು ಶಾಸಕರು, ಹರಿಯಾಣದ ಇಬ್ಬರು ಕಾಂಗ್ರೆಸ್‌ ಶಾಸಕರು, ತಮ್ಮ ಮತಪತ್ರಗಳನ್ನು ಬಹಿರಂಗವಾಗಿ ಪ್ರದರ್ಶಿಸುವ ಮೂಲಕ ಮತದಾನದ ನಿಯಮಗ ಳನ್ನು ಗಾಳಿಗೆ ತೂರಿದ್ದಾರೆಂದು ಬಿಜೆಪಿ ಆರೋಪಿ ಸಿತು. ಈ ಗೊಂದಲದಲ್ಲಿ ಈ ಎರಡೂ ರಾಜ್ಯಗಳಲ್ಲಿ ಮತ ಎಣಿಕೆ ಗೊಂದಲ ಮುಂದುವರಿದಿತ್ತು.

ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಹೊತ್ತಿಗೆ ಚುನಾವಣ ಆಯುಕ್ತರನ್ನು ಭೇಟಿ ಮಾಡಿದ ಬಿಜೆಪಿಯ ಕೇಂದ್ರ ಸಚಿವ ಮುಕ್ತಾರ್‌ ಅಬ್ಟಾಸ್‌ ನಖೀÌ, ಗಜೇಂದ್ರ ಸಿಂಗ್‌ ಶೆಖಾವತ್‌, ಜಿತೇಂದ್ರ ಸಿಂಗ್‌ ಹಾಗೂ ಅರ್ಜುನ್‌ ರಾಮ್‌ ಮೇಘವಾಲ್‌ ಅವರ ನಿಯೋಗ, ತಮ್ಮ ಆರೋಪವನ್ನು ಆಯು ಕ್ತರ ಗಮನಕ್ಕೆ ತಂದಿತಲ್ಲದೆ, ನಿಯಮ ಮೀರಿದ ಶಾಸಕರ ಮತಗಳನ್ನು ಅಸಿಂಧುಗೊಳಿಸಬೇಕೆಂದು ಮನವಿ ಮಾಡಿದರು. ಹರಿಯಾಣ ಕಾಂಗ್ರೆಸ್‌ ಶಾಸಕರ ಪರವಾಗಿ ಮನವಿ ಸಲ್ಲಿಸಿದ ಕಾಂಗ್ರೆಸ್‌ ನಾಯಕ ಅಜಯ್‌ ಮಾಕನ್‌, ಬಿಜೆಪಿ ಆರೋಪದಲ್ಲಿ ಹುರುಳಿಲ್ಲ ಎಂದು ಆಯೋಗಕ್ಕೆ ಮನವರಿಕೆ ಮಾಡಲು ಯತ್ನಿಸಿದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.