ಕುಡಿಯುವ ನೀರು ಪೂರೈಕೆ-ಬಡಾವಣೆ ಸ್ವಚ್ಛತೆಗೆ ಒತ್ತಾಯ
Team Udayavani, Jun 11, 2022, 1:17 PM IST
ಆಳಂದ: ಕುಡಿಯುವ ನೀರು ಪೂರೈಕೆ ಹಾಗೂ ಬಡಾವಣೆಯಲ್ಲಿ ಸ್ವತ್ಛತೆ ಕೈಗೊಂಡು ಕಸವಿಲೇವಾರಿ ನಡೆಸಿ ಕಂಬಗಳಿಗೆ ವಿದ್ಯುತ್ ಬಲ್ಬಗಳನ್ನು ಅಳವಡಿಸಬೇಕು ಎಂದು ಪಟ್ಟಣದ ವಾರ್ಡ್ 23ರ ನಾಗರಿಕರು ಪುರಸಭೆ ಅಧಿಕಾರಿಗಳಿಗೆ ಒತ್ತಾಯಿಸಿದರು.
ಪುರಸಭೆ ಕಾಂಗ್ರೆಸ್ ಸದಸ್ಯೆ ಕವಿತಾ ಸಂಜಯನಾಯಕ ನೇತೃತ್ವದಲ್ಲಿ ಶುಕ್ರವಾರ ಬಡಾವಣೆ ನಾಗರಿಕರು ಪುರಸಭೆ ಕಚೇರಿಗೆ ಆಗಮಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ವಾರ್ಡ್ನಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಬೀದಿ ಕಸ ವಿಲೇವಾರಿ ಕೈಗೊಳ್ಳದೆ ಇರುವುದರಿಂದ ಮಳೆಬಂದು ಕೆಸರು ಗದ್ದೆಯಾಗಿ ಬಡಾವಣೆಯಲ್ಲಿ ಗಬ್ಬು ವಾಸನೆ ಹರಡಿದೆ. ಇದರಿಂದ ಕ್ರಿಮಿಕೀಟ ಉತ್ಪತ್ತಿಯಾಗಿ ಸಾಂಕ್ರಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಕುರಿತು ಅಧಿಕಾರಿಗಳು, ಸಂಬಂಧಿತ ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅವರು ದೂರಿದರು.
ಬಡಾವಣೆ ನಿವಾಸಿಗಳ ಸಮಸ್ಯೆ ಆಲಿಸಿದ ಪುರಸಭೆ ವ್ಯವಸ್ಥಾಪಕ ಶಂಭುಲಿಂಗ ಕನ್ನೇ ಎಸ್ಐ ಲಕ್ಷ್ಮಣ ತಳವಾರ ಮತ್ತು ಪಿಟರ್ ಮ್ಯಾನ್ ಚೋಟು ಅವರನ್ನು ಕರೆಯಿಸಿ ಸಕಾಲಕ್ಕೆ ನೀರು ಪೂರೈಸಬೇಕು ಹಾಗೂ ಕಸಾ ವಿಲೇವಾರಿ ಕೈಗೊಳ್ಳಬೇಕು. ಬೀದಿ ದೀಪ ಅಳವಡಿಸಬೇಕು ಎಂದು ಸೂಚನೆ ನೀಡಿದರು.
ಇನ್ನು ಮುಂದೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಶಂಭುಲಿಂಗ ಭರವಸೆ ನೀಡಿದ ಮೇಲೆ ನಾಗರಿಕರು ಹಿಂದಿರುಗಿದರು. ಮುಖಂಡರಾದ ಸಂಜಯ ನಾಯಕ, ಫಕ್ರೋದ್ದೀನ ಸಾವಳಗಿ, ತಾಹೇರ ಶೇಖ ಹಾಗೂ ಮಹಿಳೆಯರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ