ತ್ವರಿತ ಕಾಮಗಾರಿಗೆ ದಾನಮ್ಮನವರ ಸೂಚನೆ
Team Udayavani, Jun 11, 2022, 3:40 PM IST
ವಿಜಯಪುರ: ಪ್ರಧಾನ ಮಂತ್ರಿ ಗುಂಪು ಮನೆ ಯೋಜನೆಯ 1493 ಕಾಮಗಾರಿಯಲ್ಲಿ ಮೊದಲ ಹಂತದಲ್ಲಿ 600 ಮನೆ ಫಲಾನುಭವಿಗಳಿಗೆ ಹಂಚಲು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ| ವಿ.ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಅಥಣಿ ರಸ್ತೆಯಲ್ಲಿ ಅಲ್ ಅಮೀನ್ ಕಾಲೇಜು ಹಿಂಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಜಿ ಪ್ಲಸ್ 1 ಮಾದರಿಯ ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವರು ಈ ಸೂಚನೆ ನೀಡಿದರು.
ಸರ್ಕಾರದ ಮಹ್ವಾಕಾಂಕ್ಷೆ ಯೋಜನೆಯ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಅಲ್ಲದೇ ತ್ವರಿತವಾಗಿ ಕಾಮಗಾರಿ ಮುಗಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಸಿದ್ಧಗೊಳಿಸುವಂತೆ ಸೂಚಿದರು.
ಕಾಮಗಾರಿ ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಇರುವುದಿಲ್ಲ. ಪರಿಶೀಲನೆ ವೇಳೆ ವ್ಯತ್ಯಾಸ ಕಂಡು ಬಂದಲ್ಲಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ ಸದರಿ ಕಾಮಗಾರಿಯ ಪ್ರತಿ ಹಂತದಲ್ಲಿ ಮೂರನೇ ವ್ಯಕ್ತಿಯಿಂದ ಸಾಮಗ್ರಿಗಳ ಗುಣಮಟ್ಟ ಪರೀಕ್ಷಿಸಲು ಹಾಗೂ ಗುಣಮಟ್ಟ ಖಾತ್ರಿ ಪಡಿಸಿಕೊಳ್ಳುವಂತೆ ಪಾಲಿಕೆಯ ತಾಂತ್ರಿಕ ವಿಭಾಗದ ಸಿಬ್ಬಂದಿಗೆ ಸೂಚಿಸಿದರು.
ಈಗಾಗಲೇ ಕಾಮಗಾರಿಯು ಪ್ರಗತಿಯಲ್ಲಿದ್ದು ಆಯ್ಕೆಯಾದ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಹಣವನ್ನು ಪಾಲಿಕೆಗೆ ಭರಿಸಲು ಹಾಗೂ ಸರ್ಕಾರದ ಯೋಜನೆ ಸದ್ಬಳಕೆಗೆ ಮಾಧ್ಯಮಗಳ ಮೂಲಕ ಫಲಾನುಭವಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಸಾಮಾನ್ಯ ವರ್ಗದ ಜನರಿಗೆ ಕೇಂದ್ರ ಸರ್ಕಾರದಿಂದ 1.50 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ 1.20 ಲಕ್ಷ ರೂ. ಸಹಾಯಧನ ಸಿಗಲಿದೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಜನರಿಗೆ ಕೇಂದ್ರ ಸರ್ಕಾರದಿಂದ 1.50 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ ಸಿಗಲಿದೆ ಎಂದು ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಜಿಲ್ಲಾಧಿಕಾರಿಗಳಿಗೆ ವಿವರ ನೀಡಿದರು.
ಪಾಲಿಕೆ ಕಾರ್ಯಪಾಲಕ ಅಭಿಯಂತರ ಡೊಳ್ಳಿನ, ಸಹಾಯಕ ಕಾರ್ಯಪಾಲಕ ಅಭಿಯಂತರ ರಶ್ಮಿ ಮಾಲಗಾವಿ, ಶೇಖರ ಮಾಳಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ