ಹೊರಟ್ಟಿ ನಿಜವಾದ ಶಿಕ್ಷಕರ ಪ್ರತಿನಿಧಿ

ಗೆಲ್ಲುವ ಕುದುರೆ-ಗೆಲ್ಲಿಸುವ ಪಕ್ಷ ಈಗ ಒಂದಾಗಿದೆ: ಸಿಎಂ ಬೊಮ್ಮಾಯಿ

Team Udayavani, Jun 12, 2022, 9:28 AM IST

1

ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಯವರು ಛಲ ಮತ್ತು ಸಕಾರಾತ್ಮಕ ಚಿಂತನೆವುಳ್ಳವರಾಗಿದ್ದು, ಅವರು ನಿಜವಾದ ಶಿಕ್ಷಕರ ಪ್ರತಿನಿಧಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿದ್ಯಾನಗರ ಬಿವಿಬಿ ಕ್ಯಾಂಪಸ್‌ನ ಕೆಎಲ್‌ಇ ಬಯೋಟೆಕ್‌ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಧಾನ ಪರಿಷತ್‌ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರವಾಗಿ ಶಿಕ್ಷಕ ಮತದಾರರನ್ನುದ್ದೇಶಿಸಿ ಅವರು ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಕಳೆದ 42 ವರ್ಷಗಳಿಂದ ಅಪಾರ ಸಾಧನೆ ಮಾಡಿದ್ದಾರೆ. ಶಿಕ್ಷಕರ ಹಲವಾರು ಕ್ಲಿಷ್ಟಕರ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಅವರ ಹೋರಾಟಗಳ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಕಾನೂನು ಬದಲಾವಣೆ ಆಗಿದೆ. ಶಿಕ್ಷಕರು ಹಾಗೂ ಬಸವರಾಜ ಹೊರಟ್ಟಿ ಅವರದ್ದು ತಾಯಿ-ಮಕ್ಕಳ ಸಂಬಂಧ. ಹೊರಟ್ಟಿ ಅವರು ಈ ಎತ್ತರಕ್ಕೆ ಏರಲು ಅವರ ಕಠಿಣ ಪರಿಶ್ರಮ ಕಾರಣ. ಶಿಕ್ಷಣ ಕ್ಷೇತ್ರದ ಜೊತೆ ನಾಡಿನ ಸಮಗ್ರ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ. ನಮಗೆ ಅವರನ್ನು ಸೋಲಿಸಲಾಗದೆ ಬೇಸರವಾಗಿತ್ತು. ಅವರಿಗೆ ಪಕ್ಷದ ಬಲವಿಲ್ಲದೆ ಬೇಸರವಾಗಿತ್ತು. ಈಗ ಗೆಲ್ಲುವ ಕುದುರೆ ಹಾಗೂ ಗೆಲ್ಲಿಸುವ ಪಕ್ಷ ಒಂದಾಗಿದೆ. ಎರಡು ಶಕ್ತಿಗಳು ಸೇರಿದಾಗ ಸಮಾಜಕ್ಕೆ, ಶಿಕ್ಷಣಕ್ಕೆ ಹಾಗೂ ರಾಜ್ಯಕ್ಕೆ ಒಳ್ಳೆಯದಾಗಬೇಕು. ಅದು ಆಗಲಿದೆ ಎನ್ನುವ ನಂಬಿಕೆ ಇದೆ ಎಂದರು.

ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿ, ಮೊದಲು ಬಿಜೆಪಿ ವಿರುದ್ಧ ಹೊರಟ್ಟಿ ಎಂಬುದಾಗಿತ್ತು. ಈಗ ಬಿಜೆಪಿ ಪ್ಲಸ್‌ ಹೊರಟ್ಟಿ ಆಗಿದೆ. ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಪ್ರಧಾನಿ ಮೋದಿ ಕೈ ಬಲಪಡಿಸಿ. ಶಿಕ್ಷಕರ ವಿಶ್ವಾಸಕ್ಕೆ ಧಕ್ಕೆ ಬಾರದ ರೀತಿ ನಡೆದುಕೊಳ್ಳುತ್ತೇವೆ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಮಾತನಾಡಿ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳನ್ನು ಪಡೆಯುವ ವಿಶ್ವಾಸವಿದೆ. ಶಿಕ್ಷಕರ ವಿಶ್ವಾಸ-ನಂಬಿಕೆ ಮುಂದುವರಿಸಿಕೊಂಡು ಹೋಗುತ್ತೇನೆ ಎಂದರು.

ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಡಾ| ಪ್ರಭಾಕರ ಕೋರೆ ಪ್ರಾಸ್ತಾವಿಕ ಮಾತನಾಡಿ, ಕೆಎಲ್‌ಇಯ ಈ ಕೇಂದ್ರದಲ್ಲಿ 3200 ಶಿಕ್ಷಕರು ಇದ್ದಾರೆ. ಅವರೆಲ್ಲ ಹೊರಟ್ಟಿಯವರಿಗೆ ಪ್ರಥಮ ಪ್ರಾಶಸ್ತ್ಯ ಮತಕೊಟ್ಟು ಬಹುಮತದಿಂದ ಆರಿಸಿ ತರಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ಶಾಸಕ ಅರವಿಂದ ಬೆಲ್ಲದ, ಕೆಎಲ್‌ಇ ತಾಂತ್ರಿಕ ವಿವಿ ಕುಲಪತಿ ಡಾ| ಅಶೋಕ ಶೆಟ್ಟರ, ಮಹೇಶ ಟೆಂಗಿನಕಾಯಿ, ಮಹಾಂತೇಶ ಕವಟಗಿಮಠ ಮೊದಲಾದವರಿದ್ದರು. ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ ಸ್ವಾಗತಿಸಿದರು. ಮಹೇಂದ್ರ ಕೌತಾಳ ನಿರೂಪಿಸಿದರು.

ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸರಕಾರ ಕ್ರಾಂತಿಕಾರಿ ಬದಲಾವಣೆ ತರುತ್ತಿದೆ. ಯುವಕರಿಗೆ ಅವಕಾಶಗಳನ್ನು ಒದಗಿಸಲಾಗುತ್ತಿದೆ. ಇನ್ನು 5 ವರ್ಷಗಳಲ್ಲಿ ಏಳು ಸರಕಾರಿ ಎಂಜಿನಿಯರಿಂಗ್‌ ಕಾಲೇಜ್‌ ಗಳನ್ನು ಐಐಟಿಗೆ ಮೇಲ್ದರ್ಜೆಗೇರಿಸಲಾಗುವುದು. ನವಕರ್ನಾಟಕದಿಂದ ನವಭಾರತ ನಿರ್ಮಾಣಕ್ಕಾಗಿ ಬಸವರಾಜ ಹೊರಟ್ಟಿಯವರಿಗೆ ತಮ್ಮ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು. -ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಹೊರಟ್ಟಿಯವರಿಗೆ ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕರ ಸಮಸ್ಯೆಗಳು ಗೊತ್ತು. ಅವರ ಅನುಭವ ನಮಗೆ ಅಗತ್ಯವಿದೆ. ಅವರನ್ನು ಆರಿಸಿ ತಂದರೆ ಸರಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಲು, ಅಧಿವೇಶನದಲ್ಲಿ ಶಿಕ್ಷಕರ ಪರವಾದ ಸಾಕಷ್ಟು ಉತ್ತಮ ವಿಷಯಗಳು ಚರ್ಚೆಗೆ ಬರಲಿವೆ. -ಪ್ರಹ್ಲಾದ ಜೋಶಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.