ಅತ್ಯಾಚಾರಕ್ಕೆ ತಡೆಯೊಡ್ಡಿದ್ದಕ್ಕೆ ಮಹಿಳೆಯ ಮುಖಕ್ಕೆ ಪೇಪರ್ ಕಟರ್ನಿಂದ ಹಲ್ಲೆ; 118 ಹೊಲಿಗೆ
ಮಹಿಳೆಯ ನಿವಾಸಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಭೇಟಿ
Team Udayavani, Jun 12, 2022, 8:04 PM IST
ಭೋಪಾಲ್: ಹೋಟೆಲ್ ಬಳಿ ಪಾರ್ಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಹಾಗೂ ಅತ್ಯಾಚಾರಕ್ಕೆ ತಡೆಯೊಡ್ಡಿದ್ದಕ್ಕೆ ಮಹಿಳೆಯ ಮುಖವನ್ನು ಮೂವರು ಯುವಕರು ಪೇಪರ್ ಕಟರ್ನಿಂದ ಗಾಯಗೊಳಿಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಮಹಿಳೆಯ ಮುಖಕ್ಕೆ 118 ಹೊಲಿಗೆಗಳನ್ನು ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಭೋಪಾಲ್ನ ಟಿಟಿ ನಗರದ ರೋಷನ್ಪುರದಲ್ಲಿರುವ ಹೋಟೆಲ್ಗೆ ಈ ಮಹಿಳೆ, ಪತಿಯೊಂದಿಗೆ ಬೈಕಿನಲ್ಲಿ ತೆರಳಿದ್ದರು. ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸುವ ಕುರಿತಾಗಿ ಬೇರೊಂದು ಬೈಕ್ನಲ್ಲಿದ್ದ ಮೂವರು ಯುವಕರು ಹಾಗೂ ಈ ದಂಪತಿ ನಡುವೆ ಮಾತಿನ ಚಕಮಕಿ ಶುರುವಾಗಿ ಜಗಳವಾಗಿದೆ. ಈ ಸಂದರ್ಭದಲ್ಲಿ ಆ ಯುವಕರು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾರೆ.
ಇದರಿಂದ ಸಿಟ್ಟಿಗೆದ್ದ ಮಹಿಳೆ, ಒಬ್ಬ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.
ನಂತರ, ದಂಪತಿ ಹೋಟೆಲ್ನೊಳಕ್ಕೆ ಹೋಗಿದ್ದಾರೆ. ಆದರೆ, ಅವರಿಬ್ಬರು ಊಟ ಮುಗಿಸಿ ಹೊರಬಂದ ಕೂಡಲೇ ಪೇಪರ್ ಕಟರ್ನಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ:ಪಂಜಾಬ್ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಆಸ್ಪತ್ರೆಗೆ ದಾಖಲು
ಮಹಿಳೆಯ ನಿವಾಸಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಜತೆಗೆ ಮಹಿಳೆಗೆ 1 ಲಕ್ಷ ರೂ. ಬಹುಮಾನವನ್ನೂ ಘೋಷಣೆ ಮಾಡಿದ್ದಾರೆ. ಹೋಟೆಲ್ ಮುಂಭಾಗದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮೂವರ ಪೈಕಿ ಇಬ್ಬರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ