ಇಂದಿನಿಂದ ರಣಜಿ ಸೆಮಿಫೈನಲ್ಸ್‌: ಮುಂಬಯಿ-ಯುಪಿ ಮಹಾ ಸಮರ

ಬಂಗಾಲ-ಮಧ್ಯಪ್ರದೇಶ ನಡುವೆ ಇನ್ನೊಂದು ಉಪಾಂತ್ಯ

Team Udayavani, Jun 14, 2022, 6:30 AM IST

thumb 2

ಬೆಂಗಳೂರು: ಬರೋಬ್ಬರಿ 41 ಸಲ ರಣಜಿ ಟ್ರೋಫಿಯನ್ನೆತ್ತಿದ ಮುಂಬಯಿ ಪ್ರಸಕ್ತ ದೇಶಿ ಕ್ರಿಕೆಟ್‌ ಸೀಸನ್‌ನಲ್ಲಿ ಮತ್ತೆ ನೆಚ್ಚಿನ ತಂಡವಾಗಿ ಮೂಡಿಬಂದಿದೆ. ಮಂಗಳವಾರದಿಂದ ಬೆಂಗಳೂರಿನಲ್ಲಿ ಮೊದಲ್ಗೊಳ್ಳಲಿರುವ ರಣಜಿ ಟ್ರೋಫಿ ಸೆಮಿಫೈನಲ್‌ನಲ್ಲಿ ಅದು ಉತ್ತರ ಪ್ರದೇಶವನ್ನು ಎದುರಿಸಲಿದ್ದು, ಮೇಲುಗೈ ನಿರೀಕ್ಷೆಯಲ್ಲಿದೆ.

ಇನ್ನೊಂದು ಸೆಮಿಫೈನಲ್‌ ಮುಖಾ ಮುಖೀ ಬಂಗಾಲ ಮತ್ತು ಮಧ್ಯಪ್ರದೇಶ ನಡುವೆ ನಡೆಯಲಿದೆ.

ಪೃಥ್ವಿ ಶಾ ನೇತೃತ್ವದ ಮುಂಬಯಿ ಕ್ವಾರ್ಟರ್‌ ಫೈನಲ್‌ನಲ್ಲಿ ದುರ್ಬಲ ಉತ್ತರಾಖಂಡ ವಿರುದ್ಧ 725 ರನ್ನುಗಳ ವಿಶ್ವದಾಖಲೆಯ ಗೆಲುವು ಸಾಧಿಸಿದ ಉತ್ಸಾಹದಲ್ಲಿದೆ. ಇನ್ನೊಂದು ಪಂದ್ಯ ದಲ್ಲಿ ಉತ್ತರ ಪ್ರದೇಶ ಆತಿಥೇಯ ಕರ್ನಾಟಕವನ್ನು 5 ವಿಕೆಟ್‌ಗಳಿಂದ ಮಣಿಸಿತ್ತು. ಹೀಗಾಗಿ ಇಲ್ಲಿ ಯುಪಿ ಸಾಧನೆಯ ಮೌಲ್ಯ ಅಧಿಕ.

ಮುಂಬಯಿ ಬ್ಯಾಟಿಂಗ್‌ ಬಲಿಷ್ಠ
ಮುಂಬಯಿ ಬ್ಯಾಟಿಂಗ್‌ ಸರದಿ ಹೆಚ್ಚು ಬಲಿಷ್ಠ. ಪೃಥ್ವಿ ಶಾ, ಯಶಸ್ವಿ ಜೈಸ್ವಾಲ್‌, ಸಫ‌ìರಾಜ್‌ ಖಾನ್‌, ಚೊಚ್ಚಲ ಪಂದ್ಯದಲ್ಲೇ ದ್ವಿಶತಕ ಬಾರಿಸಿದ ಸುವೇದ್‌ ಪಾರ್ಕರ್‌ ಅವರೆಲ್ಲ ಉತ್ತಮ ಫಾರ್ಮ್ ನಲ್ಲಿದ್ದಾರೆ. ಅರ್ಮಾನ್‌ ಜಾಫ‌ರ್‌ ಮತ್ತೋರ್ವ ಪ್ರತಿಭಾನ್ವಿತ ಆಟಗಾರ. ಆದರೆ ಕೀಪರ್‌ ಆದಿತ್ಯ ತಾರೆ ಗಾಯಾಳಾಗಿ ಹೊರಬಿದ್ದಿರುವುದರಿಂದ ತಂಡಕ್ಕೆ ತುಸು ಹಿನ್ನಡೆಯಾಗಿದೆ.

ಮುಂಬಯಿಯ ಬೌಲಿಂಗ್‌ ಸರದಿ ಭಾರೀ ಘಾತಕವೇನಲ್ಲ. ಹಾಗೆಯೇ ಯುಪಿ ಬ್ಯಾಟಿಂಗ್‌ ಸರದಿ ಅಷ್ಟೇನೂ ಬಲಿಷ್ಠವಲ್ಲ. ಹೀಗಾಗಿ ಧವಳ್‌ ಕುಲಕರ್ಣಿ, ಶಮ್ಸ್‌ ಮುಲಾನಿ, ಮೋಹಿತ್‌ ಅವಸ್ತಿ, ತುಷಾರ್‌ ದೇಶ ಪಾಂಡೆ, ಯುವ ಆಫ್ ಸ್ಪಿನ್ನರ್‌ ತನುಷ್‌ ಕೋಟ್ಯಾನ್‌ ಅವರೆಲ್ಲ ಸೇರಿ ಯುಪಿ ಬ್ಯಾಟರ್‌ಗಳಿಗೆ ಕಡಿವಾಣ ಹಾಕಬಹುದೆಂಬುದೊಂದು ನಿರೀಕ್ಷೆ.

ಯುಪಿ ನಾಯಕ ಕರಣ್‌ ಶರ್ಮ ಅವರ ಬ್ಯಾಟಿಂಗನ್ನು ಹೆಚ್ಚು ಅವಲಂಬಿ ಸಿದೆ. ಕರ್ನಾಟಕ ವಿರುದ್ಧದ ಚೇಸಿಂಗ್‌ನಲ್ಲಿ ಇವರ ಪಾತ್ರ ಮಹತ್ವದ್ದಾಗಿತ್ತು. ಪ್ರಿಯಂ ಗರ್ಗ್‌, ರಿಂಕು ಸಿಂಗ್‌ ಮತ್ತಿಬ್ಬರು ಭರವಸೆಯ ಬ್ಯಾಟರ್. ಆರ್ಯನ್‌ ಜುವಲ್‌, ಸಮರ್ಥ್ ಸಿಂಗ್‌, ಧ್ರುವ್‌ ಜೊರೆಲ್‌ ಅವರೆಲ್ಲ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ. ಐಪಿಎಲ್‌ನಲ್ಲಿ ಮಿಂಚಿದ ಪೇಸ್‌ ಬೌಲರ್‌ ಮೊಹ್ಸಿನ್‌ ಖಾನ್‌ ಸೇರ್ಪಡೆಯಿಂದ ಯುಪಿ ಬೌಲಿಂಗ್‌ ಹೆಚ್ಚು ಬಲಿಷ್ಠಗೊಂಡಿದೆ.

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wi

T20;ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ವಿಂಡೀಸ್‌

1-eng

T20;ಪಾಕಿಸ್ಥಾನವನ್ನು ಮಣಿಸಿದ ಇಂಗ್ಲೆಂಡ್‌

P-V-sindhu

Final ಸೋತ ಸಿಂಧು: ಮುಂದುವರಿದ ಪ್ರಶಸ್ತಿ ಬರಗಾಲ

1-wwwewqe

T20; ಬಾಂಗ್ಲಾದೇಶಕ್ಕೆ 10 ವಿಕೆಟ್‌ ಜಯ : ಸರಣಿ ಗೆದ್ದ ಅಮೆರಿಕ 

1-qqw-qwewqewqeqwe

IPL 2024; ಅಮೋಘ ಆಟವಾಡಿ ಮೂರನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಕೆಆರ್

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.