ರಾಷ್ಟ್ರೀಯ ಮಿಲಿಟರಿ ಶಾಲೆ “ವೈವಿಧ್ಯದಲ್ಲಿ ಏಕತೆ’ಯ ಪ್ರತೀಕ: ರಾಷ್ಟ್ರಪತಿ ಕೋವಿಂದ್‌


Team Udayavani, Jun 13, 2022, 11:52 PM IST

ರಾಷ್ಟ್ರೀಯ ಮಿಲಿಟರಿ ಶಾಲೆ “ವೈವಿಧ್ಯದಲ್ಲಿ ಏಕತೆ’ಯ ಪ್ರತೀಕ: ರಾಷ್ಟ್ರಪತಿ ಕೋವಿಂದ್‌

ಬೆಂಗಳೂರು: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ರಾಷ್ಟ್ರೀಯ ಮಿಲಿಟರಿ ಶಾಲೆಯು ದೇಶದ ಮೂಲತತ್ವ “ವೈವಿಧ್ಯದಲ್ಲಿ ಏಕತೆ’ಯ ಪ್ರತೀಕವಾಗಿದೆ’ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ವಿಶ್ಲೇಷಿಸಿದರು.

ಸೋಮವಾರ ನಗರದ ರಾಷ್ಟ್ರೀಯ ಮಿಲಿಟರಿ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಾ ಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಏಳೂವರೆ ದಶಕಗಳಿಂದ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಉದ್ದೇಶಿತ ಶಾಲೆಯು ಈ ಹಿಂದೆ ಸೇನಾ ಸಿಬಂದಿಯ ಮಕ್ಕಳಿಗೆ ಮಾತ್ರ ಸೀಮಿತವಾಗಿತ್ತು. ಬಳಿಕ ಸಾಮಾನ್ಯ ನಾಗರಿಕರ ಮಕ್ಕಳಿಗೂ ಇಲ್ಲಿ ಶಿಕ್ಷಣ ದೊರೆಯುತ್ತಿದೆ. ಪ್ರಸ್ತುತ ಈ ಶಾಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಹಿಡಿದು ಕೇರಳವರೆಗಿನ 23 ರಾಜ್ಯಗಳ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ದೇಶದ ಎಲ್ಲ ಪ್ರದೇಶಗಳ ಸಂಸ್ಕೃತಿ, ಭಾಷೆ, ಆಚರಣೆಗಳು, ಸಂಪ್ರದಾಯಗಳ ಸಮ್ಮಿಲನಕ್ಕೆ ಇದು ವೇದಿಕೆ ಆಗಿದ್ದು, ಆ ಮೂಲಕ “ವೈವಿಧ್ಯದಲ್ಲಿ ಏಕತೆ’ಯನ್ನು ಈ ಶಾಲೆ ಪ್ರತಿನಿಧಿಸುತ್ತದೆ ಎಂದು ಬಣ್ಣಿಸಿದರು.

ತನ್ನ ಸುದೀರ್ಘ‌ ಪಯಣದಲ್ಲಿ ಶ್ರೇಷ್ಠ ನ್ಯಾಯಮೂರ್ತಿಗಳು, ರಾಜ ಕೀಯ ನಾಯಕರು, ನಾಗರಿಕ ಸೇವೆ, ಉದ್ಯಮಿಗಳು, ಕ್ರೀಡೆ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅನೇಕ ಕೊಡುಗೆಗಳನ್ನು ನೀಡಿದ ಹೆಗ್ಗಳಿಕೆ ಈ ಶಾಲೆಗೆ ಸಲ್ಲುತ್ತದೆ. ಇದರ ಹಳೆಯ ವಿದ್ಯಾರ್ಥಿಗಳು ರಾಷ್ಟ್ರಪತಿ ಭವನದಲ್ಲೂ ಇದ್ದಾರೆ.

ಮರಣೋತ್ತರವಾಗಿ ಪರಮವೀರ ಚಕ್ರ ಗೌರವಕ್ಕೆ ಪಾತ್ರರಾದ ಕ್ಯಾ| ಗುರ್ಬಾಚನ್‌ಸಿಂಗ್‌ ಸಲಾರಿಯಾ ಕೂಡ ಇದೇ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ರಾಷ್ಟ್ರೀಯ ಮಿಲಿಟರಿ ಶಾಲೆ ತನ್ನದೇ ಆದ ಪರಂಪರೆಯನ್ನು ಹೊಂದಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ವನ್ನು ಹೊಗಳಿದ ರಾಷ್ಟ್ರಪತಿಗಳು, ಕನ್ನಡನಾಡು ಆಧುನಿಕ ಶಿಕ್ಷಣ ಮತ್ತು ತಂತ್ರಜ್ಞಾನದ ಆಗರವಾಗಿ ಹೊರಹೊಮ್ಮಿದೆ. “ಭಾರತ ಆವಿಷ್ಕಾರ ಸೂಚ್ಯಂಕ’ದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. 2021ರ ವರದಿಯೊಂದರ ಪ್ರಕಾರ ಬಂಡವಾಳ ಹೂಡಿಕೆಯಲ್ಲಿ ಕೂಡ ವಿಶ್ವದ ಮೊದಲ ಐದು ನಗರಗಳಲ್ಲಿ ಬೆಂಗಳೂರು ಒಂದಾಗಿದೆ ಎಂದು ಬಣ್ಣಿಸಿದರು.

ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರಪತಿಗಳ ಪತ್ನಿ ಸವಿತಾ ಕೋವಿಂದ್‌ ಮತ್ತಿತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.