ಮೇಕೆದಾಟು ಯೋಜನೆ; ತಮಿಳುನಾಡಿನ ಅನಗತ್ಯ ಅಡ್ಡಿ ಸಲ್ಲ


Team Udayavani, Jun 14, 2022, 6:00 AM IST

ಮೇಕೆದಾಟು ಯೋಜನೆ; ತಮಿಳುನಾಡಿನ ಅನಗತ್ಯ ಅಡ್ಡಿ ಸಲ್ಲ

ಕಾವೇರಿ ನದಿ ನೀರು ವಿಚಾರದಲ್ಲಿ ಅನಗತ್ಯ ರಾಜಕೀಯ ಮಾಡಿಕೊಂಡು ಬರುತ್ತಿರುವ ನೆರೆಯ ರಾಜ್ಯ ತಮಿಳುನಾಡು ಮತ್ತೆ ಮೇಕೆದಾಟು ಯೋಜನೆ ಕುರಿತಂತೆ ಕ್ಯಾತೆ ತೆಗೆದಿದೆ.

ದಶಕಗಳಿಂದಲೂ ಕಾವೇರಿ ನದಿ ನೀರು ವಿವಾದವನ್ನು ಮುಂದಿಟ್ಟುಕೊಂಡೇ ರಾಜಕಾರಣ ನಡೆಸುವುದು ತಮಿಳುನಾಡಿನ ರಾಜಕೀಯ ಪಕ್ಷಗಳ ಸಂಪ್ರದಾಯ. ಇದನ್ನು ಮುಂದುವರಿಸಿರುವ ಹಾಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಮೇಕೆದಾಟು ಯೋಜನೆಯ ಡಿಪಿಆರ್‌ ಚರ್ಚೆಯೇ ಸಲ್ಲದು ಎಂದು ಹೇಳುವ ಮೂಲಕ ವಿವಾದದ ಹೊಸ ಹಾದಿ ತುಳಿದಿದ್ದಾರೆ.

ಸ್ಟಾಲಿನ್‌ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಇದೇ 17ರಂದು ನಡೆಯಲಿರುವ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಡಿಪಿಆರ್‌ ಕುರಿತಂತೆ ಚರ್ಚೆ ನಡೆಸಬಾರದು ಎಂದಿದ್ದಾರೆ. ಈ ಕುರಿತಂತೆ ಜಲಶಕ್ತಿ ಸಚಿವಾಲಯಕ್ಕೆ ಸೂಚನೆ ನೀಡುವಂತೆಯೂ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ. ಸಭೆಯ ಅಜೆಂಡಾದಲ್ಲಿ ಮೇಕೆದಾಟು ಡಿಪಿಆರ್‌ ಚರ್ಚೆ ಎಂದು ಸೇರಿಸಿರುವುದೇ ಕಾನೂನುಬಾಹಿರ ಎಂಬುದು ಸ್ಟಾಲಿನ್‌ ಅಭಿಪ್ರಾಯ. ಮೇಕೆದಾಟು ವಿರೋಧಿಸಿ ತಮಿಳುನಾಡು ಸುಪ್ರೀಂ
ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವುದರಿಂದ ಈ ಬಗ್ಗೆ ತೀರ್ಮಾನವಾಗುವ ವರೆಗೂ ಚರ್ಚೆ ನಡೆಯಬಾರದು ಎಂಬ ಭಂಡವಾದ ಮುಂದಿಟ್ಟಿದ್ದಾರೆ.

ಕೆಲವೊಮ್ಮೆ ತಮಿಳುನಾಡು ವಿಚಿತ್ರ ಬೇಡಿಕೆಗಳನ್ನು ಇರಿಸಿಕೊಂಡು ವಿವಾದ ಸೃಷ್ಟಿಸುತ್ತದೆ. ಇದಕ್ಕೆ ಉದಾಹರಣೆ, ಈಗಿನ ಮೇಕೆದಾಟು ವಿಚಾರ. ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರಕ್ಕೆ ಮೇಕೆದಾಟು ಕುರಿತಂತೆ ನಿರ್ಧಾರ ತೆಗೆದುಕೊಳ್ಳುವ ಹಕ್ಕಿಲ್ಲ ಎಂಬುದು ಅದರ ವಾದ. 2018ರ ಸುಪ್ರೀಂ ಕೋರ್ಟ್‌ ತೀರ್ಪನ್ನು ಪಾಲನೆ ಮಾಡುವ ಸಲುವಾಗಿಯಷ್ಟೇ ಇದನ್ನು ರಚಿಸಲಾಗಿದೆ. ಇದನ್ನು ಬಿಟ್ಟು ಬೇರೆ ವಿಷಯ ಚರ್ಚಿಸುವಂತಿಲ್ಲ ಎಂದೂ ಹೇಳುತ್ತಿದೆ.

ಈ ಸಂಗತಿಗಳನ್ನು ಗಮನಿಸಿದರೆ, ತಮಿಳುನಾಡು ರಾಜ್ಯ ತನಗೆ ಬೇಕಾದಂತೆ ವಿಷಯಗಳನ್ನು ಬದಲಿಸಿಕೊಳ್ಳುತ್ತದೆ ಎಂಬುದು ಸ್ಪಷ್ಟವಾಗುತ್ತದೆ. ಮೇಕೆದಾಟು ವಿಚಾರವನ್ನು ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸದೆ ಬೇರೆ ಎಲ್ಲಿ ಚರ್ಚೆ ನಡೆಸಬೇಕು ಎಂಬ ಪ್ರಶ್ನೆ ಮೂಡುವಂತಾಗಿದೆ.

ಈಗಾಗಲೇ ನಿರ್ವಹಣ ಪ್ರಾಧಿಕಾರ ಮೇಕೆದಾಟು ಸಂಬಂಧ ಚರ್ಚೆಗೆ ಅವಕಾಶ ಕೊಡಬಾರದು ಎಂದು ಸುಪ್ರೀಂ ಕೋರ್ಟ್‌ ಮೆಟ್ಟಿಲು ತುಳಿದಾಗಿದೆ. ಈಗ ಪ್ರಧಾನಿಗೂ ಪತ್ರ ಬರೆದು ಅನಗತ್ಯ ಒತ್ತಡ ಸೃಷ್ಟಿಸುವ ಕೆಲಸವನ್ನೂ ಮಾಡುತ್ತಿದೆ. ಆದರೆ ಕಾವೇರಿ ನದಿ ನಿರ್ವಹಣ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡಿನ ಅಧಿಕಾರಿ ಯೊಬ್ಬರು ಇರುತ್ತಾರೆ, ಅವರು ಈ ಬಗ್ಗೆ ಚರ್ಚಿಸಬಹುದು ಎಂಬ ಸಾಮಾನ್ಯ ತಿಳಿವಳಿಕೆಯೂ ಮರೆಯಾದಂತೆ ಕಾಣಿಸುತ್ತಿದೆ.

ಏನೇ ಆಗಲಿ, ಕರ್ನಾಟಕದ ಕಡೆಯಿಂದ ತಮಿಳುನಾಡಿನ ಈ ಎಲ್ಲ ರಾಜಕೀಯಗಳಿಗೆ, ವಿರೋಧಗಳಿಗೆ ತಕ್ಕ ಉತ್ತರ ನೀಡಲೇಬೇಕು. ಯಾವುದೇ ಕಾರಣಕ್ಕೂ 17ರ ಸಭೆಯ ಅಜೆಂಡಾದಿಂದ ಮೇಕೆದಾಟು ಯೋಜನೆ ವಿಚಾರ ಹಿಂದಕ್ಕೆ ಸರಿಯದಂತೆ ನೋಡಿಕೊಳ್ಳಲೇಬೇಕು. ಅಲ್ಲದೆ, ಸುಪ್ರೀಂ ಕೋರ್ಟ್‌ ಮುಂದೆ ತಮಿಳುನಾಡು ಸಲ್ಲಿಕೆ ಮಾಡಿರುವ ಅರ್ಜಿಗೆ ಸೂಕ್ತ ಕಾನೂನು ತಜ್ಞರನ್ನು ನಿಯೋಜಿಸಿ ಸಮರ್ಥ ವಾದ ಮಂಡಿಸಬೇಕು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.