ಭಾರತೀಯ ಸೇನೆಗೆ ಸೇರಲು ಯುವಕರಿಗೆ ಸುವರ್ಣಾವಕಾಶ: ಏನಿದು ಕೇಂದ್ರದ ಅಗ್ನಿಪಥ್ ಯೋಜನೆ?
Team Udayavani, Jun 14, 2022, 2:41 PM IST
ನವದೆಹಲಿ: ಭಾರತೀಯ ಯುವಕರು ಸೇನೆಗೆ ಸೇರಿ ಅಲ್ಪಾವಧಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ಮಹತ್ವದ ಅಗ್ನಿಪಥ್ ಯೋಜನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ (ಜೂನ್ 14) ಅನುಮೋದನೆ ನೀಡಿರುವುದಾಗಿ ವರದಿ ತಿಳಿಸಿದೆ.
ಏನಿದು ಅಗ್ನಿಪಥ ಯೋಜನೆ?
ಸೇನೆಯಲ್ಲಿ ಅಲ್ಪಾವಧಿ ಸೇವೆ ಸಲ್ಲಿಸುವ ಅಗ್ನಿಪಥ ನೇಮಕಾತಿ ಯೋಜನೆಯಡಿ 17 ವರ್ಷದಿಂದ 21 ವರ್ಷದವರೆಗಿನ ಯುವಕರಿಗೆ ಆದ್ಯತೆ ನೀಡಲಾಗುವುದು. ಅಗ್ನಿಪಥ್ ಯೋಜನೆಯಲ್ಲಿ ಮೂರು ಸೇನೆಯಲ್ಲಿ ಯಾವುದನ್ನಾದರೂ ಆಯ್ಕೆ ಮಾಡಿಕೊಳ್ಳಲು ಅವಕಾಶ ಇದ್ದು, ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಬಹುದಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರಿಂಟರ್ ತೆಗೆದುಕೊಳ್ಳುವ ಯೋಚನೆಯಲ್ಲಿದ್ದೀರಾ? ಇಲ್ಲಿದೆ ಮಿತವ್ಯಯದ ಎಚ್ಪಿ ಪ್ರಿಂಟರ್
“ಅಗ್ನಿಪಥ್ ನೇಮಕಾತಿ ಯೋಜನೆಯು ಬದಲಾವಣೆಯ ಆರಂಭದ ಹಂತವಾಗಿದೆ. ಕಳೆದ ಎರಡು ವರ್ಷಗಳ ಕಾಲ ಸುದೀರ್ಘ ಚರ್ಚೆಯ ನಂತರ ಸುಧಾರಣೆಯ ನೇಮಕಾತಿ ನೀತಿಗೆ ಕೇಂದ್ರದ ಭದ್ರತಾ ಕ್ಯಾಬಿನೆಟ್ ಸಮಿತಿ ಅನುಮೋದನೆ ನೀಡಿದೆ. ಈ ಯೋಜನೆಯಿಂದಾಗಿ ಭಾರೀ ಬದಲಾವಣೆಯನ್ನು ತರುವ ಜೊತೆಗೆ ದೇಶದ ಯುವಕರಿಗೆ ಹೆಚ್ಚಿನ ಅವಕಾಶವನ್ನು ಕಲ್ಪಿಸಲಿದೆ. ಅಷ್ಟೇ ಅಲ್ಲ ಅಗ್ನಿಪಥ್ ಯೋಜನೆಯು ದೇಶದ ಭದ್ರತಾ ವ್ಯವಸ್ಥೆಯನ್ನು ಸದೃಢಗೊಳಿಸುವುದರೊಂದಿಗೆ ಭಾರತದ ಸೇನೆಯಲ್ಲಿ ಯುವಪಡೆಗೆ ಅದ್ಯತೆ ನೀಡಿದಂತಾಗುತ್ತದೆ ಎಂದು” ಸಿಂಗ್ ತಿಳಿಸಿದ್ದಾರೆ.
ಎಲ್ಲರೂ ಸಶಸ್ತ್ರ ಪಡೆಗಳನ್ನು ಗೌರವದಿಂದ ನೋಡುತ್ತಾರೆ. ಅದೇ ರೀತಿ ಯುವಕರು ಸೇನಾ ಸಮವಸ್ತ್ರ ಧರಿಸಲು ಬಯಸುತ್ತಾರೆ. ಸೇನೆಗೆ ಸೇರ್ಪಡೆಗೊಳ್ಳುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ. ಜೊತೆಗೆ ಉನ್ನತ ಕೌಶಲ್ಯದ ಪಡೆ ಲಭ್ಯವಾಗುತ್ತದೆ.
ಅಗ್ನಿಪಥ್ ಯೋಜನೆಯಲ್ಲಿ ನೇಮಕವಾಗುವ “ಅಗ್ನಿವೀರ”ರಿಗೆ ಉತ್ತಮ ಸಂಬಳ ನೀಡಲಾಗುತ್ತದೆ. ಇದರೊಂದಿಗೆ ಯೋಜನೆಯಲ್ಲಿ ಸೇವಾವಧಿ ಮುಗಿದ ನಂತರವೂ ಉತ್ತಮ ಪ್ಯಾಕೇಜ್ ನೀಡಲಾಗುವುದು ಎಂದು ರಾಜನಾಥ್ ಸಿಂಗ್ ವಿವರಿಸಿದ್ದಾರೆ.
#AgnipathRecruitmentScheme | On completion of the engagement period of 4 years, ‘Agniveers’ will be paid one-time ‘SevaNidhi’ package… which will be exempt from Income Tax. There shall be no entitlement to gratuity & pensionary benefits: Ministry of Defence pic.twitter.com/dFae7Qi9yx
— ANI (@ANI) June 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ