ನೀರಿನ ಸಮಸ್ಯೆ ಬಗೆಹರಿಸದ ಗ್ರಾ.ಪಂ ಅಧಿಕಾರಿ,ಸದಸ್ಯರನ್ನೇ ದೇವಸ್ಥಾನದಲ್ಲಿ ಕೂಡಿ ಹಾಕಿದ ಜನ
Team Udayavani, Jun 14, 2022, 3:18 PM IST
ಹುಮನಾಬಾದ್: ಕುಡಿಯುವ ನೀರು ಸಮಸ್ಯೆ ಬಗೆಹರಿಸದ ಹಿನ್ನೆಲೆಯಲ್ಲಿ ನಿಂಬೂರ್ ಗ್ರಾಮಸ್ಥರು ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸದಸ್ಯರನ್ನು ಬಸವಣ್ಣ ದೇವಸ್ಥಾನದಲ್ಲಿ ಕೂಡಿ ಹಾಕಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಸೀತಾಳಗೇರಾ ಗ್ರಾಮ ಪಂಚಾಯತ್ ಜೆ.ಇ ರಾಜು, ಪಿಡಿಓ ಸವೀತಾ, ಸೀತಾಳಗೇರಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಸ್ತೂರಬಾಯಿ ಸೇರಿದಂತೆ ಇತರೆ ನಾಲ್ಕು ಜನ ಗ್ರಾಮ ಪಂಚಾಯತ್ ಸದಸ್ಯರನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿದ ಘಟನೆ ನಡೆದಿದ್ದು, ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಒಂದು ತಿಂಗಳಿಂದ ನಿಂಬೂರ್ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಕುರಿತು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ಸೀತಾಳಗೇರ ಗ್ರಾಮ ಪಂಚಾಯತ್ ಗೆ ನಿಂಬೂರ್ ಗ್ರಾಮಸ್ಥರು ಮುತ್ತಿಗೆ ಹಾಕಿ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆತಂದಿದ್ದಾರೆ.ಈ ವೇಳೆ ನಿಂಬೂರ್ ಗ್ರಾಮದ ಬಸವಣ್ಣ ದೇವಸ್ಥಾನದಲ್ಲಿ ಕೂಡಿ ಹಾಕಿದ್ದಾರೆ. ಸ್ಥಳಕ್ಕೆ ಹಳ್ಳಿಖೇಡ (ಬಿ) ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ