ಕುಷ್ಟಗಿ: ಶಾಲೆ ಆವರಣದ ಪ್ರವೇಶ ದ್ವಾರದಲ್ಲೇ ಜೋತು ಬಿದ್ದ ವಿದ್ಯುತ್ ತಂತಿ :ತೆರವಿಗೆ ಮೀನ ಮೇಷ
Team Udayavani, Jun 14, 2022, 7:04 PM IST
ಕುಷ್ಟಗಿ : ತಾಲೂಕಿನ ಸಂಗನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿದ್ಯುತ್ ತಂತಿ ಇದ್ದರೂ ಜೆಸ್ಕಾಂ ಮಾತ್ರ ತೆರವುಗೊಳಿಸಲು ಮೀನ ಮೇಷ ಮಾಡುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸಂಗನಾಳ ಶಾಲೆಯ ಆವರಣ ಗೋಡೆಯ ದ್ವಾರ ಬಾಗಿಲಿಗೆ ಅಂಟಿಕೊಂಡೇ ವಿದ್ಯುತ್ ಕಂಬ ಇದ್ದು ವಿದ್ಯುತ್ ತಂತಿ ಜೋತು ಬಿದ್ದಿರುವುದು ಕಾಣಬಹುದಾಗಿದೆ. ಶಾಲೆಯ ಪ್ರವೇಶ ದ್ವಾರದಲ್ಲಿಯೇ ಅಪಾಯಕಾರಿ ಸ್ಥಿತಿಗೆ ಪಾಲಕರು, ಗ್ರಾಮಸ್ಥರು ತಾವರಗೇರಾ ಶಾಖಾಧಿಕಾರಿಯವರ ಗಮನಕ್ಕೆ ತಂದರೂ ಸಹ ವಿದ್ಯುತ್ ಕಂಬ ಸ್ಥಳಾಂತರಗೊಂಡಿಲ್ಲ.
ಈ ವಿದ್ಯುತ್ ಕಂಬದಿಂದಾಗಿ ಆವರಣ ಗೋಡೆಯ ಕಾಮಗಾರಿ ಹಾಗೂ ದ್ವಾರ ಬಾಗಿಲಿನ ಕಮಾನು ನಿರ್ಮಿಸಲು ಸಾಧ್ಯವಾಗಿಲ್ಲ. ಮಕ್ಕಳು ಇದರ ಅಡಿಯಲ್ಲಿ ಶಾಲೆಗೆ ಹೋಗಿ ಬರುತ್ತಿದ್ದು, ಕಿಡಗೇಡಿ ಮಕ್ಕಳು ಏನಾದರೂ ಅವಾಂತರ ಸೃಷ್ಟಿಸುವ ಆತಂಕ ಪಾಲಕರದ್ದು ಆಗಿದೆ.
ಇದನ್ನೂ ಓದಿ : ರಾಜ್ಯದ ಜನ ಕಾಂಗ್ರೆಸ್ ನ್ನು ಸಂಪೂರ್ಣವಾಗಿ ತಿರಸ್ಕರಿಸುವ ದಿನ ದೂರವಿಲ್ಲ: ಆರ್.ಅಶೋಕ್
ಈ ಕುರಿತು ಜೆಸ್ಕಾಂ ಎಇಇ ಮಂಜುನಾಥ ಪ್ರತಿಕ್ರಿಯಿಸಿ ಬುಧವಾರ ಶಾಲೆಗೆ ಶಾಖಾಧಿಕಾರಿಯನ್ನು ವಾಸ್ತವ ಸ್ಥಿತಿ ಪರಿಶೀಲಿಸಲು ಸೂಚಿಸಿ ವಿದ್ಯುತ್ ಕಂಬ ತೆರವಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ