ಭಟ್ಕಳ : ಹುಚ್ಚು ನಾಯಿ ಕಡಿದು ಐದು ಮಂದಿಗೆ ಗಾಯ
ಪುರಸಭೆಯ ಸಿಬ್ಬಂದಿಗಳಿಂದ ನಾಯಿ ಸೆರೆ
Team Udayavani, Jun 14, 2022, 9:14 PM IST
ಭಟ್ಕಳ : ನಗರದ ಹಳೆ ಬಸ್ ನಿಲ್ದಾಣದ ಬಳಿಯ ಮೀನು ಮತ್ತು ತರಕಾರಿ ಮಾರುಕಟ್ಟೆಯ ಹೊರ ಭಾಗದಲ್ಲಿ ಹುಚ್ಚು ನಾಯಿಯೊಂದು ಐವರನ್ನು ಕಚ್ಚಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.
ಗಾಯಗೊಂಡ ನಾಲ್ವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಗಾಯಗೊಂಡವರನ್ನು ಕರಿಕಲ್ ನಿವಾಸಿ ಮಾದೇವ ಮೊಗೇರ (65), ಸಿದ್ದೀಕ್ ಸ್ಟ್ರೀಟ್ನ ಮುಹಮ್ಮದ್ ಯಾಸೀನ್ (42), ಹನೀಫಾಬಾದ್ನ ಮೌಲ್ವಿ ಅಬುಲ್ ಹಸನ್ ನದ್ವಿ (21) ಮೌಲ್ವಿ ಇಸ್ಮಾಯಿಲ್ ನದ್ವಿ (29) ಎಂದು ಗುರುತಿಸಲಾಗಿದ್ದು ಇನ್ನೋರ್ವ ಮಹಿಳೆಗೆ ಕೂಡಾ ಕಚ್ಚಿದ್ದು ಅವರ ಗುರುತು ಪತ್ತೆಯಾಗಿಲ್ಲ, ಚಿಕಿತ್ಸೆಗೂ ಕೂಡಾ ಸರಕಾರಿ ಆಸ್ಪತ್ರೆಗೆ ಬಂದಿಲ್ಲ ಎನ್ನಲಾಗಿದೆ.
ಸ್ಥಳದಲ್ಲಿದ್ದ ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ಮಾಜಿ ಪ್ರಧಾನ ಕಾರ್ಯದರ್ಶಿ ನಸೀಫ್ ಖಲೀಫಾ ನಾಯಿಯಿಂದ ದಾಳಿಗೊಳಗಾದವರನ್ನು ರಕ್ಷಿಸಿದರು ಎನ್ನಲಾಗಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪುರಸಭೆಯ ಸಿಬ್ಬಂದಿಗಳು ಹುಚ್ಚು ನಾಯಿಯನನ್ನು ಹಿಡಿಯುವಲ್ಲಿ ಯಶಸ್ವೀಯಾಗಿದ್ದಾರೆ ಎನ್ನಲಾಗಿದ್ದು ಜನರು ಆತಂಕದಿಂದ ದೂರಾದರು.
ಇದನ್ನೂ ಓದಿ : ಅಕ್ರಮ ಸಂಬಂಧ : ಪುರುಷ ಮತ್ತು ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
MUST WATCH
ಹೊಸ ಸೇರ್ಪಡೆ
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?
Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ
Gayatri Siddeshwar: “ರಾಹುಲ್ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’
B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್