ವಿಶ್ವದ ಎದುರು ಭಾರತ ಶಕ್ತಿಯಾಗಿ ಹೊರಹೊಮ್ಮುತ್ತಿದೆ : ಕ್ಯಾ| ಕಾರ್ಣಿಕ್‌


Team Udayavani, Jun 15, 2022, 12:52 AM IST

ವಿಶ್ವದ ಎದುರು ಭಾರತ ಶಕ್ತಿಯಾಗಿ ಹೊರಹೊಮ್ಮುತ್ತಿದೆ : ಕ್ಯಾ| ಕಾರ್ಣಿಕ್‌

ಮಂಗಳೂರು : 2014 ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಬಳಿಕ ದೇಶದಲ್ಲಿ ಸಾಂಸ್ಕೃತಿಕ ಪುನರುತ್ಥಾನ, ರಾಷ್ಟ್ರೀಯ ಮೌಲ್ಯಗಳ ಪ್ರತಿಬಿಂಬ, ದೇಶದ ಕಾನೂನಿನಲ್ಲಿ ಅಗತ್ಯ ಬದಲಾವಣೆ ಸೇರಿದಂತೆ ಅನೇಕ ನಿರ್ಧಾರಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿದೆ. ವಿಶ್ವದ ಎದುರು ಭಾರತ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ| ಗಣೇಶ್‌ ಕಾರ್ಣಿಕ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕೋವಿಡ್‌ ಬಳಿಕ ಜಗತ್ತಿನಲ್ಲಿ ಆರ್ಥಿಕ ವ್ಯತ್ಯಯಗಳು ಸಂಭವಿಸಿದಾಗ ಭಾರತದ ಜಿಡಿಪಿ, ಕರೆನ್ಸಿ ಇತರ ದೇಶಗಳಿಗೆ ಹೋಲಿಸಿದರೆ ಅಷ್ಟಾಗಿ ಅಪಮೌಲ್ಯವಾಗಿಲ್ಲ. ಅಮೆರಿಕದಲ್ಲಿ ಕೂಡ ಹಣದುಬ್ಬರ ಪರಿಸ್ಥಿತಿ ಉಂಟಾಗಿದೆ ಎಂದರು.

ಉಕ್ರೇನ್‌ ಯುದ್ಧ ಸಂದರ್ಭ ಭಾರತ ರಾಜತಾಂತ್ರಿಕವಾಗಿ ನಿಲುವು ತೆಗೆದುಕೊಂಡಿದೆ. ಭಾರತದ ಡಿಜಿಪಿ ಶೇ. 8.7ರ ಬೆಳವಣಿಗೆ ಬಗ್ಗೆ ವಿಶ್ವ ಹಣಕಾಸು ಸಂಸ್ಥೆ ಹೇಳಿದೆ. ಭಾರತದಲ್ಲಿ ನಿರುದ್ಯೋಗ ಬೃಹತ್‌ ಸಂಖ್ಯೆಯಲ್ಲಿ ಇರುತ್ತಿದ್ದರೆ, ಅಗಾಧ ಪ್ರಮಾಣದಲ್ಲಿ ಜಿಎಸ್‌ಟಿ ಸಂಗ್ರಹ ಹೇಗೆ ಸಾಧ್ಯ? ಇನ್ನೂ ಸಾಕಷ್ಟು ಉದ್ಯೋಗ ಸೃಷ್ಟಿಯಾಗಬೇಕಾಗಿದ್ದು, ಅದಕ್ಕಾಗಿ ಕೌಶಲ ಸುಧಾರಣೆಯಾಗಬೇಕಿದೆ, ಅದಕ್ಕೆ ಪೂರಕವಾಗಿ ಸ್ಕಿಲ್‌ ಇಂಡಿಯಾ ಮಾದರಿಯ ಯೋಜನೆ ರೂಪಿಸಲಾಗಿದೆ ಎಂದರು.

ಪ್ರವಾದಿ ನಿಂದನೆ ಆರೋಪಕ್ಕೆ ಒಳಗಾದ ಬಿಜೆಪಿ ಮಾಜಿ ವಕ್ತಾರೆ ನೂಪುರ ಶರ್ಮಾ ಮಾಡಿರುವ ಪ್ರವಾದಿ ನಿಂದನೆಯಂತಹ ಘಟನೆ ನಡೆದಾಗ ಆ ಬಗ್ಗೆ ಕೇಂದ್ರ ಸರಕಾರವೇ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಅಂತಾರಾಷ್ಟ್ರೀಯ ಸ್ತರದಲ್ಲಿ ವಿವಾದ ತಲೆದೋರಿದ ಕಾರಣ ಪಕ್ಷ ಕೂಡ ನೂಪುರ ಶರ್ಮಾ ಅವರನ್ನು ಹುದ್ದೆಯಿಂದ ವಜಾಗೊಳಿಸುವ ತೀರ್ಮಾನ ಕೈಗೊಳ್ಳಬೇಕಾಯಿತು ಎಂದರು.

ಸಂವೇದನಾಶೀಲ ಸರಕಾರ
ಪ್ರಧಾನಿಯಾಗಿ ನರೇಂದ್ರ ಮೋದಿ 8 ವರ್ಷಗಳಲ್ಲಿ ಅಮೋಘ ಸಾಧನೆ ಮಾಡಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ಗಮನಾರ್ಹ ಸಾಧನೆ ಮಾಡುವ ಮೂಲಕ ಇದೊಂದು ಸಂವೇದನಾಶೀಲ ಸರಕಾರವಾಗಿದೆ. ಸ್ವತ್ಛ ಭಾರತ್‌, ಮನ್‌ಕಿ ಬಾತ್‌, ಆಂತರಿಕ ಭದ್ರತೆ, ಪಾರದರ್ಶಕತೆ, ಮೂಲಸೌಕರ್ಯ, ವಿದೇಶಾಂಗ ನೀತಿ, ಚೀನ ವಿರುದ್ಧ ಆಮದು ನೀತಿ, ಆತ್ಮನಿರ್ಭರ ಭಾರತ ಪರಿಕಲ್ಪನೆ, ಕೋವಿಡ್‌ ಲಸಿಕೆ ಪೂರೈಕೆ, ಗರೀಬ್‌ ಕಲ್ಯಾಣ್‌ ಯೋಜನೆ, ಕೃಷಿ ಆದಾಯ, ಹೊಸ ಶಿಕ್ಷಣ ನೀತಿ, ಎನ್‌ಆರ್‌ಸಿ, ಸಿಎಎ, ಜಾಗತಿಕ ಉತ್ಪಾದನಾ ಕೇಂದ್ರವಾಗಿಸಲು ಕೈಗೊಂಡ ಕ್ರಮಗಳು ಭಾರತದ ಬಗ್ಗೆ ಮೋದಿ ಅವರ ವಿಶ್ವಾಸ ನಾಯಕತ್ವದ ಪರಿಣಾಮಕ್ಕೆ ಸಾಕ್ಷಿಯಾಗಿದೆ. ಭ್ರಷ್ಟಾಚಾರ ರಹಿತವಾಗಿ, ಅಭಿವೃದ್ಧಿಯನ್ನು ಚುನಾವಣೆಯಲ್ಲಿ ಪ್ರಮುಖ ವಿಷಯವನ್ನಾಗಿ ಗೆಲ್ಲಲಾಗಿದೆ ಎಂದರು.
ಮುಡಾ ಅಧ್ಯಕ್ಷ ಹಾಗೂ ಬಿಜೆಪಿ ವಕ್ತಾರ ರವಿಶಂಕರ ಮಿಜಾರು, ರಂದೀಪ್‌ ಕಾಂಚನ್‌, ಸಂದೇಶ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.