ಮರಳಿದ ಕುಶ: ದುಬಾರೆಯಲ್ಲಿ ಹರ್ಷ


Team Udayavani, Jun 15, 2022, 1:18 AM IST

ಮರಳಿದ ಕುಶ: ದುಬಾರೆಯಲ್ಲಿ ಹರ್ಷ

ಮಡಿಕೇರಿ: ಕೃಷಿಕರಿಗೆ ಉಪಟಳ ನೀಡಿದ ಕಾರಣಕ್ಕೆ ಸೆರೆಯಾಗಿ ಕುಶನಾಗಿ ಮಾರ್ಪಟ್ಟು ಅನಂತರ ಪರಿಸರವಾದಿಗಳ ಒತ್ತಾಯಕ್ಕೆ ಮಣಿದು ಕಾಡು ಸೇರಿದ್ದ ಕಾಡಾನೆ ಮತ್ತೆ ಮರಳಿದೆ.

2018ರಲ್ಲಿ ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ಕೃಷಿಕರಿಗೆ ತೊಂದ‌ರೆ ನೀಡುತ್ತಿದ್ದ ಕಾಡಾನೆಯನ್ನು ಸೆರೆಹಿಡಿದು ದುಬಾರೆ ಸಾಕಾನೆ ಶಿಬಿರದಲ್ಲಿ ಪಳಗಿಸಿ ಕುಶ ಎಂದು ಹೆಸರಿಡ ಲಾಗಿತ್ತು. 2019ರಲ್ಲಿ ಮದವೇರಿದ ಕುಶ ಶಿಬಿರದಿಂದ ತಪ್ಪಿಸಿಕೊಂಡು ಅರಣ್ಯದೊಳಗೆ ಸೇರಿಕೊಂಡಿತ್ತು. ವರ್ಷ ಉರುಳಿದರೂ ಶಿಬಿರಕ್ಕೆ ಕಾಲಿಡಲಿಲ್ಲ.

ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿ ತಂಡೋಪತಂಡವಾಗಿ ಹುಡು ಕಾಡಿ ದಾಗ ಕಾಡಾನೆಗಳ ಹಿಂಡಿನಲ್ಲಿ ಕುಶ ಕಂಡು ಬಂದಿತ್ತು. ಅರಣ್ಯ ಸಿಬಂದಿ ಹರಸಾಹಸ ಪಟ್ಟು ಕುಶನನ್ನು ಮರಳಿ ಸೆರೆ ಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.

ಆದರೆ ರಾಷ್ಟ್ರೀಯ ಪರಿಸರವಾದಿಗಳು ವನ್ಯಜೀವಿ ಪ್ರೇಮದ ಕಾರಣ ನೀಡಿ ಮತ್ತು ಪಳಗಿಸುವ ಸಂದರ್ಭ ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿ ಕುಶನನ್ನು ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಬೇಕೆಂದು ಕಾನೂನಾತ್ಮಕ ಹೋರಾಟ ನಡೆಸಿ ಜಯಶಾಲಿಗಳಾಗಿದ್ದರು. ಅನಿವಾರ್ಯವಾಗಿ ಅರಣ್ಯ ಇಲಾಖೆ ಸಾಕಾನೆ ಕುಶನನ್ನು 2021 ಜೂನ್‌ ತಿಂಗಳಿನಲ್ಲಿ ಬಂಡೀಪುರ ಅರಣ್ಯಕ್ಕೆ ಬಿಟ್ಟು ಬಂದಿತ್ತು.

ಇದೀಗ 1 ವರ್ಷದ ಬಳಿಕ ಕುಶ ಮತ್ತೆ ದುಬಾರೆ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದಾನೆ. ಆತನಿಗೆ ಅಳವಡಿಸಿದ್ದ ರೇಡಿಯೋ ಕಾಲರ್‌ ನೀಡಿದ ಮಾಹಿತಿಯಾಧರಿಸಿ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದಾಗ ದುಬಾರೆ ಸಾಕಾನೆ ಶಿಬಿರದ ಸಮೀಪವೇ ಕುಶ 4ಕಾಡಾನೆ ಸಂಗಾತಿಗಳೊಂದಿಗೆ ಸ್ವತ್ಛಂದವಾಗಿರುವುದು ಕಂಡು ಬಂದಿದೆ.

ತಾನು ಪಳಗಿದ ಸಾಕಾನೆ ಶಿಬಿರದ ಮೇಲಿನ ಅಭಿಮಾನ ದಿಂದ ಸಾವಿರಾರು ಕಿ.ಮೀ. ದೂರ ಕ್ರಮಿಸಿ ಮತ್ತೆ ಕುಶ ದುಬಾರೆಗೆ ಮರಳಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ವಿಶ್ಲೇಷಿಸಿದ್ದಾರೆ. ಸುತ್ತಮುತ್ತಲ ಪ್ರಾಣಿ ಪ್ರಿಯರು ಕುಶನನ್ನು ಕಂಡು ಹರ್ಷಗೊಂಡಿದ್ದಾರೆ.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.