ಗ್ರಾಮೀಣ ಭಾಗದಲ್ಲೂ ಕಲುಷಿತ ನೀರಿನ ಭೀತಿ!


Team Udayavani, Jun 16, 2022, 5:34 PM IST

20water

ರಾಯಚೂರು: ನಗರದಲ್ಲಿ ಕಲುಷಿತ ನೀರು ಸೇವಿಸಿ ಸರಣಿ ಸಾವು ಸಂಭವಿಸುತ್ತಿರುವುದು ಗ್ರಾಮೀಣ ಭಾಗದ ಜನರ ನಿದ್ದೆಗೆಡಿಸಿದೆ. ಹಳ್ಳಿಗಳಲ್ಲೂ ಕೆಲವೆಡೆ ಅಶುದ್ಧ ನೀರೇ ಬರುತ್ತಿದ್ದು, ನಮಗೂ ವಾಂತಿ  ಬಂದರೆ ಏನು ಗತಿ ಎಂಬ ಭಯ ಶುರುವಾಗಿದೆ.

ತಾಲೂಕಿನ ಗೋನಾಲ ಗ್ರಾಮದಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದ್ದು, ಗ್ರಾಮದಲ್ಲೂ ವ್ಯಕ್ತಿಯೊಬ್ಬ ವಾಂತಿಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಜಾಗೀರ್‌ ವೆಂಕಟಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಈ ಗ್ರಾಮದ ಹತ್ತಿರ ಕೆರೆ ನಿರ್ಮಿಸಿ ಅಲ್ಲಿಂದ ಟ್ಯಾಂಕ್‌ ಮೂಲಕ ಮನೆ-ಮನೆಗೆ ನೀರು ತಲುಪಿಸಲಾಗುತ್ತಿದೆ. ಅಲ್ಲದೇ, ಈ ಕೆರೆಯಿಂದ ಪತ್ತೇಪುರ ಗ್ರಾಮಕ್ಕೂ ನೀರು ಪೂರೈಸಲಾಗುತ್ತಿದೆ.

ಗೋನಾಲ ಗ್ರಾಮದಲ್ಲಿ ಒಂದು ಸಾವಿರ ಜನಸಂಖ್ಯೆಯಿದ್ದು, ಒಂದು ಆರ್‌ಒ ಪ್ಲಾಂಟ್‌ ಅಳವಡಿಕೆ ಮಾಡಲಾಗಿದೆ. ಆದರೆ, ಇಲ್ಲಿ ಒಂದು ಕ್ಯಾನ್‌ಗೆ ಐದು ರೂ. ಕೊಡಬೇಕಿದೆ. ಬಡವರು, ಕೂಲಿ ಕಾರ್ಮಿಕರು ದುಡ್ಡು ಕೊಟ್ಟು ನೀರು ಖರೀದಿಸಲಾಗದೆ ಕೆರೆ ನೀರನ್ನೇ ಬಳಸುತ್ತಾರೆ.

ಕುಡಿಯಲು ಮಾತ್ರ ಆರ್‌ಒ ಪ್ಲಾಂಟ್‌ ನೀರು ತಂದರೂ ಅಡುಗೆಗೆ ಕೆರೆ ನೀರನ್ನೇ ಬಳಸುತ್ತಾರೆ. ಕೆರೆ ಬಳಿ ನೀರು ಶುದ್ಧೀಕರಣ ಘಟಕ ಇದ್ದರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ನೀರನ್ನು ಶುದ್ಧೀಕರಿಸದೇ ಹಾಗೆ ಬಿಡಲಾಗುತ್ತಿದೆ. ಈ ಕೆರೆಗೂ ತುಂಗಭದ್ರಾ ಕಾಲುವೆ ಮೂಲಕವೇ ನೀರು ಹರಿಸಲಾಗುತ್ತಿದೆ. ಈಗ ನೀರು ಹಳದಿ ಬಣ್ಣಕ್ಕೆ ತಿರುಗಿದ್ದು, ಅಂಥ ನೀರೇ ಮೂರು ದಿನಕ್ಕೊಮ್ಮೆ ಬಿಡಲಾಗುತ್ತಿದೆ. ಗ್ರಾಮದಲ್ಲಿ ನಾಲ್ವರು ಪಂಚಾಯಿತಿ ಸದಸ್ಯರಿದ್ದು, ಪಿಡಿಒ ಗಮನ ಸೆಳೆದರೂ ಅವರು ಸರಿಯಾಗಿ ಸ್ಪಂದಿಸುತ್ತಿಲ್ಲ. ತಾಂತ್ರಿಕ ಕಾರಣಗಳನ್ನು ಹೇಳುತ್ತಿದ್ದಾರೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ವಾಂತಿ ಭೇದಿ ಶುರು: ಗೋನಾಲ ಗ್ರಾಮದಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಈಗಾಗಲೇ ವೆಂಕಟೇಶ ಎನ್ನುವವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಬುಧವಾರ ಕೂಡ ಚಿಕ್ಕ ಮಗುವಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಕಲುಷಿತ ನೀರು ಸೇವನೆಯಿಂದ ದಿನೇದಿನೇ ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ಎಚ್ಚೆತ್ತುಕೊಳ್ಳಬೇಕಿದೆ ಸ್ಥಳೀಯ ಆಡಳಿತ

ನಗರದಲ್ಲಿ ಅಶುದ್ಧ ನೀರು ಪೂರೈಕೆಯಿಂದ ಸಾಕಷ್ಟು ಅವಾಂತರಗಳು ನಡೆಯುತ್ತಿದ್ದು, ಗ್ರಾಮೀಣ ಭಾಗದಲ್ಲೂ ಅಂಥ ಪರಿಸ್ಥಿತಿ ನಿರ್ಮಾಣವಾಗದಂತೆ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ. ಗ್ರಾಮೀಣ ಭಾಗದಲ್ಲಿ ಅನೇಕ ದಶಕಗಳಷ್ಟು ಹಳೆಯ ಓವರ್‌ ಹೆಡ್‌ ಟ್ಯಾಂಕ್‌ಗಳಿದ್ದು, ತುಂಗಭದ್ರಾ, ಕೃಷ್ಣಾ ನದಿ ಮೂಲಕವೇ ನೀರು ಪೂರೈಸಲಾಗುತ್ತಿದೆ. ಕೆಲ ದಿನಗಳ ಹಿಂದೆ ಗದಾರ್‌ ಗ್ರಾಮದಲ್ಲಿ ಓವರ್‌ ಹೆಡ್‌ ಟ್ಯಾಂಕ್‌ನಲ್ಲಿ ಏಳು ಕೋತಿಗಳು ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದವು. ರಾಯಚೂರಿನ ರಾಂಪುರ ನೀರು ಶುದ್ಧೀಕರಣ ಘಟಕದಲ್ಲಿ ಹಲ್ಲಿಗಳು ಸತ್ತು ಬಿದ್ದಿರುವುದು ಕಣ್ಣಿಗೆ ಬಿದ್ದಿವೆ. ಹೀಗಾಗಿ ಎಲ್ಲ ಟ್ಯಾಂಕ್‌ಗಳ ಸ್ವಚ್ಛತೆಗೆ ಆದ್ಯತೆ ನೀಡುವುದರ ಜತೆಗೆ ನೀರು ಶುದ್ಧೀಕರಣಕ್ಕೂ ಒತ್ತು ನೀಡಬೇಕಿದೆ.

ಗೋನಾಲ ಗ್ರಾಮದಲ್ಲಿ ಅಶುದ್ಧ ನೀರು ಪೂರೈಕೆ ವಿಚಾರ ಗಮನಕ್ಕೆ ಬಂದಿಲ್ಲ. ಅಲ್ಲಿನ ಕೆರೆ ನಿರ್ವಹಣೆ ವಿಚಾರವಾಗಿ ಟೆಂಡರ್‌ ಬೇರೆಯವರಿಗೆ ಆಗಿದೆ. ಗ್ರಾಮಸ್ಥರು ಆರ್‌ಒ ಪ್ಲಾಂಟ್‌ ನೀರು ಬಳಸುತ್ತಾರೆ. ಆದರೂ ಗ್ರಾಮಕ್ಕೆ ಭೇಟಿ ನೀಡಿ ಅಶುದ್ಧ ನೀರು ಪೂರೈಕೆ ಬಗ್ಗೆ ಕ್ರಮ ವಹಿಸಲಾಗುವುದು. –ಮಮತಾ, ಪಿಡಿಒ, ವೆಂಕಟಾಪುರ ಗ್ರಾಪಂ

ಕಳೆದ ಕೆಲ ದಿನಗಳಿಂದ ನಮ್ಮ ಊರಿಗೆ ಹಳದಿ ಬಣ್ಣಕ್ಕೆ ತಿರುಗಿದ ನೀರು ಪೂರೈಕೆಯಾಗುತ್ತಿದೆ. ಬಡ, ಕೂಲಿ ಕಾರ್ಮಿಕರು ದುಡ್ಡು ಕೊಟ್ಟು ನೀರು ಖರೀದಿಸಲಾಗದೆ ಇದೇ ನೀರು ಸೇವಿಸುತ್ತಿದ್ದಾರೆ. ಈಗಾಗಲೇ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಗ್ರಾಪಂಗೆ ದೂರಿದರೂ ಯಾವುದೇ ಕ್ರಮ ವಹಿಸುತ್ತಿಲ್ಲ. -ಸುಧಾಕರ ಗೋನಾಲ, ಗ್ರಾಮದ ಯುವಕ

ಟಾಪ್ ನ್ಯೂಸ್

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ

17

Baratang‌ Island: ಬಾರಾತಂಗ್‌ ಎಂಬ ಬೆರಗು

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

15

Crime: ರಾಡ್‌ನಿಂದ ಹಲ್ಲೆ ಮಾಡಿ ಪತ್ನಿಯ ಬರ್ಬರ ಹತ್ಯೆ; ಆರೋಪಿ ಪತಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ

17

Baratang‌ Island: ಬಾರಾತಂಗ್‌ ಎಂಬ ಬೆರಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.