ಧಾರಾಕಾರ ಮಳೆ : ಸವದತ್ತಿ ಯಲ್ಲಮ್ಮ ದೇವಸ್ಥಾನದ ಆವರಣದೊಳಗೆ ನುಗ್ಗಿದ ನೀರು, ಭಕ್ತರ ಪರದಾಟ

ಯಲ್ಲಮ್ಮನ ಗುಡ್ಡದಲ್ಲಿ ನೀರೋ ನೀರು...

Team Udayavani, Jun 16, 2022, 9:37 PM IST

savadatti

ಬೆಳಗಾವಿ : ಏಳುಕೊಳ್ಳದ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಗುರುವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಯಿಂದ ದೇವಸ್ಥಾನ ಪೌಳಿ(ಆವರಣ)ಗೆ ನುಗ್ಗಿದ ನೀರಿನಿಂದ ಭಕ್ತರು ಹಾಗೂ ಸಿಬ್ಬಂದಿ ಪರದಾಡುವಂತಾಯಿತು.

ರಭಸದ ಮಳೆಗೆ ಸವದತ್ತಿ ಯಲ್ಲಮ್ಮನ ದೇವಸ್ಥಾನದಲ್ಲಿ ನೀರು ಧಾರಾಕಾರವಾಗಿ ಹರಿದು ಬಂದಿತು. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಮಳೆ ಬಂದಿದ್ದರಿಂದ ಎಣ್ಣೆ ಹೊಂಡದಲ್ಲಿ ನೀರು ಮೊಣಕಾಲು ವರೆಗೂ ಹರಿದು ಬಂದು ಭಕ್ತರು ಆತಂಕಕ್ಕೀಡಾದರು.

ಗುಡ್ಡದಿಂದ ಏಕಾಏಕಿ ನೀರು ಬಂದಿದ್ದರಿಂದ ದೇವಸ್ಥಾನ ಮೆಟ್ಟಿಲುಗಳ ಮೇಲೆ ಜಲಪಾತದಂತೆ ನೀರು ಹರಿದು ಬಂದು ಭಕ್ತರು ಚೆಲ್ಲಾಪಿಲ್ಲಿಯಾದರು. ದರ್ಶನ ಪಡೆಯಲು ಭಕ್ತರು ಪರದಾಡಬೇಕಾಯಿತು. ಗುರುವಾರ ಭಕ್ತರ ಸಂಖ್ಯೆ ಕಡಿಮೆ ಇದ್ದಿದ್ದರಿಂದ ಜನದಟ್ಟಣೆ ಇರಲಿಲ್ಲ.

ದೇವಸ್ಥಾನದ ಒಳಗೆ ಹೋಗುವ ಪ್ರವೇಶ ದ್ವಾರದ ಹೊರ ಭಾಗದಲ್ಲಿ ಇತ್ತೀಚೆಗೆ ನಿರ್ಮಿಸಿರುವ ಸರದಿ ಸಾಲಿನ ಬ್ಯಾರಿಕೇಡ್ ಬಳಿಯೂ ನೀರು ಹೆಚ್ಚಾಗಿ ಬಂದಿತ್ತು. ಎಣ್ಣೆ ಹೊಂಡದ ಸುತ್ತ ನೀರು ಹರಿದು ಬರುತ್ತಿರುವ ದೃಶ್ಯ ನೋಡಿದರೆ ಮೈ ಜುಮ್ಮೆನ್ನುವಂತಿತ್ತು.

ಇದನ್ನೂ ಓದಿ : ದೇವನಹಳ್ಳಿ ಸಾವಿರಾರು ರೈತ ನಿಯೋಗದಿಂದ ಸಚಿವ ಮುರುಗೇಶ್ ನಿರಾಣಿ ಭೇಟಿ

ದೇವಸ್ಥಾನ ಆವರಣದಲ್ಲಿರುವ ಕೆಲವು ಡ್ರೈನೆಜ್‌ಗಳು ಬ್ಲಾಕ್ ಆಗಿದ್ದರಿಂದ ಮಳೆ ನೀರು ಹರಿಯಲು ಜಾಗ ಇರಲಿಲ್ಲ. ಪ್ಲಾಸ್ಟಿಕ್ ಸೇರಿದಂತೆ ಇತರೆ ತ್ಯಾಜ್ಯ ವಸ್ತುಗಳಿಂದ ಬ್ಲಾಕ್ ಆಗಿತ್ತು. ಹೀಗಾಗಿ ನೀರು ದೇವಸ್ಥಾನ ಪೌಳಿಯೊಳಗೆ ಹರಿದು ಬಂತು, ಕೂಡಲೇ ಸಿಬ್ಬಂದಿ ಆ ನೀರನ್ನು ಒಳಗಿನ ಡ್ರೈನೇಜ್‌ಗಳ ಮೂಲಕ ಹರಿದು ಹೋಗುವಂತೆ ವ್ಯವಸ್ಥೆ ಮಾಡಿದ್ದರಿಂದ ಯಾವುದೇ ಸಮಸ್ಯೆ ಆಗಲಿಲ್ಲ. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಮಳೆ ಆಯಿತು. ಮಳೆ ಕಡಿಮೆ ಆಗುತ್ತಿದ್ದಂತೆ ನೀರಿನ ರಭಸ ತುಸು ಇಳಿಕೆ ಆಯಿತು ಎಂದು ಸವದತ್ತಿ ಯಲ್ಲಮ್ಮ ದೇವಸ್ಥಾನ ಅಧೀಕ್ಷಕ ಅರವಿಂದ ಮಾಳಗೆ ಉದಯವಾಣಿಗೆ ತಿಳಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.