ಚಾರ್ಲಿ ಎಂಬ ಬೂಸ್ಟರ್‌ ಡೋಸ್‌: ಮತ್ತೆ ಥಿಯೇಟರ್‌ನತ್ತ ಜನ ಜನ ಕಾಂಚಾಣ

"ಕೆಜಿಎಫ್-2',"ಚಾರ್ಲಿ'ಯಿಂದ ಹೆಚ್ಚಾಯ್ತು ಸ್ಯಾಂಡಲ್‌ವುಡ್‌ ನಿರೀಕ್ಷೆ

Team Udayavani, Jun 17, 2022, 10:12 AM IST

ಚಾರ್ಲಿ ಎಂಬ ಬೂಸ್ಟರ್‌ ಡೋಸ್‌: ಮತ್ತೆ ಥಿಯೇಟರ್‌ನತ್ತ ಜನ ಜನ ಕಾಂಚಾಣ

ಜನ ಇನ್ನೂ ಕೆಜಿಎಫ್-2 ಮೂಡ್‌ನಿಂದ ಹೊರಬಂದಿಲ್ಲ. ಬೇರೆ ಯಾವ ಸಿನಿಮಾಕ್ಕೂ ಪ್ರೇಕ್ಷಕರು ಬರ್ತಾ ಇಲ್ಲ…’ -“ಕೆಜಿಎಫ್-2′ ಬಿಡುಗಡೆಯಾಗಿ ಭರ್ಜರಿ ಹಿಟ್‌ ಆದ ನಂತರ ಚಿತ್ರರಂಗದಲ್ಲಿ ಕೇಳಿಬಂದ ಮಾತಿದು. “ಕೆಜಿಎಫ್-2′ ನಂತಹ ಬಿಗ್‌ ಸ್ಟಾರ್‌, ಬಿಗ್‌ ಬಜೆಟ್‌, ಅದ್ಧೂರಿ ಮೇಕಿಂಗ್‌ ಸಿನಿಮಾ ನೋಡಿದ ಪ್ರೇಕ್ಷಕರು ಆ ನಂತರ ಬಂದ ಸಿನಿಮಾಗಳತ್ತ ಆಸಕ್ತಿ ತೋರಿಸುತ್ತಿಲ್ಲ.

ಯಾವುದೇ ಸಿನಿಮಾ ರಿಲೀಸ್‌ ಆದರೂ ಪ್ರೇಕ್ಷಕರ ಕೊರತೆ ಕಾಡುತ್ತಿದೆ ಎಂಬ ಅಳಲು ಸಿನಿಮಾ ಮಂದಿಯದ್ದಾಗಿತ್ತು. ಇದು ಸತ್ಯವೋ ಅಥವಾ ಸಿನಿಮಾ ಮಂದಿಯ ಲೆಕ್ಕಾಚಾರವೋ ಗೊತ್ತಿಲ್ಲ. ಆದರೆ, “ಕೆಜಿಎಫ್-2′ ನಂತರ ತೆರೆಕಂಡ 39ಕ್ಕೂ ಹೆಚ್ಚು ಸಿನಿಮಾಗಳಿಗೆ ಪ್ರೇಕ್ಷಕರ ಕೊರತೆ ಕಾಡಿದ್ದಂತೂ ಸುಳ್ಳಲ್ಲ. ಇದು ಮುಂದೆ ಬಿಡುಗಡೆಗೆ ಸಿದ್ಧವಿದ್ದ ಸಿನಿಮಾ ನಿರ್ಮಾಪಕರಲ್ಲಿ ಆತಂಕ ಮೂಡಿಸಿತ್ತು.  ಆದರೆ, “777 ಚಾರ್ಲಿ’ ಈಗ ಆ ಆತಂಕವನ್ನು ದೂರ ಮಾಡಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾದ ಈ ಚಿತ್ರ ಈಗ ಭರ್ಜರಿ ಹಿಟ್‌ ಆಗಿದೆ.

ಗಾಂಧಿನಗರದ ಸಿದ್ಧಸೂತ್ರಗಳನ್ನು ಬದಿಗಿಟ್ಟು, ಒಂದು ಶ್ವಾನ ಹಾಗೂ ಎಮೋಶನ್‌ನೊಂದಿಗೆ ಮಾಡಿದ ಸಿನಿಮಾವನ್ನು ಪ್ರೇಕ್ಷಕರು ಪ್ರೀತಿಯಿಂದ ಅಪ್ಪಿಕೊಂಡಿದ್ದಾರೆ. ಕೇವಲ ಸ್ಯಾಂಡಲ್‌ವುಡ್‌ ಅಷ್ಟೇ ಅಲ್ಲದೇ, ಪರಭಾಷಾ ಚಿತ್ರರಂಗದ ಮಂದಿ ಕೂಡಾ ಈ ಸಿನಿಮಾ ಬಗ್ಗೆ ಖುಷಿಯಿಂದ ಟ್ವೀಟ್‌ ಮಾಡುತ್ತಿದ್ದಾರೆ. ಇದು ಕೇವಲ “777 ಚಾರ್ಲಿ’ ತಂಡಕ್ಕಷ್ಟೇ ಅಲ್ಲ, ಇಡೀ ಸ್ಯಾಂಡಲ್‌ವುಡ್‌ ಗೆ, ಮುಂದೆ ರಿಲೀಸ್‌ಗೆ ಸಿದ್ಧವಿರುವ ನಿರ್ಮಾಪಕರಿಗೆ ಬೂಸ್ಟರ್‌ ಡೋಸ್‌ ಆಗಿದ್ದು ಸುಳಲ್ಲ. ಒಂದು ಸಿನಿಮಾದ ದೊಡ್ಡ ಮಟ್ಟದ ಗೆಲುವು ಕೇವಲ ಆಯಾ ತಂಡಕ್ಕಷ್ಟೇ ಲಾಭ ತಂದುಕೊಡುವುದಿಲ್ಲ. ಬದಲಾಗಿ ಇಡೀ ಚಿತ್ರರಂಗದ ನಂಬಿಕೆ, ಭರವಸೆಯಾಗುತ್ತದೆ. ಆ ನಿಟ್ಟಿನಲ್ಲಿ “ಕೆಜಿಎಫ್-2′ ಹಾಗೂ “777 ಚಾರ್ಲಿ’ ಚಿತ್ರಗಳ ಪಾತ್ರ ಮಹತ್ವದ್ದು. “ಕೆಜಿಎಫ್2′ ಪ್ಯಾನ್‌ ಇಂಡಿಯಾ ಹಾಗೂ ವರ್ಲ್ಡ್ ಸಿನಿಮಾ ಮಾರುಕಟ್ಟೆಯಲ್ಲಿ ಸ್ಯಾಂಡಲ್‌ವುಡ್‌ಗೆ ಒಂದು ಸ್ಟಾಂಡರ್ಡ್‌ ತಂದುಕೊಟ್ಟರೆ,

“777 ಚಾರ್ಲಿ’ ಸ್ಯಾಂಡಲ್‌ವುಡ್‌ ನಿರ್ಮಾಪಕರಿಗೆ ತಮ್ಮ ಸಿನಿಮಾ ಮೇಲೆ ಭರವಸೆ ಹೆಚ್ಚುವಂತೆ ಮಾಡಿದೆ. ಆತಂಕದಲ್ಲಿದ್ದ ನಿರ್ಮಾಪಕರು ಸದ್ಯ ಕನ್ನಡದಲ್ಲಿ 300ಕ್ಕೂ ಹೆಚ್ಚು ಸಿನಿಮಾಗಳು ಸೆನ್ಸಾರ್‌ ಆಗಿ ಬಿಡುಗಡೆಗೆ ರೆಡಿಯಾಗಿವೆ. ಆದರೆ, ಬಿಡುಗಡೆಯಾಗುತ್ತಿರುವ ಸಿನಿಮಾಗಳಿಗೆ ಪ್ರೇಕ್ಷಕರೇ ಬರುತ್ತಿಲ್ಲ ಎಂಬ ಭಯ ಮಾತ್ರ ನಿರ್ಮಾಪಕರನ್ನು ಜೋರಾಗಿಯೇ ಕಾಡಿತ್ತು. ಇದೇ ಕಾರಣದಿಂದ ಕೆಲವು ನಿರ್ಮಾಪಕರು ತಮ್ಮ ಸಿನಿಮಾದ ಬಿಡುಗಡೆಯನ್ನು ಕೂಡಾ ಮುಂದಕ್ಕೆ ಹಾಕಿದ್ದಾರೆ. ಆದರೆ, “777 ಚಾರ್ಲಿ’ ಮತ್ತೆ ನಿರ್ಮಾಪಕರ ಮೊಗದಲ್ಲಿ ನಗು ತಂದಿದೆ. ಹಿಟ್‌ ಆದ ಸಿನಿಮಾ ಯಾರದೇ ಆದರೂ, ಅದು ಕನ್ನಡ ಸಿನಿಮಾ ಹಿಟ್‌ ಆಗಿರುವುದು ಎಂಬ ಖುಷಿ ನಿರ್ಮಾಪಕರದು.

ಇದನ್ನೂ ಓದಿ:ಬಂದಿದೆ ನೋಡಿ ಹೊಸ ಮೊಬೈಲ್ ಸ್ಯಾಮ್ ‍ಸಂಗ್ ಗೆಲಾಕ್ಸಿ ಎಂ 53; ಹಿಡಿಯಲು ಹಗುರ, ಜೇಬಿಗೆ ಭಾರ!

ಕನ್ನಡ ಚಿತ್ರರಂಗದ ಮುಂಚೂಣಿ ನಿರ್ಮಾಪಕರೊಬ್ಬರು ಹೇಳುವಂತೆ, “ಯಾವ ಸಿನಿಮಾಕ್ಕೂ ಜನ ಬರುತ್ತಿಲ್ಲ ಎಂಬ ಸುದ್ದಿ ಕೇಳಿ ನನಗೆ ತುಂಬಾ ಬೇಸರವಾಗಿತ್ತು. ಚಿತ್ರರಂಗದಲ್ಲಿ ಏನಾಗುತ್ತಿದೆ ಎಂದು ಭಯಪಟ್ಟಿದ್ದೆ. ಆದರೆ, “777 ಚಾರ್ಲಿ’ ಚಿತ್ರದ ಕಲೆಕ್ಷನ್‌, ಪ್ರೇಕ್ಷಕರ ಪ್ರತಿಕ್ರಿಯೆ ನೋಡಿದಾಗ ನನಗೆ ಧೈರ್ಯ ಬಂದಿದೆ. ಇಂತಹ ಗೆಲುವು ಮತ್ತಷ್ಟು ಸಿನಿಮಾಗಳಿಗೆ ‌ಸ್ಪೂರ್ತಿಯಾಗುತ್ತದೆ. ನನ್ನಂತೆ ಹಲವು ನಿರ್ಮಾಪಕರು ಈ ಗೆಲುವಿನಿಂದ ಖುಷಿಯಾಗಿದ್ದಾರೆ’ ಎನ್ನುತ್ತಾರೆ.

ಸರತಿಯಲ್ಲಿ ಇನ್ನಷ್ಟು ನಿರೀಕ್ಷಿತ ಸಿನಿಮಾಗಳು ಸ್ಯಾಂಡಲ್‌ವುಡ್‌ನ‌ ಗೆಲುವಿನ ಪಯಣ ಇಲ್ಲಿಗೆ ಮುಗಿಯುವುದಿಲ್ಲ. ಮುಂದೆ ಮತ್ತಷ್ಟು ಭಿನ್ನ-ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಶಿವರಾಜ್‌ಕುಮಾರ್‌ ಅವರ “ಬೈರಾಗಿ’, ಸುದೀಪ್‌ ನಟನೆಯ “ವಿಕ್ರಾಂತ್‌ ರೋಣ’, ಗಣೇಶ್‌ “ಗಾಳಿಪಟ-2′, ಜಗ್ಗೇಶ್‌ “ತೋತಾಪುರಿ’, ಧನಂಜಯ್‌ “ಮಾನ್ಸೂನ್‌ ರಾಗ’, ಉಪೇಂದ್ರ “ಕಬj’ ಹೊಸಬರ “ಶುಗರ್‌ ಲೆಸ್‌’, “ವೆಡ್ಡಿಂಗ್‌ ಗಿಫ್ಟ್’, “ಸಪ್ತಸಾಗರದಾಚೆ ಎಲ್ಲೋ’,”ಲವ್‌ 360′, “ಕಾಂತಾರ’, “ಮಾರ್ಟಿನ್‌’, “ಕ್ರಾಂತಿ’.. ಹೀಗೆ ಲೆಕ್ಕ ಹಾಕುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಈ ಎಲ್ಲಾ ಸಿನಿಮಾಗಳು ಒಂದಲ್ಲ ಒಂದು ರೀತಿಯಲ್ಲಿ ನಿರೀಕ್ಷೆ ಹುಟ್ಟಿಸಿವೆ. ಈ ಸಿನಿಮಾಗಳು ಗೆಲುವು ಕೂಡಾ ಕನ್ನಡ ಚಿತ್ರರಂಗದ ಗೆಲುವಿನ ಓಟಕ್ಕೆ ಸಾಥ್‌ ನೀಡಲಿವೆ.

ಗೊಂದಲ ಮುಕ್ತ ರಿಲೀಸ್‌: ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಸಿನಿಮಾಗಳು ವಾರ ವಾರ ತೆರೆಕಾಣುತ್ತಿದ್ದರೂ ಯಾವುದೇ ಗೊಂದಲವಿಲ್ಲದೇ ಬಿಡುಗಡೆಯಾಗುತಿವೆ. ಕೆಲವು ವರ್ಷಗಳ ಹಿಂದೆ ರಿಲೀಸ್‌ಗೆ ಪೈಪೋಟಿ ಬಿದ್ದು, ಕೊನೆಗೆ ಅದು ಜಿದ್ದಿನ ರೂಪ ಪಡೆದು ಚಿತ್ರರಂಗದ ನೆಮ್ಮದಿ ಕೆಡಿಸುತ್ತಿತ್ತು. ಆದರೆ, ಸದ್ಯ ಆ ವಾತಾವರಣವಿಲ್ಲ. ಸ್ಟಾರ್‌ಗಳಿಂದ ಹಿಡಿದು ಹೊಸಬರವರೆಗೆ ಯಾವುದೇ ಗೊಂದಲವಿಲ್ಲದೇ ಸಿನಿಮಾ ಬಿಡುಗಡೆ ಮಾಡುತ್ತಿದ್ದಾರೆ. ಸ್ಟಾರ್‌ ಸಿನಿಮಾ ಬಿಡುಗಡೆಯಾಗುವ ವಾರ ಹೊಸಬರು ರಿಲೀಸ್‌ ಮಾಡದೇ, ಆ ನಂತರ ವಾರದಲ್ಲಿ ತಮ್ಮ ಸಿನಿಮಾ ಬಿಡುಗಡೆ ಮಾಡುತ್ತಾರೆ. ಉದಾಹರಣೆಗೆ ಜುಲೈ 01 ಶಿವಣ್ಣ “ಬೈರಾಗಿ’ ರಿಲೀಸ್‌ ಆಗುತ್ತಿರುವುದರಿಂದ ಆ ವಾರ ಹೊಸಬರ ದೂರ ಉಳಿದು, ಜುಲೈ 08ಕ್ಕೆ ತೆರೆಗೆ ಬರುತ್ತಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆ ಕೂಡಾ.

ಕಡಿಮೆಯಾಯ್ತು ಕೆ.ಜಿ.ರೋಡ್‌ ಕ್ರೇಜ್‌: ಕೆಲವು ವರ್ಷಗಳ ಹಿಂದೆ ಸಿನಿಮಾ ಮಂದಿಯಲ್ಲಿ ಒಂದು ನಂಬಿಕೆ ಇತ್ತು, ಕೆ.ಜಿ.ರಸ್ತೆಯ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್‌ ಮಾಡಿದರೆ ಮಾತ್ರ ಅದು “ಶಾಸ್ತ್ರೋಕ್ತ’ ಬಿಡುಗಡೆ ಎಂದು. ಅದೇ ಕಾರಣದಿಂದ ಆ ರಸ್ತೆಯ ಚಿತ್ರ ಮಂದಿರಗಳನ್ನು ಹಿಡಿಯಲು ಪೈಪೋಟಿಗೆ ಬೀಳುತ್ತಿದ್ದರು. ಆದರೆ, ಈಗ ನೀವು ಸೂಕ್ಷ್ಮವಾಗಿ ಗಮನಿಸಿದರೆ ಕೆ.ಜಿ.ರಸ್ತೆಯ ಕ್ರೇಜ್‌ ಕಡಿಮೆಯಾಗಿದೆ. ಚಿತ್ರರಂಗಕ್ಕೆ ಬರುವ ಹೊಸಬರು ಸಿಂಗಲ್‌ ಸ್ಕ್ರೀನ್‌ಗಿಂತ ಮಲ್ಟಿಪ್ಲೆಕ್ಸ್‌ ಕಡೆ ಹೆಚ್ಚಿನ ಗಮನ ಕೊಟ್ಟರೆ, ಸ್ಟಾರ್‌ ಸಿನಿಮಾಗಳು ಕೂಡಾ ತಮ್ಮ ಪ್ರಮುಖ ಚಿತ್ರಮಂದಿರವನ್ನಾಗಿ ಪ್ರಸನ್ನ, ನವರಂಗ, ವೀರೇಶ್‌… ಸೇರಿದಂತೆ ಇತರ ಚಿತ್ರಮಂದಿರಗಳತ್ತ ವಾಲಿವೆ. ಇದಕ್ಕೆ ಕಾರಣ ಕೆ.ಜಿ.ರಸ್ತೆಯಲ್ಲಿ ಕಡಿಮೆಯಾದ ಚಿತ್ರಮಂದಿರಗಳ ಸಂಖ್ಯೆ. ಕೆಲವು ವರ್ಷಗಳ ಹಿಂದೆ ಇದ್ದ ಸಾಗರ್‌, ತ್ರಿಭುವನ್‌ ಚಿತ್ರಮಂದಿರಗಳ ಜಾಗದಲ್ಲಿ ಬೇರೆ ಮಳಿಗೆ ತಲೆ ಎತ್ತಿದರೆ, ಒಂದೇ ಕ್ಯಾಂಪಸ್‌ನಲ್ಲಿರುವ ಸಂತೋಷ್‌, ನರ್ತಕಿ, ಸಪ್ನಾ ಚಿತ್ರಮಂದಿರಗಳು ಸದ್ಯ ಪ್ರದರ್ಶನ ನಿಲ್ಲಿಸಿವೆ. ಇನ್ನು, ಭೂಮಿಕಾ ಚಿತ್ರಮಂದಿರದಲ್ಲಿ ತೆಲುಗು ಸಿನಿಮಾಗಳು ಹೆಚ್ಚು ಬಿಡುಗಡೆಯಾದರೆ, ಉಳಿದ ತ್ರಿವೇಣಿ ಹಾಗೂ ಅನುಪಮ ಚಿತ್ರಮಂದಿರಗಳು ಕನ್ನಡ ಸಿನಿಮಾಗಳಿಗೆ ತಿಂಗಳಿಗೆ ಮುಂಚೆಯೇ ಬುಕ್‌ ಆಗಿರುತ್ತವೆ. ಈ ಚಿತ್ರಮಂದಿರಗಳು ಬಹು ಬೇಡಕೆಯನ್ನು ಪಡೆದುಕೊಂಡಿವೆ. ಈ ಎಲ್ಲಾ ಕಾರಣಗಳಿಂದ ಸಿನಿಮಾ ಮಂದಿ ಅನಿವಾರ್ಯವಾಗಿ ಕೆ.ಜಿ.ರೋಡ್‌ ಕ್ರೇಜ್‌ನಿಂದ ಮುಕ್ತರಾಗುತ್ತಿದ್ದಾರೆ. ಜೊತೆಗೆ ಮಲ್ಟಿಪ್ಲೆಕ್ಸ್‌ಗೆ ಪ್ರೇಕ್ಷಕರು ಕೂಡಾ ಒಗ್ಗಿಕೊಂಡಿರುವುದರಿಂದ ಯಾವುದೇ ಸಮಸ್ಯೆ ಇಲ್ಲದೇ ಸಿನಿಮಾಗಳು ಬಿಡುಗಡೆಯಾಗುತ್ತಿವೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.