ಭಾರತದ ಬೇಡಿಕೆಗಳಿಗೆ ಡಬ್ಲ್ಯುಟಿಒ ಸಮ್ಮತಿ; ಮೀನುಗಾರಿಕೆ,ಲಸಿಕೆ ಉತ್ಪಾದನೆ ಸೇರಿ ಹಲವು ಒಪ್ಪಂದ
Team Udayavani, Jun 18, 2022, 7:15 AM IST
ಜಿನೇವಾ: ಸತತ 5 ರಾತ್ರಿಗಳ ಸಂವಾದದ ಬಳಿಕ ಕೊನೆಗೂ ವಿಶ್ವ ವ್ಯಾಪಾರ ಸಂಸ್ಥೆ(ಡಬ್ಲ್ಯುಟಿಒ)
ಯ 164 ಸಚಿವರು ಭಾರತದ ಬೇಡಿಕೆಗಳಿಗೆ ಸಮ್ಮತಿಸಿದ್ದಾರೆ. ಅತಿಯಾದ ಮೀನುಗಾರಿಕೆಗೆ ತಡೆ, ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಕೊರೊನಾ ಲಸಿಕೆಗಳ ಉತ್ಪಾದನೆ ಹೆಚ್ಚಳ ಮತ್ತು 27 ವರ್ಷಗಳಷ್ಟು ಹಳೆಯ ವ್ಯಾಪಾರ ಸಂಸ್ಥೆಯಲ್ಲಿ ಸುಧಾರಣೆ ಸೇರಿದಂತೆ ಕೆಲವು ಮಹತ್ವದ ನಿರ್ಧಾರಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಮೂಲಕ ನಾಲ್ಕೂವರೆ ವರ್ಷಗಳ ಬಳಿಕ ನಡೆದ ಮೊದಲ ಸಚಿವರ ಸಮ್ಮೇಳನವು ಸಮಾಪ್ತಿಯಾಗಿದೆ.
ಅಕ್ರಮ, ಅನಿಯಂತ್ರಿತ ಮೀನುಗಾರಿಕೆಗೆ ನಿರ್ಬಂಧ, ವಿಶ್ವದ ಸಾಗರಗಳಲ್ಲಿ ಅತಿಯಾದ ಮೀನುಗಾರಿಕೆಗೆ ತಡೆ, ಮೀನುಗಾರಿಕಾ ಕ್ಷೇತ್ರದಲ್ಲಿ ಸರ್ಕಾರಿ ಸಬ್ಸಿಡಿಗೆ ಮತ್ತು ಅತಿಯಾದ ಆಪರೇಟರ್ಗಳಿಗೆ ನಿಯಂತ್ರಣ ಹೇರುವ ಒಪ್ಪಂದಗಳನ್ನು ಕೈಗೊಳ್ಳಲಾಗಿದೆ.
ಇದು ಮೀನುಗಾರಿಕೆಯನ್ನು ಅವಲಂಬಿಸಿರುವ 260 ದಶಲಕ್ಷ ಮಂದಿಯ ಜೀವನೋಪಾಯಕ್ಕೆ ಸಂಬಂಧಿಸಿದ ವಿಚಾರವಾಗಿರುವ ಕಾರಣ ಒಕ್ಕೊರಲಿನಿಂದ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಡಬ್ಲ್ಯುಟಿಒ ಮುಖ್ಯಸ್ಥ ಒಕೋಂಜೋ ಇವಿಯಾಲಾ ಹೇಳಿದ್ದಾರೆ.
ವಿಶ್ವಸಂಸ್ಥೆಯ ವಿಶ್ವ ಆಹಾರ ಯೋಜನೆಯ ಮೇಲೆ ಹೇರಿರುವ ರಫ್ತು ನಿರ್ಬಂಧವನ್ನು ವಾಪಸ್ ಪಡೆಯಲು ಕೂಡ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಭಾರತಕ್ಕೆ ಶೇ.100ರ ಯಶಸ್ಸು: ಗೋಯಲ್
ದೀರ್ಘಕಾಲದಿಂದ ನನೆಗುದಿಗೆ ಬಿದ್ದಿದ್ದ ಅಂಶಗಳಲ್ಲಿ ಪ್ರಗತಿ ಸಾಧಿಸಲಾಗಿದ್ದು, ಈ ಬಾರಿಯ ಸಮ್ಮೇಳನದಲ್ಲಿ ಭಾರತಕ್ಕೆ ಶೇ.100ರಷ್ಟು ಯಶಸ್ಸು ದೊರೆತಿದೆ. ಕಳೆದ ಹಲವಾರು ವರ್ಷಗಳಿಂದೀಚೆಗೆ ನಡೆದ ಯಶಸ್ವಿ ಸಭೆ ಇದಾದಿದ್ದು, ಸಕಾರಾತ್ಮಕ ಫಲಿತಾಂಶ ಲಭ್ಯವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಡಬ್ಲ್ಯುಟಿಒ ಒಪ್ಪಂದದಲ್ಲಿ ಭಾರತವು ಜಾಗತಿಕ ನಾಯಕನ ಪಾತ್ರ ವಹಿಸಿತ್ತು ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!
Microsoft ಚಿಂತನೆ : ಚೀನದಿಂದ 800 ನೌಕರರ ವರ್ಗ
27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್
Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು
Slovak PM: ದುಷ್ಕರ್ಮಿಯಿಂದ ಸ್ಲೊವಾಕ್ ಪ್ರಧಾನಿ ರಾಬರ್ಟ್ ಮೇಲೆ ಗುಂಡಿನ ದಾಳಿ…
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್