ಬಾಲಿವುಡ್ ದಂತಕಥೆ ಬಿ.ಆರ್.ಛೋಪ್ರಾ ಜುಹು ಬಂಗ್ಲೆ 183 ಕೋಟಿ ರೂಪಾಯಿಗೆ ಮಾರಾಟ
ರಹೇಜಾ ಕಾರ್ಪ್ ಐಶಾರಾಮಿ ವಸತಿ ಸಮುಚ್ಛಯ ನಿರ್ಮಿಸುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.
Team Udayavani, Jun 18, 2022, 11:58 AM IST
ಮುಂಬಯಿ: ಬಾಲಿವುಡ್ ನ ದಂತಕಥೆ ನಿರ್ಮಾಪಕ, ನಿರ್ದೇಶಕ ಬಿಆರ್ (ಬಲ್ ದೇವ್ ರಾಜ್) ಛೋಪ್ರಾ ಅವರ ಮುಂಬೈಯ ಜುಹುವಿನಲ್ಲಿರುವ ಬಂಗ್ಲೆಯನ್ನು ಅಂದಾಜು 183 ಕೋಟಿ ರೂಪಾಯಿ ಮಾರಾಟ ಮಾಡಲಾಗಿದೆ ಎಂದು ಎಕಾನಾಮಿಕ್ಸ್ ಟೈಮ್ಸ್ ವರದಿ ಮಾಡಿದೆ.
ಇದನ್ನೂ ಓದಿ:ಪಿಯುಸಿ ಫಲಿತಾಂಶ: ದ.ಕನ್ನಡ ಪ್ರಥಮ, ಉಡುಪಿ ದ್ವಿತೀಯ; ಇಲ್ಲಿದೆ ಜಿಲ್ಲಾವಾರು ಫಲಿತಾಂಶ
ವಾಣಿಜ್ಯ ನಗರಿಯ ಪ್ರಸಿದ್ಧ ರಿಯಲ್ ಎಸ್ಟೇಟ್ ಡೆವಲಪರ್ ಕೆ.ರಹೇಜಾ ಕಾರ್ಪ್ ಛೋಪ್ರಾ ಅವರ 25,000 ಚದರ ಅಡಿ ವಿಸ್ತೀರ್ಣದ ಮನೆಯನ್ನು ಖರೀದಿಸಿದೆ. ದಿವಂಗತ ಬಿ.ಆರ್ ಛೋಪ್ರಾ ಅವರ ಸೊಸೆ ರೇಣು ರವಿ ಛೋಪ್ರಾ (ರವಿ ಛೋಪ್ರಾ ಪತ್ನಿ) ಅವರಿಂದ ಮನೆಯನ್ನು ಖರೀದಿಸಲಾಗಿದೆ ಎಂದು ವರದಿ ವಿವರಿಸಿದೆ.
ಎಕಾನಾಮಿಕ್ಸ್ ಟೈಮ್ಸ್ ವರದಿ ಪ್ರಕಾರ, ಭೂಮಿ ಮತ್ತು ಮನೆ ಸೇರಿದಂತೆ 182.76 ಕೋಟಿ ರೂಪಾಯಿ ಹಣ ಪಾವತಿಸಲಾಗಿದ್ದು, ಇದರಲ್ಲಿ ರಿಜಿಸ್ಟ್ರೇಶನ್ ನ 11 ಕೋಟಿ ರೂಪಾಯಿ ಮೊತ್ತವೂ ಸೇರಿರುವುದಾಗಿ ವರದಿ ತಿಳಿಸಿದೆ.
ಸ್ವಾಧೀನಪಡಿಸಿಕೊಂಡ ಆಸ್ತಿಯಲ್ಲಿ ಕೆ.ರಹೇಜಾ ಕಾರ್ಪ್ ಐಶಾರಾಮಿ ವಸತಿ ಸಮುಚ್ಛಯ ನಿರ್ಮಿಸುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ. ಬಿ.ಆರ್ ಛೋಪ್ರಾ ಅವರು ಬಾಲಿವುಡ್ ನಲ್ಲಿ ನಯಾ ದೌರ್ (1957), ಸಾಧನಾ (1958), ಕಾನೂನ್ 91961), ಗುಮ್ರಾಹ್ (1963), ಇನ್ಸಾಫ್ ಕಾ ತಾರಾಝ್ (1980), ನಿಕಾಹ್ (1982), ಅವಾಮ್ (1987) ಸೇರಿದಂತೆ ಹಲವಾರು ಯಶಸ್ವಿ ಸಿನಿಮಾಗಳನ್ನು ಕೊಟ್ಟ ಹೆಗ್ಗಳಿಕೆ ಅವರದ್ದಾಗಿದೆ.
ಬಳಿಕ ಬಿ.ಆರ್. ಛೋಪ್ರಾ ಅವರು 1988ರಲ್ಲಿ ಮಹಾಭಾರತ ಟಿವಿ ಸೀರಿಯಲ್ ಮೂಲಕ ಜನಪ್ರಿಯರಾಗುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಬಿ.ಆರ್. ಛೋಪ್ರಾ ಅವರಿಗೆ ಸಿನಿಮಾರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದರು. 1998ರಲ್ಲಿ ಪ್ರತಿಷ್ಠಿತ ಪದ್ಮಭೂಷಣ್ ಪ್ರಶಸ್ತಿ ಕೂಡಾ ಇವರ ಮುಡಿಗೇರಿತ್ತು. 2008, ನವೆಂಬರ್ 5ರಂದು ಛೋಪ್ರಾ ನಿಧನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!