ತಂತ್ರಜ್ಞಾನ ಅಳವಡಿಕೆ ಜ್ಞಾನಾರ್ಜನೆಗೆ ಸಹಕಾರಿ

ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತೇವೆ

Team Udayavani, Jun 18, 2022, 3:12 PM IST

ತಂತ್ರಜ್ಞಾನ ಅಳವಡಿಕೆ ಜ್ಞಾನಾರ್ಜನೆಗೆ ಸಹಕಾರಿ

ನೆಲಮಂಗಲ: ಆಧುನಿಕತೆಯ ಪ್ರಭಾವದಿಂದ ಕಲಿಕೆಯ ಸಾಧನ ಸರಳವಾಗುತ್ತಿವೆ. ಅಂಗೈನಲ್ಲೇ ವಿಶ್ವದ ಸಮಾಚಾರ ತಿಳಿಯಬಹುದಾಗಿದೆ. ಯುವ ಸಮುದಾಯದ ಜ್ಞಾನಾರ್ಜನೆಗೆ ಗ್ರಾಪಂಗಳಲ್ಲಿ ತಂತ್ರಜ್ಞಾನದ ಸಹಕಾರದಿಂದ ಡಿಜಿಟಲ್‌ ಗ್ರಂಥಾಲಯಗಳು ಸಹಕಾರಿಯಾಗಲಿವೆ ಎಂದು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಎಲ್‌. ಮೋಹನ್‌ ಕುಮಾರ್‌ ಹೇಳಿದರು.

ತಾಲೂಕಿನ ತ್ಯಾಮಗೊಂಡ್ಲು ಗ್ರಾಪಂ ಹಾಗೂ ಎಲ್‌ಎಂ ವಿಂಡ್‌ ಪವರ್‌ನ ಸಿಎಸ್‌ಆರ್‌ ಅನುದಾನದಡಿಯಲ್ಲಿ ನಿರ್ಮಿಸಲಾಗಿರುವ ಡಿಜಿಟಲ್‌ ಗ್ರಂಥಾಲಯ ಹಾಗೂ ಸಮುದಾಯ ಸಂಪನ್ಮೂಲ ಕೇಂದ್ರ, ಸಮುದಾಯ ಶೌಚಾಲಯ ಮತ್ತು ರಾಜೀವ್‌ ಗಾಂಧಿ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಅತಿಯಾಗುತ್ತಿರುವ ತಂತ್ರಜ್ಞಾನಕ್ಕೆ ಮಾರು ಹೋಗಿರುವ ಯುವ ಸಮುದಾಯಗಳು ಇಂದು ಮೊಬೈಲ್‌ ಮತ್ತು ಇತರೆ ದುಶ್ಚಟಗಳಿಗೆ ಹೆಚ್ಚು ದಾಸರಾಗುತ್ತಿದ್ದಾರೆ. ಪೋಷಕರು ಮಕ್ಕಳ ಮೇಲೆ ಗಮನಹರಿಸಬೇಕು ಎಂದರು.

ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕಾಸ್ತಕಿ ಹೆಚ್ಚಾಗಿದ್ದು, ಗ್ರಾಪಂಗಳಲ್ಲಿ ಲಭ್ಯವಿರುವ ಗ್ರಂಥಾಲಯಗಳು ಅವರ ಕಲಿಕೆಗೆ ಮತ್ತಷ್ಟು ಬಲ ತುಂಬುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.

ಡಿಜಿಟಲ್‌ ಗ್ರಂಥಾಲಯ ಸ್ಥಾಪನೆ: ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ಉಪನಿರ್ದೇಶಕ ದಿವಾಕರ್‌ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ 68 ಗ್ರಾಪಂಗಳಲ್ಲಿ ಡಿಜಿಟಲ್‌ ಗ್ರಂಥಾಲಯ ಸ್ಥಾಪನೆ ಮಾಡಲಾಗಿದ್ದು, ಸ್ಥಳೀಯ ಕಂಪನಿ ಎಲ್‌ಎಂನ ಸಿಎಸ್‌ಆರ್‌ ಅನುದಾನದ 17 ಲಕ್ಷ ರೂ. ವೆಚ್ಚದಲ್ಲಿ ಉತ್ತಮ ಲೈಬ್ರರಿ ನಿರ್ಮಾಣ  ವಾಗಿದೆ. ಸುತ್ತಮುತ್ತಲಿನ ಮೂರು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ 10 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಮತ್ತು 63 ಸಾವಿರ ಮ್ಯಾಗ್‌ಜಿನ್‌ ಉಚಿತವಾಗಿ ಪಡೆಯಬಹುದುದಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಗ್ರಾಪಂನಲ್ಲೂ ಡಿಜಿಟಲ್‌ ಗ್ರಂಥಾಲಯ ಸ್ಥಾಪಿಸಲಾಗುತ್ತದೆ ಎಂದರು.

ಕುಡಿಯುವ ನೀರಿನ ಘಟಕ: ಎಲ್‌ಎಂ ವಿಂಡ್‌ ಪವರ್‌ನ ಹಿರಿಯ ನಿರ್ದೇಶಕ ರಾಜೇಶ್‌ ಲೋಬೋ ಮಾತನಾಡಿ, ಕಂಪನಿಯ ಸಿಎಸ್‌ಆರ್‌ ಅನುದಾನದಲ್ಲಿ ಸುತ್ತಮುತ್ತಲಿನ ಗ್ರಾಮದ ಶಾಲೆಗಳಿಗೆ ಕುಡಿಯುವ ನೀರಿನ ಘಟಕ, ಗ್ರಂಥಾಲಯ, ಗ್ರಾಮಗಳಿಗೆ ನೀರಿನ ಪೂರೈಕೆ, ದಾಬಸ್‌ಪೇಟೆ ಭಾಗದ ಕೆರೆಯನ್ನು ಹೂಳು ಎತ್ತುವ ಮೂಲಕ ಉತ್ತಮವಾಗಿ ನಿರ್ವಹಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತೇವೆ ಎಂದರು.

ಗ್ರಾಪಂ ಆಡಳಿತಾಧಿಕಾರಿ ಎ. ನಟರಾಜು, ಪಿಡಿಒ ರೇಖಾ, ಜಿಪಂ ಮಾಜಿ ಸದಸ್ಯ ಕುಮಾರಸ್ವಾಮಿ ಮೊದಲಿಯರ್‌, ಹೊನ್ನಸಿದ್ದಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಹನುಮಂತರಾಜು, ಟಿಎಪಿಎಂಸಿ ಅಧ್ಯಕ್ಷ ಗುರುಪ್ರಕಾಶ್‌, ಗುತ್ತಿಗೆದಾರ ಮಹಿಮಣ್ಣ, ತಾಪಂ ಮಾಜಿ ಅಧ್ಯಕ್ಷ ರಂಗಸ್ವಾಮಿ, ಎನ್‌ಡಿಎ ಸದಸ್ಯ ಜಗದೀಶ್‌ ಪ್ರಸಾದ್‌, ಸುಜಿತ್‌ ಕುಮಾರ್‌, ಆಂಜನಮೂರ್ತಿ, ಆರೀಪ್‌, ಹಿರಿಯ ನಿರ್ದೇಶಕ ಮಹದೇವ ಮೂರ್ತಿ, ಗುರುಪ್ರಸಾದ್‌, ಸಿಬ್ಬಂದಿ ಸೌಮ್ಯ, ರಾಧಿಕಾ, ಗ್ರಾಪಮ ಕಾರ್ಯದರ್ಶಿ
ಸೌಭಾಗ್ಯ, ಗಂಗಧರ್‌, ಶ್ರೀನಿವಾಸ್‌, ರಂಗನಾಥ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.