ನಿರಂಜನ್ ಸುಧೀಂದ್ರ ಚೊಚ್ಚಲ ಚಿತ್ರ ‘ನಮ್ಮ ಹುಡುಗರು’ ಜು.8ಕ್ಕೆ ತೆರೆಗೆ
Team Udayavani, Jun 18, 2022, 3:30 PM IST
ರಿಯಲ್ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರ “ನಮ್ಮ ಹುಡುಗರು’ ತೆರೆಗೆ ಬರೋದಕ್ಕೆ ಸಿದ್ಧವಾಗುತ್ತಿದೆ. ಈಗಾಗಲೇ “ನಮ್ಮ ಹುಡುಗರು’ ಚಿತ್ರದ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ಜು. 8ಕ್ಕೆ ಚಿತ್ರವನ್ನು ತೆರೆಗೆ ತರಲು ಯೋಚನೆ ಹಾಕಿಕೊಂಡಿದೆ. ಇತ್ತೀಚೆಗೆ ಚಿತ್ರದ ಹಾಡುಗಳು ಮತ್ತು ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಚಿತ್ರದ ಬಗ್ಗೆ ಒಂದಷ್ಟು ಮಾತನಾಡಿತು.
ಮೊದಲಿಗೆ ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ನಿರಂಜನ್ ಸುಧೀಂದ್ರ, “ಹೀರೋ ಆಗಿ ನನಗೆ “ನಮ್ಮ ಹುಡುಗರು’ ಮೊದಲ ಸಿನಿಮಾ. ಈ ಸಿನಿಮಾದಲ್ಲಿ ನಾನು ಭರಮ ಎಂಬ ಮಂಡ್ಯದ ಕಡೆಯು ಮುಗ್ಧ ಹುಡುಗನಾಗಿ ಕಾಣಿಸಿಕೊಂಡಿ ದ್ದೇನೆ. ಕಂಪ್ಲೀಟ್ ಹಳ್ಳಿಯ ಸೊಗಡಿರುವ ಇನೋಸೆಂಟ್ ಲವ್ಸ್ಟೋರಿ, ಫ್ಯಾಮಿಲಿ
ಡ್ರಾಮಾ ಇರುವಂತಹ ಸಿನಿಮಾ. ಸುಮಾರು ಮೂರುವರೆ ವರ್ಷದ ಹಿಂದೆ ಶುರುವಾದ ಸಿನಿಮಾ ಈಗ ರಿಲೀಸ್ ಹಂತಕ್ಕೆ ಬಂದಿದೆ. ಈಗಾಗಲೇ ಸಿನಿಮಾಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ರಿಲೀಸ್ಗೆ ಬೇಕಾದ ಸಿದ್ಧತೆಮಾಡಿಕೊಳ್ಳುತ್ತಿದ್ದೇವೆ’ ಎಂದರು.
ನವ ನಿರ್ದೇಶಕ ಹೆಚ್. ಬಿ ಸಿದ್ಧು “ನಮ್ಮ ಹುಡುಗರು’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ಸಿದ್ಧು, “ಸಿನಿಮಾದ ಹೆಸರೇ ಹೇಳುವಂತೆ ಇದು ನಮ್ಮ ಹುಡುಗರ ಕಥೆ. ಪ್ರತಿಯೊಬ್ಬರ ಜೀವನದಲ್ಲೂ ನಡೆದ, ನೋಡಿದ ಘಟನೆಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಒಂದು ಸುಳ್ಳಿನಿಂದ ಆಗುವ ಅನಾಹುತದ ಬಗ್ಗೆ ಸಿನಿಮಾವಿದೆ. ಹಾಗಾಗಿ ಎಲ್ಲರಿಗೂ ಈ ಸಿನಿಮಾ ಕನೆಕ್ಟ್ ಆಗುತ್ತದೆ. “ನಮ್ಮ ಹುಡುಗರು’ ಅನ್ನೋದೆ ಏನೋ ಒಂದು ಆಶಾವಾದ, ಆತ್ಮೀಯತೆ, ಭರವಸೆ, ಬೆಂಬಲ ಎಲ್ಲವನ್ನೂ ಕೊಡುತ್ತದೆ. ಹಾಗಾಗಿ ಸಿನಿಮಾದ ಟೈಟಲ್ನ “ನಮ್ಮ ಹುಡುಗರು’ ಅಂಥ ಇಟ್ಟಿದ್ದೇವೆ. ಸದ್ಯ ಸಿನಿಮಾದ ಪ್ರಮೋಶನ್ ನಡೆಯುತ್ತಿದ್ದು, ಇದೇ ಜುಲೈನಲ್ಲಿ ಸಿನಿಮಾ ರಿಲೀಸ್ ಆಗಲಿದೆ’ ಎಂದರು.
ಚಿತ್ರದ ನಾಯಕಿ ರಾಧ್ಯಾ, ನಿರ್ಮಾಪಕ ಕೆ.ಕೆ ಅಶ್ರಫ್ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಸಂಗೀತ ನಿರ್ದೇಶಕ ಅಭಿಮಾನ್ ರಾಯ್ ಹಾಡುಗಳ ಬಗ್ಗೆ ಮಾತನಾಡಿದರು.
ಇನ್ನು “ನಮ್ಮ ಹುಡುಗರು’ ಚಿತ್ರದಲ್ಲಿ ಶರತ್ ಲೋಹಿತಾಶ್ವ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್, ಆಲ್ ಓಕೆ ಅಲೋಕ್ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ