ಸುಳ್ಯ, ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ಕೃಷಿ ಭೂಮಿ, ತೋಟಗಳಿಗೆ ನುಗ್ಗಿದ ಮಳೆ ನೀರು
Team Udayavani, Jun 18, 2022, 11:41 PM IST
ಮಂಗಳೂರು/ ಉಡುಪಿ/ ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ಬಿರುಸಿನ ಮಳೆ ಕ್ಷೀಣಿಸಿದ್ದರೂ, ಸುಳ್ಯ, ಸುಬ್ರಹ್ಮಣ್ಯ ಭಾಗದಲ್ಲಿ ಜೋರು ಮಳೆಯಾಗಿದೆ. ಇತರೆಡೆ ಸಾಧಾರಣ ಮಳೆಯಾಗಿದೆ. ಉಳಿದಂತೆ ಬಿಸಿಲು ಮತ್ತು ಮೋಡಿದಿಂದ ಕೂಡಿದ ವಾತಾವರಣ ಇತ್ತು. ಸೆಕೆಯ ತೀವ್ರತೆ ಹೆಚ್ಚಿತ್ತು. ಶನಿವಾರ ಬೆಳಗ್ಗಿನ ಜಾವ ಮಳೆಯಾಗಿತ್ತು.
ಮುಂದಿನ 3 ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂ.19ರಿಂದ 22ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮಾಹಿತಿಯಂತೆ ಶನಿವಾರದಂದು ಮಂಗಳೂರಿನಲ್ಲಿ 30.2 ಡಿ.ಸೆ. ಗರಿಷ್ಠ ಮತ್ತು 24.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಕೃಷಿ ಭೂಮಿ, ತೋಟಗಳಿಗೆ
ನುಗ್ಗಿದ ಮಳೆ ನೀರು
ಸುಳ್ಯ, ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಸಂಜೆ ವೇಳೆ ಭಾರೀ ಮಳೆಯಾಗಿದ್ದು, ಅಸಮರ್ಪಕ ಚರಂಡಿಯಿಂದಾಗಿ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿರುವ ಪರಿಣಾಮ ವಾಹನ ಸವಾರರು ಸಂಕಷ್ಟ ಅನುಭವಿಸಿದ್ದಾರೆ. ಶುಕ್ರವಾರ ರಾತ್ರಿಯೂ ಬಾರೀ ಮಳೆಯಾಗಿದೆ. ಶನಿವಾರ ಸಂಜೆ ವೇಳೆ ಆರಂಭಗೊಂಡ ಮಳೆ ಸುಮಾರು ಮೂರು ಗಂಟೆಗಳ ಕಾಲ ಸುರಿದಿದೆ. ಸತತವಾಗಿ ಸುರಿದ ಬಾರೀ ಮಳೆಗೆ ಹಳ್ಳ, ತೋಡುಗಳು ತುಂಬಿ ಹರಿದಿದ್ದು, ತೋಡಿನ ಬದಿಯ ಕೃಷಿ ಭೂಮಿ, ತೋಟಗಳಿಗೆ ನೀರು ನುಗ್ಗಿದೆ.
ರಾಜ್ಯ ಹೆದ್ದಾರಿಯಲ್ಲೇ ಮಳೆ ನೀರು ಹರಿದಿತ್ತು. ಸುಳ್ಯ-ಬೆಳ್ಳಾರೆ, ಬೆಳ್ಳಾರೆ- ನಿಂತಿಕಲ್ಲು- ಪಂಜ, ಪಂಜ-ಕಡಬ ರಾಜ್ಯ ಹೆದ್ದಾರಿ ಸೇರಿದಂತೆ ಹಲವೆಡೆ ರಾಜ್ಯ ಹೆದ್ದಾರಿಯಲ್ಲಿ ಸಹಿತ ಗ್ರಾಮೀಣ ರಸ್ತೆಯಲ್ಲೂ ಮಳೆ ನೀರು ಹರಿಯುತ್ತಿತ್ತು.
ಸುಳ್ಯ, , ಕನಕಮಜಲು, ಅರಂತೋಡು, ಕಲ್ಲುಗುಂಡಿ, ಸಂಪಾಜೆ, ಬೆಳ್ಳಾರೆ, ನಿಂತಿಕಲ್ಲು, ಐವರ್ನಾಡು, ಕಲ್ಮಡ್ಕ, ಪಂಜ, ಸುಬ್ರಹ್ಮಣ್ಯ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಬಳ್ಪ, ಗುತ್ತಿಗಾರು, ಬಿಳಿನೆಲೆ, ಕಡಬದ ಕಲ್ಲುಗುಡ್ಡೆ, ನೂಜಿಬಾಳ್ತಿಲ, ರೆಂಜಿಲಾಡಿ, ಇಚ್ಲಂಪಾಡಿ, ಕೊಣಾಜೆ ಭಾಗದಲ್ಲೂ ಭಾರೀ ಮಳೆಯಾಯಿತು.
ಉಡುಪಿ: ಅಲ್ಲಲ್ಲಿ ಮಳೆ
ಉಡುಪಿ ಜಿಲ್ಲೆಯಲ್ಲಿ ಶನಿವಾರ ಬಿಸಿಲು, ಮಳೆ ವಾತಾವರಣ ಇದ್ದು, ಹಲವೆಡೆ ಬಿಟ್ಟುಬಿಟ್ಟು ಮಳೆಯಾಗಿದೆ. ಉಡುಪಿ, ಕುಂದಾಪುರ, ಕಾರ್ಕಳ, ಹೆಬ್ರಿ, ಬ್ರಹ್ಮಾವರ, ಬೈಂದೂರು ಭಾಗದಲ್ಲಿ ಉತ್ತಮ ಮಳೆಯಾಗಿದೆ.
ಪರ್ಕಳ, ಮಣಿ ಪಾಲ, ಮಲ್ಪೆ ಸುತ್ತಮುತ್ತ ಜಿಟಿಜಿಟಿ ಮಳೆ ಸುರಿದಿದೆ. ಶನಿವಾರ ಬೆಳಗ್ಗೆ 8.30ರ ಹಿಂದಿನ 24 ತಾಸು 13.3 ಮಿ. ಮೀ. ಮಳೆಯಾಗಿದ್ದು, ಬೈಂದೂರು, ಕಾರ್ಕಳ, ಹೆಬ್ರಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ