ಸ್ಮಶಾನಕ್ಕೆ 2 ಎಕರೆ ಭೂಮಿ ಮಂಜೂರು


Team Udayavani, Jun 19, 2022, 9:55 AM IST

2land

ಶಹಾಬಾದ: ಸ್ಮಶಾನಕ್ಕೆ ಭೂಮಿ ಒದಗಿಸಬೇಕು ಎಂಬ ಭಂಕೂರ ಗ್ರಾಮಸ್ಥರ ಬಹು ದಿನದ ಬೇಡಿಕೆಯನ್ನು ಜಿಲ್ಲಾಧಿಕಾರಿ ಯಶ್ವಂತ ವಿ.ಗುರುಕರ್‌ ಅವರು ಸ್ಮಶಾನಕ್ಕೆ ಎರಡು ಎಕರೆ ಭೂಮಿ ಕೇವಲ ಎರಡು ದಿನದಲ್ಲಿ ಮಂಜೂರು ಮಾಡಿಕೊಡುತ್ತೇನೆ ಎಂದು ಭರವಸೆ ನೀಡುವ ಮೂಲಕ ಗ್ರಾಮದ ಬಹುದೊಡ್ಡ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿದ್ದಾರೆ.

ತಾಲೂಕಿನ ಭಂಕೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಘೋಷಣೆ ಮಾಡಿದರು.

ಸಾರ್ವಜನಿಕರಿಗೆ ಹತ್ತು ಹಲವು ವಿವಿಧ ಇಲಾಖೆಯಿಂದ ಸವಲತ್ತುಗಳು ಇವೆ ಎಂಬುದು ಜನರಿಗೆ ಗೊತ್ತಿಲ್ಲ. ಆಯುಷ್ಮಾನ ಭಾರತ ಕಾರ್ಡ್‌ ಕೇವಲ 10 ರೂ.ಯಲ್ಲಿ ಸಿಗುತ್ತದೆ. ಈ ಯೋಜನೆಯ ಫಲಾನುಭವಿಗಳು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷದವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ಪಡೆಯಬಹುದು. ಇದರಿಂದ ಬಡ ಕುಟುಂಬ ವರ್ಗಕ್ಕೆ ಹೆಚ್ಚಿನ ಲಾಭವಾಗಲಿದೆ. ಈ ಯೋಜನೆ ಜಗತ್ತಿನ ಯಾವ ದೇಶದಲ್ಲೂ ಇಲ್ಲ. ಜಿಲ್ಲೆಯಲ್ಲಿ ಸುಮಾರು 10 ಸಾವಿರ ಪೋಡಿ ಸಮಸ್ಯೆಗಳು ಬಂದಿದ್ದು, ಅದರಲ್ಲಿ ಸುಮಾರು 3 ಸಾವಿರ ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದರು.

ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಕಂದಗೂಳ ಮಾತನಾಡಿ, ಗ್ರಾಮದಲ್ಲಿ ಸ್ಮಶಾನದ ಸಮಸ್ಯೆ ಸುಮಾರು 20 ವರ್ಷಗಳಿಂದ ತಲೆದೋರಿದೆ. ಆದ್ದರಿಂದ ಸ್ಮಶಾನಕ್ಕೆ ಭೂಮಿ ಮಂಜೂರು ಮಾಡಬೇಕು. ಗ್ರಾಮದ ಗ್ರಂಥಾಲಯ ಡಿಜಿಟಲೀಕರಣಗೊಳಿಸಬೇಕು. ರೇಷನ್‌ ಅಂಗಡಿಗಳು ಕೇವಲ ಮೂರು ದಿನ ಮಾತ್ರ ತೆರೆದಿರುತ್ತವೆ. ಅಲ್ಲದೇ ರಾತ್ರಿ 1 ಗಂಟೆ ಸಮಯದಲ್ಲಿ ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಗ್ರಾಮದ ವೃತ್ತದಲ್ಲಿ ಸ್ಪೀಡ್‌ ಬ್ರೇಕರ್‌ ಅಳವಡಿಸಬೇಕು. ಗ್ರಾಮಕ್ಕೆ ಬರುವ 1.5 ಕಿಮೀ ದ್ವಿಪಥ ರಸ್ತೆಯನ್ನು ನಿರ್ಮಾಣ ಮಾಡಿಕೊಡಬೇಕು ಸೇರಿದಂತೆ ಅನೇಕ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಮುಂದೆ ಹೇಳಿದರು.

ನಂತರ ಗ್ರಾಪಂ ಸದಸ್ಯ ಈರಣ್ಣ ಹಳ್ಳಿ ಕಾರ್ಗಿಲ್‌ ಮಾತನಾಡಿ, ಸ್ಮಶಾನದ ಸಮಸ್ಯೆ, ಗ್ರಾಮದಲ್ಲಿ ಹಾವು ಕಡಿದು ಸುಮಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ದೂರದ ಪೇಠಸಿರೂರಿಗೆ ಹೋಗಲು ತೊಂದರೆಯಾಗುತ್ತಿದೆ. ಆದ್ದರಿಂದ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕೆಂದು ಆಗ್ರಹಿಸಿದರು.

ಸಮಸ್ಯೆಯನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸ್ಮಶಾನಕ್ಕೆ ಎರಡು ಎಕರೆ ಭೂಮಿಯನ್ನು ಎರಡೇ ದಿನದಲ್ಲಿ ಮಂಜೂರು ಮಾಡುತ್ತೇನೆ. ಅಲ್ಲದೇ ಭಂಕೂರ ವೃತ್ತದಲ್ಲಿ ಹಾಟ್‌ ಸ್ಪಾಟ್‌ ಎಂದು ಗುರುತಿಸಿ ಅಪಘಾತಗಳಾಗದೇ ಹಾಗೇ ಕ್ರಮಕೈಗೊಳ್ಳುತ್ತೇನೆ. ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲು ಸರಕಾರದ ಹಂತದಲ್ಲಿ ಮಾತನಾಡುತ್ತೇನೆ. ಅಲ್ಲದೇ ಹಾವು ಕಡಿತಕ್ಕೆ ಔಷಧ ಒದಗಿಸಿ ಕೊಡಲಾಗುತ್ತದೆ ಎಂದರು.

ಜಿಪಂ ಕಾರ್ಯನಿರ್ವಾಹಣ ಅಧಿಕಾರಿ ಡಾ| ಗಿರೀಶ ದಿಲೀಪ ಬಡೋಲೆ, ಸೇಡಂ ಎಸಿ ಕಾರ್ತಿಕ ಎಮ್‌, ಜಿಲ್ಲಾ ಆರೋಗ್ಯ ಅಧಿಕಾರಿ ರಾಜಶೇಖರ ಮಾಲಿ, ತಾಪಂ ಇಒ ಬಸಲಿಂಗಪ್ಪ ಡಿಗ್ಗಿ, ಗ್ರೇಡ್‌-2 ತಹಶೀಲ್ದಾರ್‌ ಗುರುರಾಜ ಸಂಗಾವಿ, ತಾಲೂಕು ಆರೋಗ್ಯ ಅಧಿಕಾರಿ ಅಮರದೀಪ ಪವಾರ, ಗ್ರಾಪಂ ಉಪಾಧ್ಯಕ್ಷ ಯಶ್ವಂತ ಚವ್ಹಾಣ, ನಗರಸಭೆ ಸದಸ್ಯ ರಜನಿಕಾಂತ ಕಂಬಾನೂರ, ಗಣ್ಯರಾದ ಶಶಿಕಾಂತ ಪಾಟೀಲ, ಗ್ರಾಪಂ ಸದಸ್ಯ ಶರಣಬಸಪ್ಪ ಧನ್ನಾ, ಅಧಿಕಾರಿಗಳಾದ ಡಾ|ಶಂಕರ,ರಮೇಶ ತುಂಗಳ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಈರಣ್ಣ ಕೆಂಭಾವಿ, ಪ್ರಾಥಮಿಕ ಶಾಲಾ ಶಿಕ್ಷಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪುತ್ರ ಕರಣಿಕ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯ ಮೇಲಿದ್ದರು. ಶಿಕ್ಷಕ ಬನ್ನಪ್ಪ ಸೈದಾಪೂರ ನಿರೂಪಿಸಿದರು.

ಸಿಆರ್‌ಸಿ ಮರೆಪ್ಪ ಭಜಂತ್ರಿ ಪ್ರಾರ್ಥಿಸಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸಿದ್ದು ಅಣಬಿ ಸ್ವಾಗತಿಸಿದರು. ಶಾಂತಮಲ್ಲ ಶಿವಬೋಧಿ ಭಂಕೂರ ಗ್ರಾಮದ ಇತಿಹಾಸ ಪರಿಚಯಿಸಿದರು. ಈರಣ್ಣ ಕಾರ್ಗಿಲ್‌ ವಂದಿಸಿದರು.

ಸಾರ್ವಜನಿಕರಿಂದ ಒಟ್ಟು 406 ಅರ್ಜಿಗಳು ಸ್ವೀಕೃತಗೊಂಡಿದ್ದು, 355 ಅರ್ಜಿಗಳು ಸ್ಥಳದಲ್ಲೇ ಪರಿಹಾರ ನೀಡಿ ಪ್ರಮಾಣ ಪತ್ರ ವಿತರಿಸಲಾಯಿತು. ಉಳಿದ 51 ಅರ್ಜಿಗಳು ನಿಯಾಮಾನುಸಾರ ಪರಿಶೀಲಿಸಿ ಕ್ರಮವಹಿಸಲಾಗುವುದು. ಸಾಮಾಜಿಕ ಭದ್ರತೆ ಅರ್ಜಿಗಳು 56, ರೇಷನ್‌ ಕಾರ್ಡ್‌ 9, ಆರೋಗ್ಯ ಕಾರ್ಡ್‌ 72, ಆರೋಗ್ಯ ಇಲಾಖೆಯ ಡಿಜಿಟಲ್‌ ಕಾರ್ಡ್‌ 200, ಕಟ್ಟಡ ಕಾರ್ಮಿಕ ಕಾರ್ಡ್‌ 25 ಪಹಣಿ ತಿದ್ದುಪಡಿ 5, ಸ್ಮಶಾನ ಭೂಮಿ 3, ಇತರೆ ಅರ್ಜಿ 36 ಅರ್ಜಿಗಳು ಸ್ವೀಕೃತಗೊಂಡಿದ್ದು, ಜಿಲ್ಲಾಧಿಕಾರಿಗಳು ಎಲ್ಲ ಅರ್ಜಿಗಳನ್ನು ಕುಲಂಕುಶವಾಗಿ ಪರಿಶೀಲಿಸಿ ಸ್ಥಳದಲ್ಲೇ 355 ಅರ್ಜಿಗಳನ್ನು ಇತ್ಯರ್ಥಪಡಿಸಿದ್ದಾರೆ. ಬಾಕಿ ಇರುವ 51 ಅರ್ಜಿಗಳು ಪರಿಶೀಲಿಸಿ ತುರ್ತಾಗಿ ಕ್ರಮವಹಿಸಲು ಸಂಬಂಧಪಟ್ಟ ಇಲಾಖೆಗೆ ರವಾನಿಸಲು ತಿಳಿಸಿದ್ದಾರೆ. ಸುರೇಶ ವರ್ಮಾ ತಹಶೀಲ್ದಾರ್‌.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.