ಗ್ರಾಮಗಳ ಸಮಸ್ಯೆ ಅರಿಯಲು ವಿದ್ಯುತ್‌ ಅದಾಲತ್‌ ಸಹಕಾರಿ


Team Udayavani, Jun 19, 2022, 2:19 PM IST

ಗ್ರಾಮಗಳ ಸಮಸ್ಯೆ ಅರಿಯಲು ವಿದ್ಯುತ್‌ ಅದಾಲತ್‌ ಸಹಕಾರಿ

ನೆಲಮಂಗಲ: ವಿದ್ಯುತ್‌ ಸಮಸ್ಯೆಗಳನ್ನು ಸಮಗ್ರವಾಗಿ ಬಗೆಹರಿಸಲು ಅಧಿಕಾರಿಗಳು ಮತ್ತು ಗ್ರಾಹಕರು, ರೈತರು ಒಂದೇ ವೇದಿಕೆಯಲ್ಲಿ ಮುಕ್ತವಾಗಿ ಚರ್ಚಿಸಿ ಪರಿಹಾರ ಕಂಡಕೊಳ್ಳಲು ವಿದ್ಯುತ್‌ ಅದಾಲತ್‌ ಸಹಕಾರಿಯಾಗಿದೆ ಎಂದು ಬೆಸ್ಕಾಂ ಇಲಾಖೆಯ ಬೆಂಗಳೂರು ವೃತ್ತದ ಅಧೀಕ್ಷಕ ಎಂಜಿನಿಯರ್‌ ವಿ.ಕೃಷ್ಣಪ್ರಸಾದ್‌ ಅಭಿಪ್ರಾಯಪಟ್ಟರು.

ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಬದ್ಧತೆಯ ಕಾರ್ಯ ಭರವಸೆಯ ಬೆಳಕು ಘೋಷ ವಾಕ್ಯ ದೊಂದಿಗೆ ಗ್ರಾಮೀಣ ಜನರ ವಿದ್ಯುತ್‌ ಸಮಸ್ಯೆ ಆಲಿಸಲು, ಪ್ರತಿ ತಿಂಗಳು ಮೂರನೇ ಶನಿವಾರ ನಡೆಸುವ ವಿದ್ಯುತ್‌ ಅದಾಲತ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಉಪವಿಭಾಗವಾದ ಬೆಂಗಳೂರು ವೃತ್ತದ ಕೊನೆಯ ಗ್ರಾಮದ ಜನರ ವಿದ್ಯುತ್‌ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಇಲಾಖೆ ಮತ್ತು ಸಚಿವ ಸುನೀಲ್‌ ಕುಮಾರ್‌ ಮಾರ್ಗದರ್ಶನದಲ್ಲಿ ಇಂತಹ ವಿದ್ಯುತ್‌ ಅದಾಲತ್‌ ನಡೆಸಲಾಗುತ್ತಿದೆ. ಸ್ಥಳದಲ್ಲಿ ಹಲವಾರು ಮನವಿ ಸ್ವೀಕರಿಸಿ ಸ್ಪಂದಿಸಿದ್ದೇವೆ ಎಂದರು.

ಸಭೆಯಲ್ಲಿ ಮುಖ್ಯ ಚರ್ಚೆ: ಗ್ರಾಪಂ ಮಾಜಿ ಸದಸ್ಯ ರವಿಕುಮಾರ್‌ ಮಾತನಾಡಿ, ಗ್ರಾಮದಲ್ಲಿ ಸುಮಾರು 08 ವಿದ್ಯುತ್‌ ಕಂಬ, ವಿದ್ಯುತ್‌ ಪರಿವರ್ತಕ ಹಾಗೂ ಗ್ರಾಮದ ಹೊರವಲಯ ನವಗ್ರಾಮಕ್ಕೆ ಪ್ರತ್ಯೇಕ ವಿದ್ಯುತ್‌ ಕಂಬ ಮತ್ತು ಸಂಪರ್ಕ ಕಲ್ಪಿಸಬೇಕೆಂದು ಒತ್ತಾಯಿಸಿದರು. ಸ್ಥಳದಲ್ಲೇ ಅಧಿಕಾರಿಗಳಿ ಕ್ರಮ ವಹಿಸುವಂತೆ ಕೃಷ್ಣಪ್ರಸಾದ್‌ ತಿಳಿಸಿದರು.

ತಿಮ್ಮಸಂದ್ರ ವಾಡ್‌ ìನ ಗ್ರಾಪಂ ಸದಸ್ಯ ರಂಗಸ್ವಾಮಿ ಮಾತನಾಡಿ, ನಮ್ಮ ಅರೇಬೊಮ್ಮನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಬೆಟ್ಟಗಳಲ್ಲಿ ಕಾಡುಪ್ರಾಣಿಗಳಾದ ಚಿರತೆ, ಕಾಡು ಹಂದಿ, ಸೀಳು ನಾಯಿ ಹಾವಳಿ ಹೆಚ್ಚು, ಲೈನ್‌ಮ್ಯಾನ್‌ಗಳು ರಾತ್ರಿವೇಳೆಯಲ್ಲಿ ಕೆಲಸ ನಿರ್ವಹಿ ಸಲು ರಕ್ಷಣಾ ಸಲಕರಣೆಗಳಾದ ಹಣೆಬ್ಯಾಟರಿ, ರೈನ್‌ಕೋಟ್‌, ಪ್ರತ್ಯೇಕ ವಾಹನ ನೀಡಲು ಒತ್ತಾಯಿಸಿದರು.

ಹಾಲಿನ ಡೇರಿ ಅಧ್ಯಕ್ಷ ಕೃಷ್ಣಪ್ಪ ಮತ್ತು ಸಿಇಒ ಶ್ರೀನಿವಾಸ ಮೂರ್ತಿ, ಡೇರಿ ಮೇಲೆ ಹಾದುಹೋಗಿರುವ ತಂತಿಗಳಿಗೆ ಸೂಕ್ತ ಪ್ಲಾಸ್ಟಿಕ್‌ ಪೈಪ್‌ ಮತ್ತು ಗ್ರಾಮದ ಏಳು ಮನೆಗಳಿಗೆ ವಿದ್ಯುತ್‌ ಸಂಪರ್ಕ, ರೈತರ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಒತ್ತಾಯಿಸಿದರು.

ವಿದ್ಯುತ್‌ ಉಪಕೇಂದ್ರ: ನಮ್ಮ ಕೊನೆಯ ಗ್ರಾಮಗಳಿಗೆ ಡಾಬಸ್‌ ಪೇಟೆ ಶಾಖೆಯಿಂದ ಸುಮಾರು 10ಕ್ಕೂ ಅಧಿಕ ಕಿ.ಮೀ. ದೂರವಿರುವದರಿಂದ ಮಳೆ, ಗಾಳಿಯಾದರೂ ವಿದ್ಯುತ್‌ ವ್ಯತ್ಯಯವಾಗುತ್ತದೆ. ಈ ಭಾಗದಲ್ಲಿ ಶಾಶ್ವತ ವಿದ್ಯುತ್‌ ಪರಿಹಾರಕ್ಕೆ ವಿದ್ಯುತ್‌ ಉಪಕೇಂದ್ರ ಮಹಿಮಾಪುರದಲ್ಲಿ ನಿರ್ಮಾಣ ಮಾಡುವಂತೆ, ಲೈನ್‌ಮ್ಯಾನ್‌ ಸಿಬ್ಬಂದಿ ಹಾಗೂ ರೈತರ ಪಂಪ್‌ ಸೆಟ್‌ಗೆ ಹಗಲಿನ ವೇಳೆ ವಿದ್ಯುತ್‌ ಹಾಗೂ ಪಂಪ್‌ ಸೆಟ್‌ ಅಕ್ರಮಸಕ್ರಮ ಯೋಜನೆಗೆ ಸಾನ್‌ ಸಂಘದ ತಾಲೂಕು ಅಧ್ಯಕ್ಷ ದೊಡ್ಡೇರಿ ಚಂದ್ರಮೋಹನ್‌ ಸಭೆಗೆ ತಿಳಿಸಿದರು.

ಎಇಇ ರಮೇಶ್‌, ಜೆ.ಇ ಹನುಮಂತರಾಜು, ತಿಮ್ಮಯ್ಯ, ಎಇ ಸುನೀಲ್‌ಕುಮಾರ್‌, ಸಿಬ್ಬಂದಿ ಗೋವಿಂದರಾಜು, ಮಂಜುನಾಥ್‌, ಶಿವು, ಗುತ್ತಿಗೆದಾರರಾದ ಕಾಸರಘಟ್ಟ ರಾಜಣ್ಣ, ಹಲ್ಕೂರು ಸಿದ್ದಗಂಗಯ್ಯ, ಗ್ರಾಪಂ ಸದಸ್ಯ ರಂಗಸ್ವಾಮಿ ತಿಮ್ಮಸಂದ್ರ ಗ್ರಾಮದ ಹನುಮಂತರಾಜು, ರವಿಕುಮಾರ್‌, ಸಂಪತ್‌, ಸಿದ್ದಯ್ಯ, ನಿವೃತ್ತ ಶಿಕ್ಷಕ ಚಿಕ್ಕಣ್ಣ, ದೊಡ್ಡೇರಿ ಡೇರಿ ಅಧ್ಯಕ್ಷ ಸೋಮಶೇಖರ್‌, ಚಂದ್ರಪ್ಪ ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.