‘ಮೇಡ್‌ ಇನ್‌ ಚೈನಾ’ ಚಿತ್ರ ವಿಮರ್ಶೆ: ವರ್ಚುವಲ್‌ ನಲ್ಲಿ ಹೊಸ ಅನುಭವ


Team Udayavani, Jun 19, 2022, 2:37 PM IST

‘ಮೇಡ್‌ ಇನ್‌ ಚೈನಾ’ ಚಿತ್ರ ವಿಮರ್ಶೆ: ವರ್ಚುವಲ್‌ ನಲ್ಲಿ ಹೊಸ ಅನುಭವ

ಕೆಲವು ಸಿನಿಮಾಗಳು ತನ್ನ ಪ್ರಯೋಗದ, ಹೊಸತನದ ಮೂಲಕ ಇಷ್ಟವಾಗುತ್ತಾ ಹೋಗುತ್ತವೆ. ಇಂತಹ ಸಿನಿಮಾಗಳು ಕಥೆಯ ಹಂಗನ್ನು ಮೀರಿ ನಿಲ್ಲುತ್ತವೆ ಕೂಡಾ. ಈ ವಾರ ತೆರೆಕಂಡಿರುವ “ಮೇಡ್‌ ಇನ್‌ ಚೈನಾ’ ಚಿತ್ರ ಒಂದು ಪ್ರಯೋಗಾತ್ಮಕ ಸಿನಿಮಾವಾಗಿ ಇಷ್ಟವಾಗುತ್ತದೆ.

ಇದು ಕನ್ನಡದ ಮೊಟ್ಟ ಮೊದಲ ವರ್ಚುವಲ್‌ ಸಿನಿಮಾ. ವರ್ಚುವಲ್‌ ಸಿನಿಮಾದ ಯಾವ ದೃಶ್ಯ ಕೂಡಾ ನೇರಾ ನೇರ ಇರುವುದಿಲ್ಲ, ವಿಡಿಯೋ ಕಾಲ್‌ ಮೂಲಕವೇ ಇಡೀ ಸಿನಿಮಾ ನಡೆಯುತ್ತದೆ ಎಂದು ಸುಲಭವಾಗಿ ಹೇಳಿಬಿಡಬಹುದು. ಆದರೆ, ಇಲ್ಲಿನ ದೃಶ್ಯಗಳನ್ನು ಕಟ್ಟಿಕೊಡುವುದು, ಒಂದಕ್ಕೊಂದು ಸನ್ನಿವೇಶಗಳನ್ನು ಜೋಡಿಸುವುದು ನಿಜಕ್ಕೂ ಸವಾಲಿನ ಕೆಲಸ. ಆ ನಿಟ್ಟಿನಲ್ಲಿ ನಿರ್ದೇಶಕ ಪ್ರೀತಂ ತೆಗ್ಗಿನಮನೆ ಪ್ರಯತ್ನವನ್ನು ಮೆಚ್ಚಲೇಬೇಕು.

ಇಡೀ ಸಿನಿಮಾವನ್ನು ಕಟ್ಟಿಕೊಡುವಲ್ಲಿ ಅವರ ಪ್ರಯತ್ನ, ಪೂರ್ವತಯಾರಿ ಇಲ್ಲಿ ಎದ್ದು ಕಾಣುತ್ತದೆ. ನಿರ್ದೇಶನದ ಜೊತೆಗೆ ಸವಾಲಿನ ಕೆಲಸವಿರುವುದು ಛಾಯಾಗ್ರಹಣ ಹಾಗೂ ಸಂಕಲನದಲ್ಲಿ. ಏಕೆಂದರೆ ಇಡೀ ಸಿನಿಮಾ ವರ್ಚುವಲ್‌ ನಲ್ಲಿ ನಡೆಯಬೇಕು. ಒಂದೇ ಸ್ಕ್ರೀನ್‌ಮೇಲೆ ಎರಡೆರಡು ಸನ್ನಿವೇಶಗಳು ಬರಬೇಕು, ಜೊತೆಗೆ ಸಿನಿಮಾದ ಫೀಲ್‌, ಟೋನ್‌ …ಎಲ್ಲವೂ ವರ್ಚುವಲ್‌ ಹಿನ್ನೆಲೆಯಲ್ಲೇ ಸಾಗಬೇಕು. ಈ ಹಿನ್ನೆಲೆಯಲ್ಲಿ ನಿರ್ದೇಶಕ ಪ್ರೀತಂ ಸಾಕಷ್ಟು ಶ್ರಮ ವಹಿಸಿರುವುದು ಎದ್ದು ಕಾಣುತ್ತದೆ. ಏಕೆಂದರೆ ನಿರ್ದೇಶನದ ಜೊತೆಗೆ ಛಾಯಾಗ್ರಹಣ ಹಾಗೂ ಸಂಕಲನ ಕೂಡಾ ಅವರದ್ದೇ. ಬೇರೆ ಭಾಷೆಗಳಲ್ಲಿ ಒಂದೆರಡು ವರ್ಚುವಲ್‌ ಸಿನಿಮಾಗಳು ಬಂದಿವೆ. ಆದರೆ, ಕನ್ನಡದಲ್ಲಿ ಇದು ಮೊದಲ ವರ್ಚುವಲ್‌ ಸಿನಿಮಾ. ಕನ್ನಡದ ಮೊದಲ ಪ್ರಯತ್ನ ತಕ್ಕಮಟ್ಟಿಗೆ ಫ‌ಲ ನೀಡಿದೆ ಎನ್ನಬಹುದು.

ಸಾಫ್ಟ್ವೇರ್‌ ಉದ್ಯೋಗಿಯೊಬ್ಬ ಚೀನಾಗೆ ಹೋದ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾಗುತ್ತದೆ. ಆತ ಕೋವಿಡ್‌ ಸೋಂಕಿತನ ಸಂಪರ್ಕಕ್ಕೆ ಬಂದಿರುವ ಕಾರಣ, ಆತನ ಮನೆಯನ್ನು ಸೀಲ್‌ಡೌನ್‌ ಮಾಡಲಾಗುತ್ತದೆ. ಇತ್ತ ಭಾರತದಲ್ಲಿ ಆತನ ಪತ್ನಿ ತುಂಬು ಗರ್ಭಿಣಿ. ಇಂಥ ಸನ್ನಿವೇಶದಲ್ಲಿ ಆತ ಅನುಭವಿಸುವ ತೊಳಲಾಟ, ದುಗುಡ, ದುಃಖದ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಈ ಅಂಶವನ್ನು ವರ್ಚುವಲ್‌ ಹಿನ್ನೆಲೆಯಲ್ಲಿ ಕಟ್ಟಿಕೊಡಲಾಗಿದೆ.

ಮೊದಲೇ ಹೇಳಿದಂತೆ ಇದೊಂದು ಪ್ರಯೋಗಾತ್ಮಕ ಸಿನಿಮಾವಾಗಿರುವುದರಿಂದ ಇಲ್ಲಿ “ಕಲರ್‌ಫ‌ುಲ್‌’ ಲೊಕೇಶನ್‌, ವಿಭಿನ್ನ ಹಾವ-ಭಾವ, ಹಾಡು, ಫೈಟ್‌ ಯಾವುದನ್ನೂ ಬಯಸುವಂತಿಲ್ಲ. ಒಂದು ಕಥೆಯನ್ನು ಎಷ್ಟು ತೀವ್ರವಾಗಿ ಕಟ್ಟಿಕೊಡಬಹುದು, ಅಷ್ಟನ್ನು ಇಲ್ಲಿ ನೀಟಾಗಿ ಮಾಡಲಾಗಿದೆ. ಇಡೀ ಸಿನಿಮಾ ನಿಂತಿರುವುದು ಸಣ್ಣ ಸಣ್ಣ ಕುತೂಹಲ, ಎಮೋಶನ್ಸ್‌ ಮೇಲೆ. ಅದನ್ನು ಕೊನೆಯವರೆಗೆ ಉಳಿಸಿಕೊಳ್ಳುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಒಂದು ಹೊಸ ಅನುಭವ ಬಯಸುವವರು “ಚೈನಾ’ ಪ್ರವಾಸ ಮಾಡಬಹುದು.

ಚಿತ್ರದಲ್ಲಿ ನಟಿಸಿರುವ ನಾಗಭೂಷಣ್‌, ಪ್ರಿಯಾಂಕಾ, ರವಿಭಟ್‌, ಅರುಣಾ ಬಾಲ ರಾಜ್‌ ಎಲ್ಲರೂ ತುಂಬಾ ಸಹಜವಾಗಿ ನಟಿಸಿದ್ದಾರೆ. ಚಿತ್ರದ ಹಿನ್ನೆಲೆ ಸಂಗೀತ ಕಥೆಗೆ ಪೂರಕವಾಗಿದೆ.

ರವಿ ರೈ

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.