ಆರೋಗ್ಯ ಸಂಬಂಧಿ ಆ್ಯಪ್‌ ಗಳ ರಚನೆ: ಮುಂಜಾಗ್ರತೆ ಅಗತ್ಯ


Team Udayavani, Jun 20, 2022, 6:00 AM IST

ಆರೋಗ್ಯ ಸಂಬಂಧಿ ಆ್ಯಪ್‌ ಗಳ ರಚನೆ: ಮುಂಜಾಗ್ರತೆ ಅಗತ್ಯ

ಎರಡೂವರೆ ವರ್ಷಗಳ ಹಿಂದೆ ಭಾರತ ಮಾತ್ರವಲ್ಲದೆ ಇಡೀ ವಿಶ್ವವನ್ನು ಇನ್ನಿಲ್ಲದಂತೆ ಕಾಡಿದ ಕೊರೊನಾ ಸಾಂಕ್ರಾಮಿಕ ಇನ್ನೂ ನಮ್ಮಿಂದ ದೂರವಾಗಿಲ್ಲ. ಆದರೆ ಈ ಸಾಂಕ್ರಾಮಿಕದ ಮೊದಲೆರಡು ಅಲೆ ದೇಶಾದ್ಯಂತ ಸೃಷ್ಟಿಸಿದ ಭೀಕರ ಆರೋಗ್ಯ ಬಿಕ್ಕಟ್ಟು ದೇಶದ ಇಡೀ ಆರೋಗ್ಯ ವಲಯದಲ್ಲಿನ ಲೋಪದೋಷಗಳನ್ನು ಜಗಜ್ಜಾಹೀರುಗೊಳಿಸಿದ್ದಂತೂ ಸುಳ್ಳಲ್ಲ. ಆದರೆ ಈ ಎಲ್ಲ ಕೊರತೆಗಳ ಹೊರತಾಗಿಯೂ ಆ ಬಳಿಕದ ತಿಂಗಳುಗಳಲ್ಲಿ ದೇಶದಿಂದ ಕೊರೊನಾವನ್ನು ಹಿಮ್ಮೆಟ್ಟಿಸುವಲ್ಲಿ ತೋರಿದ ಸಾಹಸ ಇಡೀ ವಿಶ್ವದ ಶ್ಲಾಘನೆಗೆ ಪಾತ್ರವಾಗಿತ್ತು ಎಂಬುದು ಮಾತ್ರ ದೇಶದ ಪಾಲಿಗೆ ಹೆಮ್ಮೆಯ ವಿಚಾರವೇ.

ಈ ಎಲ್ಲ ಲೋಪದೋಷಗಳು ಮತ್ತು ಸಾಧನೆಗಳು ದೇಶದ ಆರೋಗ್ಯ ಕ್ಷೇತ್ರಕ್ಕೆ ಬೂಸ್ಟರ್‌ ಡೋಸ್‌ ನೀಡಿರುವುದಂತೂ ಸುಳ್ಳಲ್ಲ. ಆರೋಗ್ಯ ಕ್ಷೇತ್ರದ ಬಗೆಗಿನ ಸರಕಾರ ಮತ್ತು ಸಾರ್ವಜನಿಕರ ಮನೋಭಾವವನ್ನೇ ಕೊರೊನಾ ಸಾಂಕ್ರಾಮಿಕ ಬದಲಾಯಿಸಿದೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸಾಧನ, ಸಲಕರಣೆ, ಪರಿಕರ, ಔಷಧ ಉತ್ಪಾದನೆಯಲ್ಲಿ ಸ್ವಾವಲಂಬನೆಯತ್ತ ದಾಪುಗಾಲಿಟ್ಟಿದೆ.

ಕೊರೊನಾ ನಿರೋಧಕ ಲಸಿಕೆ ನೀಡಿಕೆ ಪ್ರಕ್ರಿಯೆಗಾಗಿ ಕೇಂದ್ರ ಸರಕಾರ ಪರಿಚಯಿಸಿದ ಕೊವಿನ್‌ ಆ್ಯಪ್‌ ಆರೋಗ್ಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನವನ್ನು ಯಾವ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬಹುದು ಎಂಬುದಕ್ಕೆ ಪ್ರತ್ಯಕ್ಷ ಉದಾಹರಣೆ. ಇದೀಗ ಇದೇ ಮಾದರಿಯನ್ನು ಆರೋಗ್ಯ ಕ್ಷೇತ್ರದ ಇನ್ನಿತರ ಕೆಲಸಕಾರ್ಯಗಳಿಗೂ ಬಳಸಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ.

ಮಕ್ಕಳಿಗೆ ಲಸಿಕೆ ಹಾಕಿಸಲು, ರಕ್ತದಾನ ಮತ್ತು ಅಂಗಾಂಗ ದಾನ ಮಾಡಲು ಪ್ರತ್ಯೇಕ ಮೂರು ಆ್ಯಪ್‌ಗಳನ್ನು ಸಿದ್ಧಪಡಿಸಿ ಅದನ್ನು ಬಳಕೆ ಮಾಡಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮುಂದಾಗಿದೆ. ವರ್ಷಾಂತ್ಯದಲ್ಲಿ ಈ ಆ್ಯಪ್‌ ಸಿದ್ಧವಾಗಿ ಮುಂದಿನ ವರ್ಷದ ಆದಿಯಲ್ಲಿ ಸಾರ್ವಜನಿಕ ಬಳಕೆಗೆ ಮುಕ್ತಗೊಳ್ಳುವ ಸಾಧ್ಯತೆ ಇದೆ. ಮಕ್ಕಳ ಲಸಿಕೀಕರಣಕ್ಕಾಗಿ ಪ್ರತ್ಯೇಕ ಆ್ಯಪ್‌ ಒಂದನ್ನು ಸಿದ್ಧಪಡಿಸಿ ಅದರಲ್ಲಿ ಮಕ್ಕಳ ಬಗೆಗಿನ ಎಲ್ಲ ಮಾಹಿತಿಗಳನ್ನು ಅಪ್‌ಲೋಡ್‌ ಮಾಡಿದಲ್ಲಿ ಮುಂದಿನ ಲಸಿಕೆಯನ್ನು ಪಡೆದುಕೊಳ್ಳಬೇಕಾದ ದಿನಾಂಕ, ಲಸಿಕಾ ಕೇಂದ್ರ ಇವೆಲ್ಲದರ ಕುರಿತಂತೆ ಮಕ್ಕಳ ಪೋಷಕರು ನೇರವಾಗಿ ಆ್ಯಪ್‌ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇದೇ ಮಾದರಿಯಲ್ಲಿ ರಕ್ತದಾನಿಗಳು ಮತ್ತು ಅಂಗಾಂಗ ದಾನಿಗಳಿಗೂ ಪ್ರತ್ಯೇಕ ಆ್ಯಪ್‌ಗಳನ್ನು ಬಿಡುಗಡೆ ಮಾಡಿ ರೋಗಿಗೆ ತಮ್ಮ ಸನಿಹದಲ್ಲಿರುವ ದಾನಿಗಳಿಂದ ರಕ್ತ ಅಥವಾ ಅಂಗಾಂಗ ದಾನದ ಸೌಲಭ್ಯವನ್ನು ಪಡೆಯಲು ನೆರವಾಗಲಿದೆ.
ಕೇಂದ್ರ ಸರಕಾರದ ಈ ಚಿಂತನೆ ಸ್ವಾಗತಾರ್ಹ.

ಆದರೆ ಕೊವಿನ್‌ ಆ್ಯಪ್‌ನ ಕೆಲವೊಂದು ಲೋಪದೋಷಗಳತ್ತ ಪ್ರಾಧಿಕಾರ ಹೊಸ ಆ್ಯಪ್‌ ರಚನೆ ಮತ್ತು ಮಾಹಿತಿ ದಾಖಲಿಸುವ ವೇಳೆ ಎಚ್ಚರ ವಹಿಸುವುದು ಅತ್ಯಗತ್ಯ. ಕೊವಿನ್‌ ಆ್ಯಪ್‌ಗೆ ಹೆಸರು, ಮೊಬೈಲ್‌ ಸಂಖ್ಯೆ ಮತ್ತಿತರ ವಿವರಗಳನ್ನು ಆ್ಯಪ್‌ಗೆ ಅಪ್‌ಲೋಡ್‌ ಮಾಡುವ ಸಂದರ್ಭದಲ್ಲಿ ಲೋಪವಾಗಿದ್ದರಿಂದ ಯಾರ್ಯಾರದೋ ಮೊಬೈಲ್‌ ಸಂಖ್ಯೆಗೆ ತಲುಪಬೇಕಾಗಿದ್ದ ಸಂದೇಶ ಇನ್ಯಾರಿಗೋ ರವಾನೆಯಾದಂಥ ಪ್ರಸಂಗಗಳು ಹೊಸ ಆ್ಯಪ್‌ ರಚನೆ ಮತ್ತು ಬಳಕೆಯ ಸಂದರ್ಭದಲ್ಲಾಗದಂತೆ ಎಚ್ಚರ ವಹಿಸುವ ಅಗತ್ಯವಿದೆ. ಆರೋಗ್ಯ ಸಂಬಂಧಿ ವಿಚಾರಗಳು ಸೂಕ್ಷ್ಮ ವಿಚಾರ ಮತ್ತು ಮಾಹಿತಿಗಳಾಗಿರುವುದರಿಂದ ಮತ್ತು ಅತ್ಯಂತ ಕ್ಲಪ್ತ ಸಮಯದಲ್ಲಿ ಲಭಿಸಬೇಕಿರುವುದರಿಂದ ಹೆಚ್ಚಿನ ಜಾಗ್ರತೆ ವಹಿಸುವುದು ಅತ್ಯಗತ್ಯ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.