ಕೆರೆಗಳ ರಕ್ಷಣೆಗಾಗಿ ಸರ್ಕಾರದೊಂದಿಗೆ ಕೈ ಜೋಡಿಸಿ

ಕರ್ನಾಟಕದ ಕೆರೆ ಉಳಿವಿಗೆ 2014ರ ಸಂರಕ್ಷಣಾ ಕಾಯ್ದೆ ಓದಬೇಕು.

Team Udayavani, Jun 20, 2022, 3:46 PM IST

ಕೆರೆಗಳ ರಕ್ಷಣೆಗಾಗಿ ಸರ್ಕಾರದೊಂದಿಗೆ ಕೈ ಜೋಡಿಸಿ

ಆನೇಕಲ್‌: ಕೆರೆಗಳ ರಕ್ಷಣೆಗೆ ಸರ್ಕಾರದ ಜೊತೆಗೆ ಸ್ಥಳೀಯರು ಕೈ ಜೋಡಿಸಬೇಕು. ನಮ್ಮ ಕೆರೆ, ಕುಂಟೆ, ಕಲ್ಯಾಣಿಗಳ ರಕ್ಷಣೆಗೆ ಪಣತೊಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್‌ ಸಾಲಿಯಾನ್‌ ಹೇಳಿದರು.

ಆನೇಕಲ್‌ ತಾಪಂ ಸಭಾಂಗಣದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂ.ಗ್ರಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗ್ರಾ ಜಿಲ್ಲಾಡಳಿತ, ಕೆರೆ ಸಂರಕ್ಷಣಾ , ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ತಾಲೂಕು ಮಟ್ಟದ ಕೆರೆ ಸಂರಕ್ಷಣೆ ಪ್ರಾಧಿಕಾರದ ಆಶ್ರಯದಲ್ಲಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿ, ಕೇವಲ ಕಾರ್ಯಕ್ರಮದ ಭಾಷಣದಲ್ಲಿ ಒಬ್ಬರನ್ನೊಬ್ಬರ ದೂರುವುದು, ಆದೇಶ ಮಾಡುವುದರಿಂದ ಪರಿಸರ ಅಥವಾ ಕೆರೆಗಳ ರಕ್ಷಣೆ
ಸಾಧ್ಯವಿಲ್ಲ. ನಾವು ನಮ್ಮ ಜವಾಬ್ದಾರಿ ಅರಿತು ದಾಖಲೆಗಳ ಮೂಲಕ ಸಮಸ್ಯೆ ಪರಿಹಾರ ಮಾಡಲು ಸಂಬಂಧಪಟ್ಟ ಇಲಾಖೆಗೆ ಪತ್ರದ ಮೂಲಕ ದೂರು ನೀಡಬೇಕು. ಕೆರೆಗಳನ್ನು ಹಾಳು ಮಾಡುತ್ತಿರುವವರು ಹಾಗೂ ಅದರ ರಕ್ಷಣೆಯನ್ನು ಹೇಗೆ ಮಾಡಬೇಕು ಎನ್ನುವುದನ್ನು ತಿಳಿಯಲು ಕರ್ನಾಟಕದ ಕೆರೆ ಉಳಿವಿಗೆ 2014ರ ಸಂರಕ್ಷಣಾ ಕಾಯ್ದೆ ಓದಬೇಕು. ಅದರಲ್ಲಿ ಇರುವ ಕಾನೂನಿನಡಿಯಲ್ಲಿ ನಾವು ಕೆರೆ ಉಳಿಸಲು ಮುಂದಾಗಬೇಕು ಎಂದರು.

ಪರಿಸರ ಉಳಿವಿಗೆ ಅರಿವು ಅಗತ್ಯ: ನಮ್ಮ ಮುಂದಿನ ಪೀಳಿಗೆಗೆ ಪರಿಸರ ಉಳಿಸಬೇಕು ಎನ್ನುವ ಅರಿವು ಇರಬೇಕು. ನಮ್ಮ ಮಕ್ಕಳ ಕೈ ಮಣ್ಣಾಗಬಾರದು ಎನ್ನುವಂತೆ ನಾವಿದ್ದೇವೆ, ನಾವು ನಮ್ಮ ಮಕ್ಕಳಿಗೆ ಪರಿಸರ, ಕೆರೆ, ಕುಂಟೆಗಳ ಉಳಿವಿಗೆ ಅವರಲ್ಲಿ ಜಾಗೃತಿ ಬರುವಂತೆ ಮನಸ್ಸಿಗೆ ತುಂಬಬೇಕು. ನಮ್ಮನ್ನು ಹುಟ್ಟಿಸಿದ ಭಗವಂತನ ಸೇವೆ ಮಾಡಬೇಕು. ನಾವು ಕಾಯಕದಿಂದ ಮಾತ್ರ ಅದನ್ನು ಮಾಡಲು ಸಾಧ್ಯ. ದೇಶಕ್ಕಾಗಿ ಯುವ ಶಕ್ತಿ ಒಂದಾಗಬೇಕು. ಹಿರಿಯರಿಗೆ
ಗೌರವ ಕೊಡಬೇಕು. ಕೆರೆ ರಕ್ಷಣೆ ಆಗಬೇಕಾದರೆ ಯುವಶಕ್ತಿ ಮುಂದೆ ಬರಬೇಕು. ಪರಿಸರ ಉಳಿವಿಗೆ ನಾವು ಹೋರಾಟ ಮಾಡಬೇಕು ಎಂದರು.

ಕೆರೆ ನೀರು ಸಂಪೂರ್ಣ ಮಲೀನ: ವಕೀಲರ ಸಂಘದ ಅಧ್ಯಕ್ಷ ವೈ.ಪ್ರಕಾಶ್‌ ಮಾತನಾಡಿ, ಆನೇಕಲ್‌ ತಾಲೂಕಿನ ಹಲವು ಕೆರೆಯಲ್ಲಿ ಕೆಮಿಕಲ್‌ ನೀರು ತುಂಬಿದ್ದು, ಸಂಪೂರ್ಣ ಮಲೀನವಾಗಿದೆ. ಇದಕ್ಕೆ ಕೆಲವೊಂದು ಕೈಗಾರಿಕೆಗಳ ಕಲುಷಿತ ನೀರು ಹರಿದು ಬರುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಬಿದರಗುಪ್ಪೆ ಕೆರೆ, ಬಳ್ಳೂರು ಕೆರೆ ಏನಾಗಿದೆ ಎನ್ನುವುದರ ಬಗ್ಗೆ ಎಲ್ಲರಿಗೂ ಅರಿವಿದೆ.

ಆದರೆ, ಕ್ರಮಕ್ಕೆ ಯಾರು ಮುಂದಾಗುತ್ತಿಲ್ಲ. ಮುತ್ತಾ ನಲ್ಲೂರು ಕೆರೆ, ಬೆಳ್ಳಂದೂರು ಕೆರೆಯಂತೆ ಕೆಮಿಕಲ್‌ ತುಂಬಿ ಹರಿಯುತ್ತದೆ. ಸಂಬಂಧಪಟ್ಟವರು ಇದರ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು ಎಂದರು. ತಾಪಂ ಇಒ ಲಕ್ಷ್ಮೀನಾರಾಯಣ ಮಾತನಾಡಿ, ಆನೇಕಲ್‌ ತಾಲೂಕಿನಲ್ಲಿ ನಾವು ಕೆರೆಗಳ ಉಳಿಗಾಗಿ ಸಿಎಸ್‌ಆರ್‌ ಯೋಜನೆಯಡಿ ಹಲವೆಡೆ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕೆರೆ ಅಭಿವೃದ್ಧಿಗಾಗಿ ಕಾರ್ಯಕ್ರಮ ರೂಪಿಸುತ್ತೇವೆ ಎಂದರು.

ಸಹಾಯಕ ಸರ್ಕಾರಿ ಅಭಿಯೋಜಕ ಆರ್‌. ಚಂದ್ರಶೇಖರ್‌, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಪಿ.ಎನ್‌.ಶಾಲಿನಿ, ಭಾರ್ಗವಿ, ಇ.ಎಸ್‌.ಜಿ ಸಂಸ್ಥೆಯ ಎಂ.ಈಶ್ವರಪ್ಪ, ಲಿಯೋ ಎಫ್ ಸಲ್ಮಾನ ಇದ್ದರು.

ಜಿಗಣಿ ಕೆರೆ ನಿರ್ಲಕ್ಷ್ಯ ಬೇಡ
ಜಿಗಣಿ ಕೆರೆಯನ್ನು ಕಲುಷಿತ ಆದರೂ ಕೂಡ ಸ್ವತ್ಛತೆಗೆ ಮುಂದೆ ಬಂದಿಲ್ಲ. ನಾವು ಭೇಟಿ ನೀಡಿ, ಅದನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಸ್ವತ್ಛ ಮಾಡಲು ಒಪ್ಪಿಗೆ ಸೂಚಿಸಿದ್ದರೂ ಕೆಲಸ ಪ್ರಾರಂಭವಾಗಿಲ್ಲ. ನಮ್ಮ ದೇಶದ ಅರಣ್ಯ, ಪರಿಸರ, ಕೆರೆ ರಕ್ಷಣೆ ಆಗದೇ ಹೊರತು ಬದಲಾವಣೆ ಸಾಧ್ಯವಿಲ್ಲ. ನಮ್ಮ ಜವಾಬ್ದಾರಿ ಅರಿತು ನಾವು ಕೆಲಸ ಮಾಡಬೇಕು ಎಂದು ಸಂದೀಪ್‌ ಸಾಲಿಯಾನ್‌ ಹೇಳಿದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.