ಮಣ್ಣು ಉಳಿಸಿ ಅಭಿಯಾನಕ್ಕೆ ಸಂಭ್ರಮದ ತೆರೆ

ಮಣ್ಣು ಉಳಿಸಿ ಎಂದು ಜಗತ್ತಿನಾದ್ಯಂತ ಸಂಚಾರ ಮಾಡಿ ಜಾಗೃತಿ ಮೂಡಿಸಿದ್ದಾರೆ.

Team Udayavani, Jun 20, 2022, 6:05 PM IST

ಮಣ್ಣು ಉಳಿಸಿ ಅಭಿಯಾನಕ್ಕೆ ಸಂಭ್ರಮದ ತೆರೆ

ಮೈಸೂರು: ಜಗತ್ತಿನಾದ್ಯಂತ 100 ದಿನ, ಅಂದಾಜು 27 ಸಾವಿರ ಕಿ.ಮೀ ಕ್ರಮಿಸಿದ ಈಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದ “ಮಣ್ಣು ಉಳಿಸಿ’ ಅಭಿಯಾನ ಮೈಸೂರಿನಲ್ಲಿ ಭಾನುವಾರ ಸಂಪನ್ನಗೊಂಡಿತು.

ನಗರದ ಮಾನಸಗಂಗೋತ್ರಿಯ ಬಯಲುರಂಗಮಂದಿರದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯ ಸಮ್ಮುಖದಲ್ಲಿ “ಮಣ್ಣು ಉಳಿಸಿ’ ಅಭಿಯಾನ ಅದ್ಧೂರಿಯಾಗಿ ತೆರೆಕಂಡಿತು. 2022ರ ಮಾ.21ರಂದು ಸದ್ಗುರು ಜಗ್ಗಿ ವಾಸುದೇವ ಅವರು ಲಂಡನ್‌ನಲ್ಲಿ ಅಭಿಯಾನದ ಅಂಗವಾಗಿ ಬೈಕ್‌ನಲ್ಲಿ ಪ್ರವಾಸ ಆರಂಭಿಸಿದ್ದರು. 74 ರಾಷ್ಟ್ರಗಳು ಸಂಚರಿಸಿ ಮಣ್ಣು ಸಂರಕ್ಷಣೆ ಕುರಿತು ಅರಿವು ಮೂಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸದ್ಗುರು ಜಗ್ಗಿ ವಾಸುದೇವ್‌ ಅವರು, ಈ ಅಭಿಯಾನಕ್ಕೆ 74 ದೇಶಗಳ ಬೆಂಬಲ ಸಿಕ್ಕಿದೆ. ಅಷ್ಟೇ ಅಲ್ಲ, ಮಣ್ಣಿನ ಸಂರಕ್ಷಣೆ ಕುರಿತು ತಜ್ಞರು ಸಿದ್ಧರಪಡಿಸಿರುವ ವೈಜ್ಞಾನಿಕ ವರದಿಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ನೀಡಿದ್ದಾರೆ. ಈ ವರದಿಯನ್ನು ಜಾರಿ ಮಾಡಲು ಗಂಭೀರ ಚಿಂತನೆ ಮಾಡಿವೆ. ಜತೆಗೆ, ಅದಕ್ಕಾಗಿ ತಜ್ಞರ ಸಮಿತಿ ರಚನೆ ಮಾಡುವುದಾಗಿ ಆಶ್ವಾಸನೆ ನೀಡಿವೆ ಎಂದು ತಿಳಿಸಿದರು.

ಮಣ್ಣು ಸಾಮಾನ್ಯ ಸಂಗತಿ. ಅದು ಜೀವನ ಪ್ರಶ್ನೆ. ಒಂದು ವರ್ಷದಲ್ಲಿ 20 ಸಾವಿರ ವಿವಿಧ ಜೀವಚರಗಳು, ಜೀವ ಪ್ರಭೇದಗಳು ನಶಿಸುತ್ತಿವೆ. ಮುಂದಿನ 20-25 ವರ್ಷದಲ್ಲಿ ಜೀವಸಂಕುಲ ನಶ್ವರವಾಗುವ ಆತಂಕ ಎದುರಾಗಿದೆ. ಅದಕ್ಕಾಗಿ ಮಣ್ಣಿನ ಸಂರಕ್ಷಣೆಗಾಗಿ ನಾವು ಅಭಿಯಾನ ನಡೆಸಬೇಕಾಯಿತು. ವಿವಿಧ ದೇಶಗಳಿಗೆ ಸಂಚರಿಸಿ ಅಲ್ಲಿಯ ಕೃಷಿ ಸಚಿವರು, ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ಮಾಡಿ ಮನವರಿಕೆ ಮಾಡಿಕೊಡಲಾಗಿದೆ. ಈ ಕುರಿತು
ಸಕಾರಾತ್ಮಕ ಸ್ಪಂದನೆಯೂ ದೊರೆತಿದೆ ಎಂದರು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಭೂಮಿ, ಪ್ರಕೃತಿಯನ್ನು ದೇವರಂತೆ ಪೂಜಿಸುವ ಸಂಸ್ಕೃತಿ ಈ ಜಗತ್ತಿನಲ್ಲಿ ಇದ್ದರೆ ಅದು ಭಾರತೀಯ ಸಂಸ್ಕೃತಿ. ಒಬ್ಬ ರೈತ ಭೂಮಿಯನ್ನು ಉಳುಮೆ ಮಾಡುವ ಮೊದಲು ಭೂಮಿಗೆ ಪೂಜೆ ಮಾಡುತ್ತಾನೆ. ಬಿತ್ತನೆ ಮಾಡುವ ಮುನ್ನ, ಫ‌ಸಲು ತೆಗೆಯುವ ಮುನ್ನವೂ ಪೂಜಿಸುವುದು ನಮ್ಮ ಸಂಸ್ಕೃತಿ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಭೂಮಿ ಈಗಿರುವಷ್ಟೇ ಇರುತ್ತದೆ. ಅದನ್ನು ವಿಸ್ತರಣೆ ಮಾಡಲು ಸಾಧ್ಯವಿಲ್ಲ. ಈ ಅಂಶವನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ಭೂಮಿಗೆ ಬೇಡವಾದದ್ದನ್ನು ಸೇರಿಸದೇ ಇದ್ದರೆ ಅದು ಸ್ವತ್ಛವಾಗಿರುತ್ತದೆ. ಒಂದು ಎರೆಹುಳು ಮಾಡುವ ಕೆಲಸವನ್ನು ಮನುಷ್ಯ ತನ್ನ ಇಡೀ ಜೀವನದಲ್ಲಿ ಮಾಡಲಾರ. ಹಾಗಾಗಿ ಭೂ ಸವಕಳಿ, ಭೂಮಿಗೆ ರಾಸಾಯನಿಕ ಸೇರುವುದನ್ನು ತಪ್ಪಿಸಿ ಭೂಮಿಯನ್ನು ರಕ್ಷಿಸಿ ಎಂದು ಕರೆ ನೀಡಿದರು.

ಸದ್ಗುರು ಜಗ್ಗಿ ವಾಸುದೇವ್‌ ಅವರು ಪ್ರಕೃತಿ ಮತ್ತು ಭೂಮಿಯ ಬಗ್ಗೆ ಇಟ್ಟಿರುವ ಅಪಾರ ಪ್ರೇಮವೇ ಈ ಎಲ್ಲಾ ಕಾರ್ಯಕ್ರಮಗಳಿಗೆ ಪ್ರೇರಣೆ. 64ನೇ ವಯಸ್ಸಿನಲ್ಲೂ ಮೋಟರ್‌ ಸೈಕಲ್‌ ಏರಿ 27 ರಾಷ್ಟ್ರಗಳನ್ನು ಸುತ್ತಿ ಭೂಮಿ ಉಳಿಸುವಂತೆ ಜಾಗೃತಿ ಮೂಡಿಸಿದ್ದಾರೆ. ಇದಕ್ಕೂ ಮೊದಲು ರಿವರ್‌ ಫಾರ್‌ ರ್ಯಾಲಿ, ಕಾವೇರಿ ಕಾಲಿಂಗ್‌ ಎಂಬ ರ್ಯಾಲಿ ಮಾಡಿದ್ದರು. ಈಗ ಮಣ್ಣು ಉಳಿಸಿ ಎಂದು ಜಗತ್ತಿನಾದ್ಯಂತ ಸಂಚಾರ ಮಾಡಿ ಜಾಗೃತಿ ಮೂಡಿಸಿದ್ದಾರೆ. ಮುಂದಿನ ರ್ಯಾಲಿ
ಮಾನವೀತೆಗಾಗಿ ಆದರೆ ಒಳ್ಳೆಯದು ಎಂದು ಶುಭ ಹಾರೈಸಿದರು.

ಪ್ರಕೃತಿ ಮತ್ತು ಭೂಮಿಯ ರಕ್ಷಣೆ ಸಂಬಂಧ ನೃತ್ಯ ರೂಪಕವನ್ನು ಕಲಾವಿದರು ಪ್ರದರ್ಶಿಸಿದರು. ಈ ಸಂದರ್ಭ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿ ಭೂಮಿಯನ್ನು ಉಳಿಸುವ ಬಗ್ಗೆ ಪ್ರತಿಜ್ಞೆ ಮಾಡಿದರು. ವೇದಿಕೆಯಲ್ಲಿ ಸಂಸದ ಪ್ರತಾಪ್‌ ಸಿಂಹ ಇದ್ದರು.

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.