ಗ್ರಾಮೀಣ ಭಾಗದಲ್ಲಿ ಸದ್ದಿಲ್ಲದೇ ಯೋಗ ಜಾಗೃತಿ

ಹಳ್ಳಿ ಸರ್ಕಾರಿ ಶಾಲೆ ಮಕ್ಕಳ ಯೋಗಾಯೋಗ ; 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ

Team Udayavani, Jun 21, 2022, 11:49 AM IST

4

ಹುಬ್ಬಳ್ಳಿ: ವಿಶ್ವವ್ಯಾಪಿ ಪಸರಿಸುತ್ತಿರುವ ಯೋಗ ತರಬೇತಿ ನಗರ ಪ್ರದೇಶಗಳಿಗೆ ಸೀಮಿತವಾಗುತ್ತಿದ್ದು, ಗ್ರಾಮೀಣದಲ್ಲಿ ಅಷ್ಟೊಂದಾಗಿ ಪ್ರಾಮುಖ್ಯತೆ ಪಡೆದಿಲ್ಲ. ಮುಂದಿನ ಕಾಲಘಟ್ಟದಲ್ಲಾದರೂ ಹಳ್ಳಿ ಮಕ್ಕಳು ಯೋಗಾಭ್ಯಾಸ ಮಾಡಬೇಕು ಎನ್ನುವ ಮಹತ್ವಾಕಾಂಕ್ಷೆಯೊಂದಿಗೆ ಕುಸುಗಲ್ಲ ಗ್ರಾಮದ ಡಾ| ಶ್ರೀಧರ ಹೊಸಮನಿ ಅವರು ಯೋಗ ಪಟುವಾಗಿ, ಯೋಗ ಶಿಕ್ಷಕರಾಗಿ ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಯೋಗ ತರಬೇತಿ ನೀಡುವ ಕಾಯಕದಲ್ಲಿ ತೊಡಗಿದ್ದಾರೆ.

ಕಳೆದ 10 ವರ್ಷಗಳಿಂದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೇಸಿಕ್‌ ಯೋಗ ತರಬೇತಿ ನೀಡುತ್ತಿದ್ದಾರೆ. ಯೋಗ ಶಕ್ತಿ ಕೇಂದ್ರ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡಿದ್ದು, 12,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇವರಿಂದ ಯೋಗ ತರಬೇತಿ ಪಡೆದಿದ್ದಾರೆ. ಇನ್ನೂ ಆಸಕ್ತ ಗ್ರಾಮಗಳಲ್ಲಿ 8-15 ದಿನಗಳ ಯೋಗ ಶಿಬಿರ ಆಯೋಜಿಸುತ್ತಿದ್ದಾರೆ. ಇದಕ್ಕೆ ತಗಲುವ ಖರ್ಚನ್ನು ಶ್ರೀಧರ ತಮ್ಮ ದುಡಿಮೆಯ ಒಂದಿಷ್ಟು ಭಾಗವನ್ನು ವಿನಿಯೋಗಿಸುತ್ತ ಬಂದಿದ್ದಾರೆ. ಇಲ್ಲಿಯವರೆಗೆ 100ಕ್ಕೂ ಹೆಚ್ಚು ಉಚಿತ ತರಬೇತಿ ಶಿಬಿರ ಆಯೋಜಿಸಿದ್ದಾರೆ.

ಬಾಲ್ಯದಲ್ಲಿಯೇ ಯೋಗ ಬಗ್ಗೆ ಆಸಕ್ತಿ ಹೊಂದಿದ್ದ ಶ್ರೀಧರ ಕವಿವಿಯ ಯೋಗ ಅಧ್ಯಯನ ವಿಭಾಗದಲ್ಲಿ ಪಿಜಿ ಡಿಪ್ಲೊಮಾ ಕೋರ್ಸ್‌ಅನ್ನು ಪ್ರಥಮ ಸ್ಥಾನದಲ್ಲಿ ಪೂರ್ಣಗೊಳಿಸಿದ್ದಾರೆ. ರಾಜ್ಯ, ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಯೋಗದ ಜೊತೆಗೆ ಸೈಕಲ್‌ ಸವಾರಿ ಅಚ್ಚುಮೆಚ್ಚು. ಬಹುತೇಕ ಕಾರ್ಯಗಳಿಗೆ ಸೈಕಲ್‌ ಬಳಸಿದರೆ, ಅನಿವಾರ್ಯ-ತುರ್ತು ಸಂದರ್ಭದಲ್ಲಿ ಮಾತ್ರ ಬೈಕ್‌ ಬಳಸುತ್ತಾರೆ. ಅಂತಾರಾಷ್ಟ್ರೀಯ ಯೋಗ ದಿನದಂದೇ ಬಾಳಸಂಗಾತಿಯನ್ನು ವರಿಸಿದ್ದು, ಮದುವೆ ಮಂಟಪದಲ್ಲೇ ಆಶೀರ್ವದಿಸಲು ಬಂದವರಿಗೆ ಕೆಲ ಆಸನಗಳನ್ನು ಮಾಡಿಸಿ ಯೋಗದ ಮಹತ್ವ ಸಾರಿದ್ದರು.

ಕಾಯಕ ಯೋಗಿ: ಪಾಲಿಕೆಯಲ್ಲಿ ಕಂಪ್ಯೂಟರ್‌ ಆಪರೇಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಧರ ಕಾಯಕಯೋಗಿ. ಬೆಳಗ್ಗೆ 6 ಗಂಟೆಯಿಂದ ಆರಂಭವಾಗುವ ಇವರ ದಿನಚರಿ ಬೆಳಗ್ಗೆ ಗ್ರಾಮದಲ್ಲಿ ಯೋಗ ತರಬೇತಿ, 10 ಗಂಟೆಯಿಂದ ಪಾಲಿಕೆಯಲ್ಲಿ ಕರ್ತವ್ಯ, ಸಂಜೆ ನಂತರ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ, ವಾರದಲ್ಲಿ ನಾಲ್ಕು ದಿನ ಪಾಲಿಕೆಯ ಆಯಾ ಆಸ್ಪತ್ರೆಗಳ ಪ್ರದೇಶ ವ್ಯಾಪ್ತಿಯಲ್ಲಿ ಯೋಗ ತರಬೇತಿ, ಇದರ ನಡುವೆ ಆಯುಷ್‌ ಇಲಾಖೆ, ಬಾಲಕ ಬಾಲಮಂದಿರದಲ್ಲಿ ಯೋಗ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಾರೆ. ಯೋಗ ಸಾಧನೆಗೆ ತಮಿಳುನಾಡು ಯುನಿವರ್ಸಲ್‌ ವಿವಿ ಡಾಕ್ಟರೇಟ್‌ ನೀಡಿ ಗೌರವಿಸಿದೆ. ಇವರ ನಿಸ್ವಾರ್ಥ ಸೇವೆ ಮೆಚ್ಚಿ ಹಲವು ಸಂಘ-ಸಂಸ್ಥೆಗಳು ಸನ್ಮಾನಿಸಿ ಸತ್ಕರಿಸಿವೆ.

ಗ್ರಾಮೀಣ ಭಾಗದಲ್ಲಿ ಯೋಗ ಜಾಗೃತಿ ಮೂಡಿಸಿ ಆರೋಗ್ಯ ಸುಧಾರಿಸುವ ಕಾರ್ಯ ಮಾಡಬೇಕು ಎನ್ನುವ ಆಸೆ ಹೊಂದಿದ್ದೇನೆ. ಇದಕ್ಕಾಗಿ ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಉಚಿತವಾಗಿ ಯೋಗ ತರಬೇತಿ ನೀಡುತ್ತಿದ್ದೇನೆ. ಇದರೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಕೂಡ ಆಸಕ್ತಿಯಿಂದ ಯೋಗ ಕಲಿಯುತ್ತಿದ್ದಾರೆ. –ಡಾ| ಶ್ರೀಧರ ಹೊಸಮನಿ, ಯೋಗ ಶಿಕ್ಷಕ

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.