ಸರ್ಕಾರದಿಂದ ಯೋಗ ತರಬೇತಿ ಕೇಂದ್ರಗಳು ಆರಂಭವಾಗಲಿ: ಶಾಸಕ ರಾಜಶೇಖರ ಪಾಟೀಲ
Team Udayavani, Jun 21, 2022, 12:17 PM IST
ಹುಮನಾಬಾದ್: ಆರೋಗ್ಯವೇ ಭಾಗ್ಯ. ಆರೋಗ್ಯವನ್ನು ಕಾಪಾಡಿಕೊಳ್ಳಲು ನಿತ್ಯವೂ ಕೆಲವು ಅಭ್ಯಾಸಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳುವುದು ಅಗತ್ಯವಾಗಿದ್ದು, ಪ್ರತಿನಿತ್ಯ ಯೋಗ ಮಾಡುವುದು ರೂಢಿಸಿಕೊಳ್ಳಬೇಕು. ಸರ್ಕಾರದಿಂದ ವಿಶೇಷ ಯೋಗ ತರಬೇತಿ ಕೇಂದ್ರಗಳು ಆರಂಭಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಅಭಿಪ್ರಾಯಪಟ್ಟರು.
ಪಟ್ಟಣದ ವೀರಭದ್ರೇಶ್ವರ ದೇವಸ್ಥಾನ ಹತ್ತಿರದ ದಿ। ಬಸವರಾಜ ಪಾಟೀಲ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಆಡಳಿತ ಹಾಗೂ ಆಯುಷ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯೋಗ ದಿನಾಚರಣೆಯ ನಿಮಿತ್ಯ ಒಂದು ದಿನ ಯೋಗ ಮಾಡಿದರೆ ಸಾಲದು, ಯೋಗವನ್ನು ಪ್ರತಿಯೊಬ್ಬರು ತರಬೇತಿ ಪಡೆದು ಜೀವನದಲ್ಲಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ತರಬೇತಿ ಕೇಂದ್ರಗಳು ಆರಂಭವಿಸಬೇಕು ಎಂದ ಅವರು, ಇಂದು ಇಡೀ ವಿಶ್ವವೇ ಯೋಗಕ್ಕೆ ಮಹತ್ವ ನೀಡುತ್ತಿದ್ದು, ಭಾರತೀಯರಾದ ನಾವುಗಳು ಕೂಡ ಯೋಗ ಆಚರಿಸಿಕೊಂಡು ಬೆಳೆಸಬೇಕು ಎಂದರು.
ಇಂದಿನ ದಿನಗಳಲ್ಲಿ ಒತ್ತಡವಿಲ್ಲದ ಕೆಲಸವೇ ಇಲ್ಲ, ಒತ್ತಡವಿಲ್ಲದ ದಿನವೂ ಇಲ್ಲ. ಮಾನಸಿಕ ಒತ್ತಡ ನಮ್ಮ ಜೀವನದ ಒಂದು ಅಂಗವಾಗಿ ಬಿಟ್ಟಿದೆ. ಮಾನಸಿಕ ಒತ್ತಡಕ್ಕೆ ಮಣಿಯದೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚು ಅಗತ್ಯವಿದ್ದು, ಅದು ಯೋಗದಿಂದ ಸಾಧ್ಯವಿದೆ ಎಂದರು. ನಮ್ಮ ಹಿರಿಯರು ನೂರಾರು ವರ್ಷಗಳ ಕಾಲ ಬದುಕಿ ಜೀವನ ಮಾಡುತ್ತಿದ್ದರು ಅದಕ್ಕೆ ಯೋಗ-ಆಧ್ಯಾತ್ಮ ಮುಖ್ಯವಾಗಿತ್ತು. ಹಳೆ ಪದ್ಧತಿ ನಾವು ಕೂಡ ಅನುಸರಿಸುವ ಕಡೆಗೆ ಮುಖ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧ್ಯಾನ ಪರಿಷತ್ ಸದಸ್ಯ ಡಾ। ಚಂದ್ರಶೇಖರ ಪಾಟೀಲ, ಟಿಎಪಿಎಂಎಸ್ ಅಧ್ಯಕ್ಷ ಅಭಿಷೇಕ್ ಪಾಟೀಲ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮುರಿಗೆಪ್ಪ ವಸ್ತ್ರದ, ಡಾ। ಗೊವಿಂದ್, ಡಾ। ದಯಾನಂದ ಕಾರಬಾರಿ, ಡಾ। ಚಂದ್ರಶೇಖರ ಅಮ್ಲಾಪೂರೆ, ಡಾ। ಖದೀಜಾ ಬೇಗಂ, ಅರಣ್ಯಾಧಿಕಾರಿ ಬಸವರಾಜ ಡಾಂಗೆ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
MUST WATCH
ಹೊಸ ಸೇರ್ಪಡೆ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ