ಕಾಲಮಿತಿ ಮೀರಿದರೆ ಕಪ್ಪು ಪಟ್ಟಿಗೆ
ತುಪ್ಪರಿ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ 150 ಕೋಟಿ ಟೆಂಡರ್ ಪ್ರಕ್ರಿಯೆ ಪೂರ್ಣ
Team Udayavani, Jun 21, 2022, 12:46 PM IST
ನವಲಗುಂದ: ನೂರಾರು ಕೋಟಿ ರೂ.ಅನುದಾನ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದ್ದು, ಗುತ್ತಿಗೆದಾರರು ಸಮಯಕ್ಕೆ ಸರಿಯಾಗಿ ಕಾಮಗಾರಿ ಮುಗಿಸಬೇಕು. ಇಲ್ಲವಾದರೆ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಕೈಮಗ್ಗ ಮತ್ತು ಜವಳಿ ಕಬ್ಬು ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಾಕೀತು ಮಾಡಿದರು.
ತಾಪಂ ಸಭಾಭವನದಲ್ಲಿ ಸೋಮವಾರ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನ ಗ್ರಾಮ ಸಡಕ್ ರಸ್ತೆ ಹಾಗೂ ಮುಖ್ಯ ಗ್ರಾಮೀಣ ರಸ್ತೆಗಾಗಿ 45 ಕೋಟಿಕ್ಕಿಂತಲೂ ಹೆಚ್ಚು ಕಾಮಗಾರಿಗಳ ಪ್ರಗತಿಯಲ್ಲಿದ್ದು, ಇದರ ಜತೆಗೆ ರೈತರಿಗೆ ಅವಶ್ಯವಾಗಿ ಬೇಕಿರುವ ಬೀಜ, ಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಕುಡಿಯುವ ನೀರಿನ ಮಹತ್ವಾಕಾಂಕ್ಷೆ ಯೋಜನೆ ಜಲಜೀವನ ಮಷಿನ್ ಕಾಮಗಾರಿ 72 ಗ್ರಾಮಗಳಲ್ಲಿ ಶೇ.80 ಮುಗಿದಿರುತ್ತದೆ. 400 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರಕ್ಕೆ ರೈತರ ಮನೆ ಬಾಗಿಲಿಗೆ ಕುಡಿಯುವ ನೀರು ತಲುಪಿಸಲಾಗುವುದು. ತುಪ್ಪರಿಹಳ್ಳ ಶಾಶ್ವತ ಪರಿಹಾರಕ್ಕಾಗಿ 321 ಕೋಟಿ ರೂ.ಗಳಲ್ಲಿ 150 ಕೋಟಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಭೂಮಿಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗುವುದೆಂದು ಹೇಳಿದರು.
ತುಪ್ಪರಿಹಳ್ಳದಿಂದ 1 ಟಿಎಂಸಿ ನೀರು ಬಳಕೆ ಮಾಡಿ ಕೃಷಿ ಹಾಗೂ ಇತರೆ ಕೆಲಸಗಳಿಗೂ ಬಳಸಲು ಅನುಮೋದನೆ ಪಡೆಯಲಾಗಿದೆ. ಪಟ್ಟಣದ ವಾಲ್ಮೀಕಿ ಭವನಕ್ಕೆ 1 ಕೋಟಿ ರೂ. ಸೇರಿದಂತೆ ವಿವಿಧ ಸಮುದಾಯ ಭವನಗಳಿಗೆ ಹಣ ಮಂಜೂರು ಮಾಡಲಾಗಿದೆ ಎಂದರು.
ಅಣ್ಣಿಗೇರಿ ಪಟ್ಟಣಕ್ಕೆ 24?7 ಕುಡಿಯುವ ನೀರಿನ ಯೋಜನೆಗೆ 54 ಕೋಟಿ ರೂ.ಅನುದಾನ ಮಂಜೂರಾಗಿದೆ. ಗ್ರಾಮ ಸಡಕ್ ಯೋಜನೆಯಲ್ಲಿ ಹೊಲಗಳ ರೈತರ ರಸ್ತೆಗಳಿಗೆ 50 ಕೋಟಿ ರೂ. ಗಳನ್ನುವ್ಯಯಿಸಲಾಗಿದೆ ಎಂದರು.
ಈ ಮುಂಚೆ 265 ಶಾಲೆಗಳ ಹೊಸ ಕಟ್ಟಡಗಳ ಕಾಮಗಾರಿ ಶೇ.80 ಮುಗಿದಿರುತ್ತವೆ. ಶಲವಡಿ, ಹೆಬ್ಟಾಳ, ಅಣ್ಣಿಗೇರಿ, ನವಲಗುಂದ ಸೇರಿ ಉಳಿದ ಗ್ರಾಮಗಳ ರಸ್ತೆಗಳ ಅಭಿವೃದ್ಧಿಗೆ ಹಣ ವ್ಯಯಿಸಲಾಗಿದೆ ನವಲಗುಂದ ತಾಲೂಕಿನಲ್ಲಿ 4, ಅಣ್ಣಿಗೇರಿ ತಾಲೂಕಿನಲ್ಲಿ 8 ರುದ್ರಭೂಮಿಗಳಿಗೆ ಜಾಗೆ ಖರೀದಿಸಲಾಗಿದೆ. ಇನ್ನು 4 ರುದ್ರಭೂಮಿಗಳಿಗೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಈಗಾಗಲೇ ವಿದ್ಯುತ್ 110 ಕೆ.ವಿ ಸ್ಟೇಷನ್ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೊಳ್ಳಲಿದೆ ಎಂದರು.
ಕೆ.ಡಿ.ಬಿ ಸಭೆಯಲ್ಲಿ ಇಒ ಎಸ್.ಎಮ್.ಕಾಂಬಳೆ, ತಹಶೀಲ್ದಾರ್ ಅನೀಲ ಬಡಿಗೇರ, ಅಣ್ಣಿಗೇರಿ ತಹಶೀಲ್ದಾರ್ ಮಂಜುನಾಥ ಅಮಾಶಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಮಾಯಾಚಾರ್ಯ, ಶಿವಯೋಗಿ ಬೆಳಹಾರ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ