ಸೂರು ವಂಚಿತರಿಗೆ ಮನೆ ಹಂಚಿಕೆ ಸಂಕಲ್ಪ: ದರ್ಶನಾಪುರ


Team Udayavani, Jun 21, 2022, 2:26 PM IST

16house-bilt

ಶಹಾಪುರ: ನಗರದ ಫಿಲ್ಟರ್‌ ಬೆಡ್‌ ಪ್ರದೇಶದಲ್ಲಿ ಇನ್ನೂ ಸುಮಾರು ಎರಡು ನೂರು ನಿವೇಶನಗಳಿದ್ದು, ಅವುಗಳನ್ನು ಸಮರ್ಪಕವಾಗಿ ಪರಿಶೀಲಿಸಿ ಗುರುತಿಸಲಾಗಿದ್ದು, ಈ ಖಾಲಿ ನಿವೇಶನಗಳನ್ನು ಸೂರು ವಂಚಿತ ಫಲಾನುಭವಿಗಳಿಗೆ ಹಂಚಿಕೆ ಮಾಡುವುದರ ಜೊತೆಗೆ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು.

ನಗರದ ಫಿಲ್ಟರ್‌ ಬೆಡ್‌ ಏರಿಯಾದಲ್ಲಿ ಇನ್ನುಳಿದ ನಿವೇಶನಗಳ ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ನಗರದ ಬಸ್‌ ಡಿಪೋ ಹಿಂದಿರುವ ಆಶ್ರಯ ಕಾಲೋನಿಯಲ್ಲಿ 509 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಅದರಲ್ಲಿ ಇನ್ನುಳಿದ 132 ಫಲಾನುಭವಿಗಳಿಗೆ ನಿವೇಶನ ಜಾಗ ಕೊರತೆಯಿಂದಾಗಿ ಅವರಿಗೆ ಇದುವರೆಗೂ ನಿವೇಶನ ಕಲ್ಪಿಸಲಾಗಿಲ್ಲ. ಆ ಫಲಾನುಭವಿಗಳಿಗೆ ಇಲ್ಲಿ ನಿವೇಶನ ನೀಡಲಾಗುವುದು. ಇನ್ನು ಹೆಚ್ಚಿಗೆ ಉಳಿದ ನಿವೇಶನಗಳನ್ನು ಸೂರು ವಂಚಿತ ನಿಜವಾದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಹಂಚಿಕೆ ಮಾಡುವುದರ ಜೊತೆ ಮನೆ ನಿರ್ಮಿಸಿಕೊಡಲಾಗುವುದು. ಈ ನಿವೇಶನಗಳ ಫಲಾನುಭವಿಗಳಿಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ನೀರು, ಚರಂಡಿ, ವಿದ್ಯುತ್‌ ಸೌಕರ್ಯ ಒದಗಿಸಿಕೊಡಲಾಗುವುದು. ನನ್ನ ಮತಕ್ಷೇತ್ರದಲ್ಲಿ ಸೂರು ವಂಚಿತ ಕುಟುಂಬಗಳು ಇರಬಾರದೆಂಬ ಸಂಕಲ್ಪ ಮಾಡಿದ್ದು, ಅದನ್ನು ಪ್ರಾಮಾಣಿಕವಾಗಿ ನಿವಾರಿಸುವಲ್ಲಿ ಯತ್ನಿಸುವೆ ಎಂದರು.

ನೀರು ಸರಬರಾಜು ಕಾಮಗಾರಿ ಪರಿಶೀಲನೆ

ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್‌ನಿಂದ 56.86 ಕೋಟಿ ವೆಚ್ಚದಲ್ಲಿ ನಡೆದ ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿ ಭರದಿಂದ ಸಾಗಿದೆ. ಅಲ್ಲದೇ ಕೆಕೆಆರ್‌ ಡಿಬಿ ಯೋಜನೆಯಲ್ಲಿ 16 ಕೋಟಿ ವೆಚ್ಚದಲ್ಲಿ 16 ಎಂಎಲ್‌ಡಿ ನೀರು ಶುದ್ಧೀಕರಿಸಿ ನಗರಕ್ಕೆ ಸರಬರಾಜು ಮಾಡುವ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ. ಇನ್ನು ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಕಾಮಗಾರಿಯಿಂದ ನಗರಕ್ಕೆ ಬಹಳ ವರ್ಷಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಇಡಿ ನಗರಕ್ಕೆ ಶಾಶ್ವತವಾಗಿ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ. ಅಲ್ಲದೇ ನಗರದಲ್ಲಿ ಬಹಳ ವರ್ಷಗಳ ಹಿಂದೆ ಹಾಕಲಾದ ಕುಡಿಯುವ ನೀರು ಸರಬರಾಜು ಪೈಪ್‌ ಲೈನ್‌ಗಳು ಒಡೆದು ಅಲ್ಲಲ್ಲಿ ಹಾಳಾಗಿ ಹೋಗಿವೆ. ಹೊಸ ಪೈಪ್‌ಲೈನ್‌ ಅಳವಡಿಕೆಗೆ ಅಂದಾಜು 80 ಕೋಟಿ ರೂ. ವೆಚ್ಚವಾಗಲಿದ್ದು, ಈ ಕುರಿತು ಅನುದಾನ ಮಂಜೂರಾತಿ ನೀಡುವಂತೆ ಈಗಾಗಲೇ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ರಾಜುಗೌಡರಿಗೆ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌ ಅವರಿಗೆ ಮನವಿ ಮಾಡಲಾಗಿದ್ದು, ಈ ವರ್ಷ ಅವರಿಂದ ಹಣ ಮಂಜೂರಾತಿ ದೊರೆಯುವ ಭರವಸೆ ಇದೆ. ಇದಕ್ಕೆ ಇಬ್ಬರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಆಶ್ರಯ ಸಮಿತಿ ಅಧ್ಯಕ್ಷ ವಸಂತ ಸುರುಪುಕರ್‌, ನಗರಸಭೆ ಅಮಲಪ್ಪ ಬಾದ್ಯಾಪುರ, ಪೌರಾಯುಕ್ತರಾದ ಓಂಕಾರ ಪೂಜಾರಿ, ಎಇಇ ನಾನಾಸಾಹೇಬ್‌, ಪರಿಸರ ಅಭಿಯಂತರ ಹರೀಶ್‌ ಸಜ್ಜನಶೆಟ್ಟಿ, ಜೆಇ ಮಲ್ಲಿಕಾರ್ಜುನ, ಮುಖಂಡರಾದ ನ್ಯಾಯವಾದಿ ಚಂದ್ರಶೇಖರ ಲಿಂಗದಹಳ್ಳಿ, ಶಿವಮಾಂತ ಚಂದಾಪುರ, ಮಹಾದೇವಪ್ಪ ಸಾಲಿಮನಿ, ಕಾಂಗ್ರೆಸ್‌ ಕಾರ್ಮಿಕ ಘಟಕದ ಅಧ್ಯಕ್ಷ ವಿಜಯಕುಮಾರ ಎದುರಮನಿ, ಯಲ್ಲಪ್ಪ ಮಾಸ್ತರ ಹಳ್ಳಿಕಟ್ಟಿ, ಕಾಂಗ್ರೆಸ್‌ ಉಪಾಧ್ಯಕ್ಷ ಬಸವರಾಜ ನಾಯ್ಕಲ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.