ಯೋಗ ಸಾಧನೆಗೆ ಸಮಯ ಮೀಸಲಿಡಿ
ಆರೋಗ್ಯ ಭಾಗ್ಯ ಎಲ್ಲ ಭಾಗ್ಯಗಳಿಗಿಂತ ಮಿಗಿಲು ; ಇಷ್ಟಲಿಂಗ ಪೂಜೆಯಲ್ಲಿಯೇ ಯೋಗವಿದೆ: ಶ್ರೀ
Team Udayavani, Jun 21, 2022, 3:29 PM IST
ಬೆಳಗಾವಿ: ಧರ್ಮಭೂಮಿ ಎನಿಸಿದ ಭಾರತದಲ್ಲಿ ಯೋಗ ಸಾಧನೆಗೆ ಬಹಳಷ್ಟು ಪ್ರಾಮುಖ್ಯತೆ ಕೊಟ್ಟಿದ್ದಾರೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮದ ಶಿವಯೋಗಾಚರಣೆಯಲ್ಲಿಯೇ ಯೋಗದ ಹಿರಿಮೆಯನ್ನು ಬೋಧಿಸಿದ್ದಾರೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದರು.
ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಹಮ್ಮಿಕೊಂಡಿರುವ ಉಚಿತ ಯೋಗ ಶಿಬಿರದ ನಾಲ್ಕನೇ ದಿನದಂದು ಸೋಮವಾರ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಭಾರತದಲ್ಲಿ ಧರ್ಮ, ಸಂಸ್ಕೃತಿ, ಪರಂಪರೆ ಇವುಗಳಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಋಷಿಗಳು, ಮುನಿಗಳು, ಆಚಾರ್ಯರು, ಸಂತರು ಬಾಳಿ ಬದುಕಿದ ಈ ನಾಡಿನಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಸುಖೀ ಜೀವನ ನಡೆಸಬೇಕು ಎನ್ನುವ ದೃಷ್ಟಿಯಿಂದ ಅಧ್ಯಾತ್ಮದಲ್ಲಿ ಯೋಗದ ಬೋಧನೆ ಮಾಡಲಾಗಿದೆ. ಆರೋಗ್ಯ ಭಾಗ್ಯ ಎಲ್ಲ ಭಾಗ್ಯಗಳಿಗಿಂತ ಮಿಗಿಲು. ಎಲ್ಲ ಸಂಪತ್ತಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಹೀಗಾಗಿ ನಮ್ಮ ಪೂರ್ವಜರು ನಿತ್ಯದ ಬದುಕಿನಲ್ಲಿ ಯೋಗ ಆಚರಿಸಿಕೊಂಡು ಬಂದಿದ್ದನ್ನು ಕಾಣುತ್ತೇವೆ ಎಂದರು.
ಶ್ರೀ ಜಗದ್ಗುರು ರೇಣುಕಾಚಾರ್ಯರ ಬೋಧನೆಯಂತೆ ಇಷ್ಟಲಿಂಗ ಪೂಜೆಯಲ್ಲಿಯೇ ಯೋಗವಿದೆ. ಅಷ್ಟಾಂಗ ಯೋಗ ಸಾಧನೆಯಿಂದ ದೈಹಿಕ ಆರೋಗ್ಯ ಮತ್ತು ಮಾನಸಿಕ ಶಾಂತಿ ಸಾಧ್ಯ. ಒತ್ತಡದ ಬದುಕಿನಲ್ಲಿ ಸಿಲುಕಿದ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ದಿನನಿತ್ಯ ಅರ್ಧಗಂಟೆ ಯೋಗಭ್ಯಾಸ ಮಾಡಿದರೆ ಮಾನಸಿಕ ಶಾಂತಿ- ಸಮೃದ್ಧ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಯೋಗವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿರುವುದು ಹೆಮ್ಮೆಯ ಸಂಗತಿ. ಮೋದಿ ರಾಜಕಾರಣಿ ಮಾತ್ರ ಅಲ್ಲ. ಅವರೊಬ್ಬ ಅಧ್ಯಾತ್ಮ ಸಾಧಕ ಮತ್ತು ಸಂತ ಶ್ರೇಷ್ಠ. ಪ್ರತಿಯೊಬ್ಬರೂ ತಮ್ಮ ಆರೋಗ್ಯಕ್ಕಾಗಿ, ಕುಟುಂಬದ ಸುಖೀ ಜೀವನಕ್ಕಾಗಿ ತಮ್ಮ ದೈನಂದಿನ ಬದುಕಿನಲ್ಲಿ ಯೋಗ ಸಾಧನೆಗಾಗಿ ಸಮಯ ಮೀಸಲಿಡಬೇಕು. ಯೋಗ ಸಾಧನೆಗೆ ಜಾತಿ, ಮತ, ಪಂಥಗಳ ಸೋಂಕಿಲ್ಲ ಎಂದು ಜಗದ್ಗುರುಗಳು ತಿಳಿಸಿದರು.
ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶ್ರೀ ರಂಭಾಪುರಿ ಜಗದ್ಗುರುಗಳ ಆದೇಶದಂತೆ ಐದು ದಿನಗಳ ಕಾಲ ಉಚಿತ ಯೋಗ ತರಬೇತಿ ಶಿಬಿರ ಹಮ್ಮಿಕೊಂಡಿದ್ದೇವೆ. ಸ್ವತ: ಶ್ರೀ ರಂಭಾಪುರಿ ಜಗದ್ಗುರುಗಳು ಯೋಗ ಶಿಬಿರದಲ್ಲಿ ಪಾಲ್ಗೊಂಡು ಯೋಗದ ಬಗೆಗೆ ಮನವರಿಕೆ ಮಾಡಿಕೊಟ್ಟಿರುವುದು ಈ ಭಾಗದ ಭಕ್ತರ ಸೌಭಾಗ್ಯ ಎಂದರು.
ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮಿಗಳು, ಚಂದರಗಿ ಹಿರೇಮಠದ ನಿಯೋಜಿತ ಉತ್ತರಾಧಿಕಾರಿ ರೇಣುಕ ಗಡದೇಶ್ವರ ದೇವರು, ಬೈಲಹೊಂಗಲ ಶಕ್ತಿ ದೇವಾಲಯದ ಮಹಾಂತೇಶ ಶಾಸ್ತ್ರಿಗಳು, ಚಂದ್ರಶೇಖರ ಶಾಸ್ತ್ರಿಗಳು, ಡಾ. ಪದ್ಮನಾಭ ದರಬಾರೆ, ಯೋಗಗುರು ಅಮೋಘ ಜೈನ್ ಸೇರಿದಂತೆ ಯೋಗ ಶಿಬಿರಾರ್ಥಿಗಳು ಇದ್ದರು. ಸವಣೂರಿನ ಡಾ. ಗುರುಪಾದಯ್ಯ ಸಾಲಿಮಠ ನಿರೂಪಿಸಿದರು.
ರಂಭಾಪುರಿ ಪೀಠಕ್ಕೆ 12 ಸಾವಿರ ಶಾಖಾ ಮಠ ಇವೆ. ಎಲ್ಲ ಮಠಗಳಲ್ಲಿಯೂ ಯೋಗ ದಿನ ಆಚರಿಸಲಾಗುತ್ತಿದೆ. ಎಲ್ಲ ಧರ್ಮ ಪೀಠಗಳಲ್ಲಿ ಮತ್ತು ಮಠಗಳಲ್ಲಿ ಯೋಗ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದರೆ ಮುಂದಿನ ದಿನಮಾನದಲ್ಲಿ ಜನ ಸಮುದಾಯದ ಮೇಲೆ ಉತ್ತಮ ಪ್ರಭಾವ ಉಂಟಾಗಲಿದೆ. –ಜಗದ್ಗುರು ಡಾ| ವೀರಸೋಮೇಶ್ವರ ಶಿವಾಚಾರ್ಯ ಭಗತ್ಪಾದರು, ರಂಭಾಪುರಿ ಪೀಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.