‘ಪ್ರೋಗ್ರೆಸ್‌’ ಯೋಜನೆಗೆ ಚಾಲನೆ

ಸುಸ್ಥಿರ ಜೀವನೋಪಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಿಸರ ವ್ಯವಸ್ಥೆಯನ್ನು ರಚಿಸುವುದು ಮುಖ್ಯ

Team Udayavani, Jun 21, 2022, 6:14 PM IST

‘ಪ್ರೋಗ್ರೆಸ್‌’ ಯೋಜನೆಗೆ ಚಾಲನೆ

ಚಾಮರಾಜನಗರ: ಜಿಲ್ಲೆಯ ಮಾರ್ಟಳ್ಳಿ ಹಾಗೂ ರಾಮಾಪುರ ಗ್ರಾಮದ 400 ಮಂದಿ ಫ‌ಲಾನುಭವಿಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಇಂದುಶ್ರೀ ಫೌಂಡೇಶನ್‌ ಹಾಗೂ ಬಿಎನ್‌ಪಿ ಪರಿಬಾಸ್‌ ಸಹಭಾಗಿತ್ವದಲ್ಲಿ ಗ್ರಾಮೀಣ ಬುಡಕಟ್ಟು ಜನರಿಗೆ ಉದ್ಯಮಶೀಲತೆ ಕಲ್ಪಿಸುವ ಪ್ರೋಗ್ರೆಸ್‌ ಯೋಜನೆಗೆ ಮಾರ್ಟಳ್ಳಿಯಲ್ಲಿ ಚಾಲನೆ ನೀಡಲಾಯಿತು.

ಬಿದಿರು ಉತ್ಪನ್ನಗಳನ್ನು ತಯಾರಿಸುವ ಜಿಲ್ಲೆಯ ಮಾರ್ಟಳ್ಳಿ ಮತ್ತು ರಾಮಾಪುರ ಗ್ರಾಮದ 400 ಫ‌ಲಾನುಭವಿಗಳಿಗೆ ಪ್ರಯೋಜನವಾಗಲಿದ್ದು, ಒಟ್ಟಾರೆ 3200 ಜನರಿಗೆ ಪರೋಕ್ಷವಾಗಿ ಅನುಕೂಲವಾಗಲಿದೆ.

ಈ ಯೋಜನೆಯು ರಾಜ್ಯದ ಗ್ರಾಮೀಣ ಮಹಿಳೆಯರಿಗೆ ಹಸಿರು ಮತ್ತು ಸುಸ್ಥಿರವಾದ ಜೀವನೋಪಾಯವನ್ನು ಸೃಷ್ಟಿಸುವ ಮೂಲಕ ಮೈಲಿಗಲ್ಲು ಸಾಧಿಸಲು ಮತ್ತು ಗ್ರಾಮೀಣ ಬುಡಕಟ್ಟು ಸಮುದಾಯಗಳಲ್ಲಿ ಸಾಮಾಜಿಕ ವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು, ಯುವಜನರಿಗೆ ಆರ್ಥಿಕ ಸ್ವಾವಲಂಬಿಯಾಗುವ ಅವಕಾಶವನ್ನು ಒದಗಿಸಿಕೊಡುತ್ತದೆ.

ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ದೊರೆಯುವ ಬಿದಿರು ಮೌಲ್ಯ ಜಾಲದಲ್ಲಿ ಲಭ್ಯವಾಗುವ ನೈಸರ್ಗಿಕ ಸಂಪನ್ಮೂಲಗಳನ್ನು ಸುಸ್ಥಿರವಾಗಿ ಬಳಸಿಕೊಂಡು ಮಹಿಳೆಯರ ಆರ್ಥಿಕ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇಂದುಶ್ರೀ ಸಂಸ್ಥೆ ಕಾರ್ಯನಿರತವಾಗಿದೆ. ಸುಸ್ಥಿರತೆಯನ್ನು ಸಾಧಿಸುವ ನಿಟ್ಟಿನಲ್ಲಿ ಬಿಎನ್‌ಪಿ ಪರಿಬಾಸ್‌ ತನ್ನದೇ ಆದ ತಣ್ತೀಗಳನ್ನು ಅನುಷ್ಠಾನಕ್ಕೆ ತರುತ್ತಿದೆ.ಬಿಎನ್‌ಪಿ ಪರಿಬಾಸ್‌ನ ಸಿಎಸ್‌ಆರ್‌ ಮಿಷನ್‌ನ ಎರಡು ಪ್ರಮುಖ ಕ್ಷೇತ್ರಗಳಲ್ಲಿ ಇಂದುಶ್ರೀ ಕಾರ್ಯನಿರತವಾಗಿದೆ.

ಮೊದಲನೆಯದು ಸಾಮಾಜಿಕ ಮತ್ತು ವೃತ್ತಿಪರ ಒಳಗೊಳ್ಳುವಿಕೆಯನ್ನು ಉತ್ತೇಜಿಸುವುದು ಮತ್ತು ಎರಡನೆಯದು ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಮತ್ತು ಕೌಶಲ್ಯ ಕಾರ್ಯಕ್ರಮಗಳನ್ನು ನೀಡುವುದು. ಎರಡನೇ ಕಾರ್ಯಕ್ರಮವು ಹವಾಮಾನ ಬದಲಾವಣೆಯ ಸವಾಲು ಮತ್ತು ಅದಕ್ಕೆ ಸಂಬಂಧಿತ ಪರಿಸರ ಸಮಸ್ಯೆಗಳತ್ತ ಗಮನಹರಿಸುತ್ತದೆ.

ಈ ಬಗ್ಗೆ ಮಾತನಾಡಿದ ಬಿಎನ್‌ಪಿ ಪರಿಬಾಸ್‌ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥೆ ಅಯ್ಮಾರ್‌ ಡೆಯಿ ಲಿಯೆಡೆಕೆರ್ಕೆ ಬ್ಯೂಫೋರ್ಟ್‌, ನಮ್ಮ ಸಿಎಸ್‌ಆರ್‌ ನೀತಿಯು ಆರ್ಥಿಕ ಪ್ರಗತಿ ಆದ್ಯತೆಗಳು, ದುರ್ಬಲ ವರ್ಗದವರ ಸೇರ್ಪಡೆ ಮತ್ತು ಸಂಪನ್ಮೂಲಗಳನ್ನು ರಕ್ಷಿಸುವುದಕ್ಕೆ ಆದ್ಯತೆ ನೀಡುತ್ತದೆ. ನಾವು ಎನ್‌ಜಿಒ ಆಗಿರುವ ಇಂದುಶ್ರೀ ಸಂಸ್ಥೆ ಜೊತೆ ಸೇರಿ ಸಮುದಾಯದಲ್ಲಿ ಸುಸ್ಥಿರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತಿದ್ದೇವೆ ಎಂದರು.

ಪರಿಸರ ವ್ಯವಸ್ಥೆ ರಚಿಸುವುದು ಮುಖ್ಯ: ಬಿಎನ್‌ಪಿ ಪರಿಬಾಸ್‌ ಇಂಡಿಯಾದ ಸಿಎಸ್‌ ಆರ್‌ ಸಂವಹನ ಮುಖ್ಯಸ್ಥೆ ಮನಿಶಾ ಖೋಸ್ಲಾ ಸಿನ್ಹಾ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಹಿಂದುಳಿದಿರುವ ಮಹಿಳೆಯರಿಗೆ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಿಸರ ವ್ಯವಸ್ಥೆಯನ್ನು ರಚಿಸುವುದು ಮುಖ್ಯವಾಗಿದೆ. ಇಂದುಶ್ರೀಯಂತಹ ಎನ್‌ ಜಿಒಗಳು ಹೆಚ್ಚಿನ ಜವಾಬ್ದಾರಿಯನ್ನು ವಹಿಸುವ ಮೂಲಕ ಇಂತಹ ಮಹಿಳೆಯರಿಗೆ ಸಮಗ್ರ ಬೆಂಬಲವನ್ನು ನೀಡುತ್ತವೆ. ಇದು ಮಹಿಳೆ ಯರಿಗೆ ವೈಯಕ್ತಿಕವಾಗಿ, ಕುಟುಂಬಗಳು ಮತ್ತು ಸಮುದಾಯಗಳಿಗೆ ಸಾಮೂಹಿಕವಾಗಿ ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.

400 ಮಹಿಳಾ ಉತ್ಪಾದಕರಿಗೆ ಅನುಕೂಲ: ಇಂದುಶ್ರೀ ಫೌಂಡೇಶನ್‌ನ ಸಂವಹನ ನಿರ್ದೇಶಕಿ ಅಕಿಲಾ ಲಿಯಾನ್‌ ಮಾತನಾಡಿ, ಬಿಎನ್‌ಪಿ ಪರಿಬಾಸ್‌ ಜೊತೆಗಿನ ಇಂದುಶ್ರೀ ಫೌಂಡೇಶನ್‌ನ ಪಾಲುದಾರಿಕೆಯು ಹಸಿರು ಮತ್ತು ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸಲು ಪ್ರಮುಖವಾಗಿದೆ. ಇದು ಮಾರ್ಟಳ್ಳಿ ಮತ್ತು ರಾಮಾಪುರ ಪ್ರದೇಶದ ಬಿದಿರು ಮೌಲ್ಯ ಸರಪಳಿಯಲ್ಲಿ ನೇರವಾಗಿ 400 ಮಹಿಳಾ ಉತ್ಪಾದಕರಿಗೆ ಅನುಕೂಲಗಳನ್ನು ಮಾಡಿಕೊಡುತ್ತದೆ. ಈ ಯೋಜನೆಯು ನಮ್ಮ ಮಹಿಳಾ ಉತ್ಪಾದಕರಿಗೆ ಅವರ ಉತ್ಪನ್ನ ತಯಾರಿಕೆ ಕೌಶಲ್ಯಗಳನ್ನು ಬೆಂಬಲಿಸುವ ಮೂಲಕ ಗಮನಾರ್ಹವಾದ ಬದಲಾವಣೆ ಮತ್ತು ಅವರನ್ನು ಸಬಲರನ್ನಾಗಿ ಮಾಡುವ ನಿಟ್ಟಿನಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.