ಬೀದರ್ : ಕೇಂದ್ರ ಸಚಿವರೊಂದಿಗೆ ಅನುಚಿತವಾಗಿ ವರ್ತಿಸಿದ ಸರ್ಕಾರಿ ಶಾಲಾ ಶಿಕ್ಷಕ ಅಮಾನತು
Team Udayavani, Jun 21, 2022, 9:28 PM IST
ಬೀದರ್ : ರಸಗೊಬ್ಬರ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರ ಜತೆ ಮೊಬೈಲ್ ನಲ್ಲಿ ಅನುಚಿತವಾಗಿ ವರ್ತಿಸಿದ ಆರೋಪ ಹಿನ್ನಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಿ ಡಿಡಿಪಿಐ ಗಣಪತಿ ಬಾರಾಟಕೆ ಆದೇಶ ಹೊರಡಿಸಿದ್ದಾರೆ.
ಔರಾದ ತಾಲೂಕಿನ ಜೀರ್ಗಾ(ಕೆ) ಸರ್ಕಾರಿ ಶಾಲಾ ಶಿಕ್ಷಕ ಕುಶಾಲ ಪಾಟೀಲ ಅಮಾನತ್ತುಗೊಂಡ ಶಿಕ್ಷಕರ. ಜೂ. 10 ರಂದು ಪಾಟೀಲ ಅವರು ಸ್ವಗ್ರಾಮ ಹೆಡಗಾಪುರದಲ್ಲಿ ರಸಗೊಬ್ಬರ ಕೊರತೆ ಸಂಬಂಧ ಕೇಂದ್ರ ಸಚಿವ ಖೂಬಾ ಅವರಿಗೆ ಮೊಬೈಲ್ ಕರೆ ಮಾಡಿದ್ದರು. ಈ ವೇಳೆ ಸಚಿವರು ಮತ್ತು ಶಿಕ್ಷಕನ ನಡುವೆ ನಡೆದ ಏಕ ವಚನದಲ್ಲಿ ಮಾತಿನ ವಾಗ್ವಾದದ ಆಡಿಯೋ ವೈರಲ್ ಆಗಿತ್ತು.
ಘಟನೆಗೆ ಸಂಬಂಧ ಔರಾದ ಬಿಇಒ ಎಚ್.ಎಸ್. ನಗನೂರು ಅವರು ನೀಡಿರುವ ವರದಿ ಅನ್ವಯ ಶಿಕ್ಷಕ ಕುಶಾಲ ಅವರನ್ನು ಅಮಾನತು ಗೊಳಿಸಲಾಗಿದೆ. ಕೇಂದ್ರ ಸಚಿವರೊಂದಿಗೆ ಶಿಕ್ಷಕ ಪಾಟೀಲ, ಸರ್ಕಾರಿ ನೌಕರರಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ ಹಾಗೂ ಸಚಿವರೊಂದಿಗೆ ಮಾತನಾಡಿದ ಆಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಕ್ಕೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಡಿಡಿಪಿಐ ‘ಉದಯವಾಣಿ’ಗೆ ತಿಳಿಸಿದ್ದರೆ.
ಇದನ್ನೂ ಓದಿ : ಒಡಿಶಾದಲ್ಲಿ ನಕ್ಸಲರ ದಾಳಿ: ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ
Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್