ಸಿಎಂ ಬೊಮ್ಮಾಯಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದ ಸಾಣೇಹಳ್ಳಿ ಶ್ರೀಗಳ ಪತ್ರ

ಮೂರು ಸಮಿತಿ ಪಠ್ಯದಲ್ಲೂ ಬಸವಣ್ಣನವರ ಬಗ್ಗೆ ತಪ್ಪು ಮಾಹಿತಿ !

Team Udayavani, Jun 22, 2022, 1:56 PM IST

1-dsfdfsd

ಬೆಂಗಳೂರು : ಬಸವೇಶ್ವರರ ಬಗ್ಗೆ ಮಾತ್ರವಲ್ಲ, ಕುವೆಂಪು, ಅಂಬೇಡ್ಕರ್ ಸೇರಿದಂತೆ ಮಹನೀಯರ ವಿಚಾರದಲ್ಲಿ ಆದ ತಪ್ಪುಗಳನ್ನು ಸರಕಾರ ಬಗೆಹರಿಸುತ್ತದೆ ಎಂಬ ವಿಶ್ವಾಸವಿದೆ. ಬಸವೇಶ್ವರರ ಬಗ್ಗೆ ಮೂರು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಲ್ಲೂ ದೋಷಗಳು ಇವೆ ಎಂದು ಸಾಣೇಹಳ್ಳಿ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿಗಳು ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ” ಉದಯವಾಣಿ” ಜತೆ ಮಾತನಾಡಿದ ಅವರು, ಮೂರು ಸಮಿತಿಯ ಪಠ್ಯದಲ್ಲೂ ಬಸವೇಶ್ವರರ ಬಗ್ಗೆ ತಪ್ಪು ಮಾಹಿತಿ‌ ಇದೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಷ್ಕರಣೆಯಾಗಬೇಕು. ಗದುಗಿನ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿ ಹಾಗೂ ನಾವು ಸಮಗ್ರವಾಗಿ ಚರ್ಚಿಸಿ ಎರಡು ಲೇಖನ ಬರೆದಿದ್ದೇವೆ.‌ಈ ಪೈಕಿ ಯಾವುದನ್ನು ಬೇಕಾದರೂ ಪರಿಶೀಲಿಸಬಹುದು ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಇಂದು ಸಂಜೆ ಸಭೆ ಇದೆ. ಸಕಾರಾತ್ಮಕ ನಿರ್ಣಯ ಹೊರಬರುತ್ತದೆ ಎಂಬ ನಿರೀಕ್ಷೆ ಇದೆ ಎಂದು ತಿಳಿಸಿದರು.

ಹಾಗೆ ನೋಡಿದರೆ ಬರಗೂರು ಸಮಿತಿ ವರದಿಯಲ್ಲಿ ಕಡಿಮೆ ಲೋಪಗಳು ಇವೆ. ಆದರೆ ಶೈವ ಗುರುಗಳಿಂದ ದೀಕ್ಷೆ ಪಡೆದರು, ವೀರಶೈವ ಧರ್ಮ ಪುನರುತ್ಥಾನ ಮಾಡಿದರು ಎಂದು ಬರಗೂರು ಪಠ್ಯದಲ್ಲಿ ಉಲ್ಲೇಖವಾಗಿದೆ.‌ ಇದು ನಮಗೆ ಒಪ್ಪಿತವಾಗಿಲ್ಲ. ನೀವು ಪೂರ್ವದಲ್ಲೇ ಈ ಬಗ್ಗೆ ಪ್ರಶ್ನೆ ಮಾಡಬಹುದಿತ್ತಲ್ಲ ಎಂಬ ಪ್ರಶ್ನೆ ಎದುರಾಗಿತ್ತು. ಆದರೆ ನಾವು ಅದನ್ನು ಓದಿರಲಿಲ್ಲ.‌ಕೆಲವೊಮ್ಮೆ ಗಂಭೀರ ದೋಷಗಳು ಆಗದೇ ಇದ್ದಾಗ ಚರ್ಚೆಗಳು ನಡೆಯುವುದಿಲ್ಲ. ಆದರೆ ರೋಹಿತ್ ಚಕ್ರ ತೀರ್ಥ ಸಮಿತಿ ಪಠ್ಯದಲ್ಲಿ ಬಸವಣ್ಣನವರ ಜತೆಗೆ ಕುವೆಂಪು, ಅಂಬೇಡ್ಕರ್ ಸೇರಿದಂತೆ ಎಲ್ಲ ಸಮಾಜ ಸುಧಾರಕರ ಬಗ್ಗೆ ತಪ್ಪುಗಳಾಗಿದೆ. ಇದನ್ನು ಪರಿಹರಿಸಿ ಎಂದಿದ್ದೇನೆ. ಸಿಎಂ ಬೊಮ್ಮಾಯಿ ಹಾಗೂ ಸರಕಾರ ಸಕಾರಾತ್ಮಕವಾಗಿದೆ ಎಂದರು.

ಯಾವುದೇ ಪಠ್ಯದಲ್ಲೂ ಮಹನೀಯರ ವ್ಯಕ್ತಿತ್ವಕ್ಕೆ ದೋಷಗಳು ಆಗಬಾರದು. ಪಠ್ಯ ಪರಿಷ್ಕರಣೆ ಮಾಡುವವರಿಗೆ ಅಗಾಧ ಜ್ಞಾನದ ಜತೆಗೆ ಸೂಕ್ಷ್ಮತೆ ಇರಬೇಕು. ಯಾವುದೇ ಪಕ್ಷ- ಪಂಗಡಕ್ಕೆ ಅಂಟಿಕೊಳ್ಳದೇ ನಿಷ್ಪಕ್ಷಪಾತವಾಗಿ ಇರಬೇಕು ಎಂದು ಅಭಿಪ್ರಾಯಪಟ್ಟರು.

ಬಸವೇಶ್ವರರ ಕುರಿತಾದ ಪಾಠ ಹೇಗಿರಬೇಕೆಂದು ಸಾಣೇಹಳ್ಳಿ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿಗಳು ಬರೆದಿರುವ ಪತ್ರ ಈಗ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು ಶ್ರೀಗಳು ನೀಡಿದ ಗಡವಿನೊಳಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವಲ್ಲಿ ಸರಕಾರ ವಿಫಲವಾಗಿದೆ. ಬಸವಣ್ಣನವರ ಪಠ್ಯದ ಆಯ್ಕೆಯ‌ ಜತೆಗೆ ಸಾಣೇಹಳ್ಳಿ ನೇತೃತ್ವದ ಸ್ವಾಮೀಜಿಗಳ ಪ್ರಶ್ನೆಗಳಿಗೆ ಉತ್ತರಿಸುವ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ. ಇದಕ್ಕೆ ಚುನಾವಣಾ ವರ್ಷದಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಸಿದ್ದವಾಗುವುದೇ  ಎಂಬ ಪ್ರಶ್ನೆ ಉದ್ಭವವಾಗಿದೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.