ರಾಜಕೀಯ ಬಿಕ್ಕಟ್ಟಿನ ನಡುವೆ ಸಿಎಂ ಉದ್ಧವ್ ಠಾಕ್ರೆಗೆ ಕೋವಿಡ್ ಪಾಸಿಟಿವ್
Team Udayavani, Jun 22, 2022, 2:14 PM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಶಿವಸೇನೆಯ ಶಾಸಕರ ಬಂಡಾಯದಿಂದಾಗಿ ಸರಕಾರ ಪತನದ ಅಂಚಿಗೆ ಬಂದಿರುವ ವೇಳೆಯಲ್ಲೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕೋವಿಡ್ ದೃಢ ಪಟ್ಟಿದೆ.
ಮಹಾರಾಷ್ಟ್ರದ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಪಾಸಿಟಿವ್ ಕಂಡು ಬಂದು ದಕ್ಷಿಣ ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾದ ಕೆಲವೇ ದಿನಗಳಲ್ಲಿ ಅವರ ಸಂಪರ್ಕಕ್ಕೆ ಬಂದಿದ್ದ ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಅವರಿಗೆ ಬುಧವಾರ ಕೋವಿಡ್ ಧನಾತ್ಮಕ ಪರೀಕ್ಷೆ ನಡೆಸಲಾಗಿದೆ.
ಇದನ್ನೂ ಓದಿ : ಶಿವಸೇನಾ ಶಾಸಕರ ಬಂಡಾಯ: ಠಾಕ್ರೆ ರಾಜೀನಾಮೆ, ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ ಸಾಧ್ಯತೆ?
ರಾಜ್ಯದ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಎಐಸಿಸಿಯಿಂದ ನೇಮಕಗೊಂಡ ವೀಕ್ಷಕ ಕಮಲ್ ನಾಥ್ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಠಾಕ್ರೆ ಅವರಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಸದನದಲ್ಲಿದ್ದ 44 ಕಾಂಗ್ರೆಸ್ ಶಾಸಕರ ಪೈಕಿ 41 ಮಂದಿ ಪಕ್ಷದ ಸಭೆಗೆ ಹಾಜರಾಗಿದ್ದಾರೆ. ಎನ್ಸಿಪಿ ನಾಯಕ ಶರದ್ ಪವಾರ್ ಅವರೊಂದಿಗೆ ಸಭೆ ನಡೆಸಲಿದ್ದೇನೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು