ಯುವಕರೇ ಸಸಿ ಬೆಳೆಸಲು ಮುಂದಾಗಿ; ಮುಕುಂದರಾವ್
ಇಂತಹ ಕಾರ್ಯಾಗಾರವನ್ನು ಬಳಸಿಕೊಂಡು ಅರಣ್ಯದ ರಕ್ಷಣೆಗಾಗಿ ಮುಂದಾಗಬೇಕು
Team Udayavani, Jun 22, 2022, 6:11 PM IST
ಚನ್ನಪಟ್ಟಣ: ಪರಿಸರದ ಉಳಿವಿಗಾಗಿ ಬರಡಾಗುತ್ತಿರುವ ಭೂಮಿಗಾಗಿ ತಮ್ಮ ಮನೆಗಳ ಅಂಗಳದಲ್ಲಿ ಹಾಗೂ ರಸ್ತೆಯಲ್ಲಿ ಸಸಿಗಳನ್ನು ಬೆಳೆಸಲು ಯುವ ಸಮುದಾಯ ಮುಂದಾಗಬೇಕು ಎಂದು ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಾಧ್ಯಕ್ಷ ಮುಕುಂದರಾವ್ ಲೋಕುಂಡೆ ಸಲಹೆ ನೀಡಿದರು.
ತಾಲೂಕಿನ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದಲ್ಲಿ ಆಯೋಜಿಸಿದ್ದ ಅರಣ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಬರಡು ಪ್ರದೇಶದಲ್ಲಿ ಅರಣ್ಯೀಕರಣದ ಅಧ್ಯಯನ ಕೇಂದ್ರ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಅರಣ್ಯ ರಕ್ಷಣೆಗಾಗಿ ಮುಂದಾಗಿ: ತಾಲೂಕಿನಲ್ಲಿ ಪ್ರತಿ ತಿಂಗಳು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಹಾಗೂ ಅರಣ್ಯ ತಜ್ಞರಿಂದ ಪ್ರತಿ ತಿಂಗಳು 3ನೇ ಶನಿವಾರದಂದು ಕಾರ್ಯಕ್ರಮ ನಡೆಸುತ್ತಿದ್ದು, ವಿದ್ಯಾರ್ಥಿಗಳು ಅರಣ್ಯದ ಬಗ್ಗೆ ಅರಿವು ಮೂಡಿಸಿಕೊಳ್ಳುವ ಜತೆಯಲ್ಲಿ ಇಂತಹ ಕಾರ್ಯಾಗಾರವನ್ನು ಬಳಸಿಕೊಂಡು ಅರಣ್ಯದ ರಕ್ಷಣೆಗಾಗಿ ಮುಂದಾಗಬೇಕು ಎಂದು ಹೇಳಿದರು.
ವಿಭಾಗೀಯ ಅರಣ್ಯ ಸಂರಕ್ಷಣಾಧಿಕಾರಿ ವಿ.ದೇವರಾಜು ಮಾತನಾಡಿ, ಪ್ರತಿನಿತ್ಯ ಮಕ್ಕಳೊಡನೆ ಬೆರೆತು ಅರಣ್ಯ ಬೆಳೆಸುವಲ್ಲಿ ಸರ್ವರೂ ಮುಂದಾಗಬೇಕು ಎಂದು ತಿಳಿಸಿದ ಅವರು, ಬುಟ್ಟಿಯಿಂದ ಬೆಟ್ಟಕ್ಕೆ ಯೋಜನೆಯಿಂದ ಅರಣ್ಯ ಧಾಮಕ್ಕೆ ಭೇಟಿ ನೀಡುತ್ತಿದ್ದ ಹಾಗೂ ಕೆಲವೊಂದು ಸೇವೆಯನ್ನು ಸ್ಮರಿಸಬೇಕಾಗಿದೆ ಎಂದರು. ನ್ಯೂ ಹಾರಿಜನ್ ಶಾಲೆಯ ಮಕ್ಕಳು, ಶಿಕ್ಷಕರು, ಬಾಲು ಪಬ್ಲಿಕ್ ಶಾಲೆಯ ವಿ.ಬಾಲಸುಬ್ರಮಣ್ಯಂ, ಒಂದು ಭೂಮಿ ಫೌಂಡೇಷನ್ ಸ್ಥಾಪಕ ನವನೀತ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ