ಕಡಬದ ವಿದ್ಯಾರ್ಥಿಗಳಲ್ಲಿ ಸಾಂಕ್ರಾಮಿಕ ಜ್ವರ: ಶಾಲೆಗೆ 1 ವಾರ ಕಾಲ ರಜೆ


Team Udayavani, Jun 23, 2022, 6:35 AM IST

ಕಡಬದ ವಿದ್ಯಾರ್ಥಿಗಳಲ್ಲಿ ಸಾಂಕ್ರಾಮಿಕ ಜ್ವರ: ಶಾಲೆಗೆ 1 ವಾರ ಕಾಲ ರಜೆ

ಕಡಬ: ಇಲ್ಲಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಹಲವು ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ಜ್ವರ ಹಾಗೂ ಚಿಕನ್‌ಪಾಕ್ಸ್‌ (ನೀರುಕೋಟ್ಲೆ) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸೂಚನೆಯಂತೆ ಜೂ. 27ರ ತನಕ ರಜೆ ಘೋಷಿಸಲಾಗಿದೆ.

32 ವಿದ್ಯಾರ್ಥಿಗಳು ಮತ್ತು ಓರ್ವ ಶಿಕ್ಷಕಿಗೆ ಜ್ವರ ಹಾಗೂ ಚಿಕನ್‌ಪಾಕ್ಸ್‌ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ಈ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡುವ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಆರೋಗ್ಯ ಇಲಾಖೆಯ ಸಲಹೆಯಂತೆ ಶಾಲೆಗೆ 1 ವಾರ ರಜೆ ಘೋಷಿಸಲಾಗಿದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ. ತಿಳಿಸಿದ್ದಾರೆ.

ಸ್ಥಳೀಯ ವೈದ್ಯಾಧಿಕಾರಿಗಳ ಜತೆಗೆ ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ. ವಿದ್ಯಾರ್ಥಿಯೊಬ್ಬ ಕುಂದಾಪುರದಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ಅಲ್ಲಿನ ಮಕ್ಕಳನ್ನು ಬಾಧಿಸಿದ್ದ ಚಿಕನ್‌ಪಾಕ್ಸ್‌ ಆತನಿಗೂ ತಗಲಿತ್ತು. ಆತನಿಂದಾಗಿ ಶಾಲೆಯ ಇತರ ಮಕ್ಕಳಿಗೆ ಹರಡಿರುವುದು ನಮ್ಮ ಗಮನಕ್ಕೆ ಬಂದಿದೆ.

ನಮ್ಮ ಸಿಬಂದಿ ರೋಗಪೀಡಿತ ಮಕ್ಕಳ ಆರೋಗ್ಯ ಸ್ಥಿತಿಗತಿಯ ಬಗ್ಗೆ ಪ್ರತಿದಿನ ಆವಲೋಕನ ಮಾಡುತ್ತಿದ್ದಾರೆ. ಎಲ್ಲರೂ ಗುಣಮುಖರಾಗುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯ ಸರ್ವೇಕ್ಷಣಾಧಿಕಾರಿ ಡಾ| ಜಗದೀಶ್‌ ಕೆ. ಅವರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ  

Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ  

19

Sullia: ವಾಹನಗಳಿಗೆ ಕಾರು ಢಿಕ್ಕಿ; ಹಾನಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.