ಜಲಸಮಾಧಿಯಾಗುವ ಭೀತಿಯಲ್ಲಿ ಪ್ರಿನ್ಸಸ್‌ ಮಿರಾಲ್‌: ಶೇ. 70ರಷ್ಟು ಮುಳುಗಿರುವ ನೌಕೆ

ತೆರವಿಗೆ ಮಾಲಕರ ಯತ್ನ

Team Udayavani, Jun 23, 2022, 7:25 AM IST

thumb manglore 2

ಮಂಗಳೂರು: ಮಂಗಳೂರಿನ ಉಳ್ಳಾಲ ಕಡಲಿನಲ್ಲಿ ತಳಸ್ಪರ್ಶಗೊಂಡು ನಿಂತಿರುವ ಸಿರಿಯಾದ ಪ್ರಿನ್ಸೆಸ್‌ ಮಿರಾಲ್‌ ಸರಕು ಸಾಗಾಟದ ಹಡಗು ಶೇ. 70ರಷ್ಟು ಮುಳುಗಿದ್ದು ಸಮುದ್ರದ ಅಬ್ಬರ ನೋಡಿದರೆ ಹಡಗು ಪೂರ್ಣ ಜಲಸಮಾಧಿಯಾಗುವ ಭೀತಿ ಇದೆ.

ಮಲೇಷ್ಯಾದಿಂದ ಲೆಬನಾನ್‌ಗೆ ಉಕ್ಕಿನ ಕಾಯಿಲ್‌ಗ‌ಳನ್ನು ಸಾಗಿಸುತ್ತಿದ್ದ ಹಡಗು ತಾಂತ್ರಿಕ ದೋಷ ಹಾಗೂ ಹಡಗಿನ ಮುಂಭಾಗದಲ್ಲಿ ರಂಧ್ರ ಉಂಟಾಗಿ ಅಪಾಯಕ್ಕೆ ಸಿಲುಕಿತ್ತು. ದುರಸ್ತಿಗಾಗಿ ನವಮಂಗಳೂರು ಬಂದರಿನ ಆ್ಯಂಕರೇಜ್‌ ಹಾಗೂ ಮಂಗಳೂರು ಹಳೇಬಂದರಿಗೆ ಈ ಹಡಗನ್ನು ತರಲು ಹಡಗಿನ ಏಜೆಂಟರು ಯತ್ನಿಸಿದ್ದರೂ ಅನುಮತಿ ಸಿಕ್ಕಿರಲಿಲ್ಲ. ಈ ನಡುವೆ ಉಚ್ಚಿಲ ಬಳಿ ಹಡಗು ತಳಸ್ಪರ್ಶಗೊಂಡು ನಿಂತಿತು. ಅದರಲ್ಲಿದ್ದ 15 ಮಂದಿ ಸಿರಿಯನ್‌ ನಾವಿಕರನ್ನು ಕೋಸ್ಟ್‌ಗಾರ್ಡ್‌ ತಂಡ ರಕ್ಷಣೆ ಮಾಡಿತ್ತು.

ದುರಸ್ತಿಗೆ ಪರಿಶೀಲನೆ
ಅಪಾಯಕ್ಕೆ ಸಿಲುಕಿರುವ ಪ್ರಿನ್ಸಸ್‌ ಮಿರಾಲ್‌ ಕಾರ್ಗೋ ಹಡಗನ್ನು ದುರಸ್ತಿ ಪಡಿಸುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಈ ನಡುವೆ ಕೋಸ್ಟ್‌ ಗಾರ್ಡ್‌ ನಿಂದ ರಕ್ಷಿಸಲ್ಪಟ್ಟ ಅಧಿಕಾರಿ ಹಾಗೂ ಸಿಬಂದಿ ಸೇರಿ 15 ಮಂದಿ ಸಿರಿಯಾ ದೇಶದ ಪ್ರಜೆಗಳನ್ನು ವಲಸೆ ವಿಭಾಗದ ಅಧಿಕಾರಿಗಳು ಬುಧವಾರ ಪಣಂಬೂರು ಪೊಲೀಸ್‌ ಠಾಣೆಗೆ ಹಾಜರುಪಡಿಸಿದ್ದಾರೆ.

ತೆರವಿಗೆ ಚಿಂತನೆ
ಸದ್ಯ ಸಮುದ್ರದಲ್ಲಿ ಮುಳುಗಡೆ ಭೀತಿ ಎದುರಿಸುತ್ತಿರುವ ಪ್ರಿನ್ಸಸ್‌ ಮಿರಾಲ್‌ ಕಾರ್ಗೋ ನೌಕೆಯನ್ನು ತೆರವುಗೊಳಿಸುವ ಬಗ್ಗೆ ಹಡಗಿನ ಏಜೆನ್ಸಿ ಚಿಂತನೆ ನಡೆಸುತ್ತಿದೆ. ಹಡಗಿನ ಮಾಲಕರು ಟರ್ಕಿ ಮೂಲದವರಾಗಿದ್ದು ಮಂಗಳೂರಿನಲ್ಲಿ ಅದರ ಪ್ರತಿನಿಧಿ ಮಾರ್ಕಾನ್‌ ಶಿಪ್ಪಿಂಗ್‌ ಏಜೆನ್ಸಿ. ಏಜೆನ್ಸಿಯ ಪ್ರತಿನಿಧಿ ಮಂಗಳೂರಲ್ಲಿ ಇದ್ದು, ಬಂದರು ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಮುಂಬಯಿಯ ಸ್ಮಿತ್‌ ಸಾಲ್ವೆಜ್‌ ಕಂಪೆನಿಯ ತಜ್ಞರು ಮಂಗಳೂರಿಗೆ ಆಗಮಿಸಿ ಹಡಗಿನ ಬಳಿ ತೆರಳಿ ಪರಿಶೀಲನೆ ನಡೆಸಬೇಕಿದೆ.

ಹಡಗಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ 8,000 ಟನ್‌ ಸ್ಟೀಲ್‌ ಕಾಯಿಲ್‌ ಇದ್ದು ಅದನ್ನು ಪಡೆಯುವುದಕ್ಕಾದರೂ ಮಾಲಕರು ಹಡಗು ತೆರವು ಮಾಡಲು ಮುಂದಾಗಬಹುದು ಎಂದು ಅಂದಾಜಿಸಲಾಗಿದೆ.

ಪೊಲೀಸ್‌ ಠಾಣೆಗೆ ಹಾಜರು
ಕೋಸ್ಟ್‌ಗಾರ್ಡ್‌ನಿಂದ ರಕ್ಷಿಸಲ್ಪಟ್ಟ 15 ಮಂದಿ ಸಿರಿಯಾ ಪ್ರಜೆಗಳನ್ನು ಪಣಂಬೂರು ಪೊಲೀಸ್‌ ಠಾಣೆಗೆ ಹಾಜರುಪಡಿಸಲಾಗಿದೆ.

ಕೋಸ್ಟ್‌ಗಾರ್ಡ್‌ ಸುಪರ್ದಿಯಲ್ಲಿದ್ದ ಇವರನ್ನು ಬುಧವಾರ ಇಮಿಗ್ರೆಷನ್‌ ವಿಭಾಗದ ಅಧಿಕಾರಿಗಳು ಪಣಂಬೂರು ಪೊಲೀಸ್‌ ಠಾಣೆಗೆ ಹಾಜರುಪಡಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಿದ್ದು, ಸಂತ್ರಸ್ತರಿಗೆ ಜಿಲ್ಲಾಡಳಿತ ವಾಸ್ತವ್ಯದ ವ್ಯವಸ್ಥೆ ಮಾಡಲಿದೆ. ಅವರನ್ನು ಬೆಂಗಳೂರಿನಲ್ಲಿರುವ ವಿದೇಶಿ ಪ್ರಜೆಗಳ‌ ತಾತ್ಕಾಲಿಕ ಆಶ್ರಿತ ಕೇಂದ್ರಕ್ಕೆ ಕಳುಹಿಸಲಾಗುವುದು. ದಿಲ್ಲಿಯ ವಿದೇಶಾಂಗ ವಿಭಾಗದ‌ ಒಪ್ಪಿಗೆ ಬಳಿಕ ಅವರನ್ನು ಸಿರಿಯಾಕ್ಕೆ ಕಳುಹಿಸಲಾಗುತ್ತದೆ ಎಂದು ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ತಿಳಿಸಿದ್ದಾರೆ.

ಬಂದರು ಅಧಿಕಾರಿಗಳು, ಕೋಸ್ಟ್‌ಗಾರ್ಡ್‌ ಹಾಗೂ ಕರಾವಳಿ ಕಾವಲು ಪೊಲೀಸರು ಉಳ್ಳಾಲ ಕಡಲ ತೀರದಲ್ಲಿ ಬೀಡುಬಿಟ್ಟಿದ್ದು, ಮುಳುಗಡೆ ಭೀತಿಯಲ್ಲಿರುವ ಹಡಗಿನತ್ತ ಕಣ್ಗಾವಲು ಇರಿಸಿದ್ದಾರೆ.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.