ವಿಧಾನಪರಿಷತ್ ನಲ್ಲಿ ಜೆಡಿಎಸ್ ಸಂಖ್ಯಾಬಲ ಇಳಿಕೆ…ಮೇಲ್ಮನೆ ನಾಯಕ ಯಾರು?

ಈ ಫ‌ಲಿತಾಂಶ ಪಕ್ಷ ಸಂಘಟನೆಯ ಮೇಲೆ ನೇರ ಪರಿಣಾಮ ಬೀರುವ ಲಕ್ಷಣಗಳು ಕಂಡುಬರುತ್ತಿದೆ.

Team Udayavani, Jun 23, 2022, 10:27 AM IST

ವಿಧಾನಪರಿಷತ್ ನಲ್ಲಿ ಜೆಡಿಎಸ್ ಸಂಖ್ಯಾಬಲ ಇಳಿಕೆ…ಮೇಲ್ಮನೆ ನಾಯಕ ಯಾರು?

ಬೆಂಗಳೂರು: ವಿಧಾನಪರಿಷತ್‌ನಲ್ಲಿ ಜೆಡಿಎಸ್‌ ಸಂಖ್ಯಾಬಲ ಇಳಿಯುತ್ತಲೇ ಇದ್ದು ಕಳೆದ ಎರಡು ವರ್ಷದ ಅವಧಿಯಲ್ಲಿ ವಿಧಾನಪರಿಷತ್ತಿನಲ್ಲಿ ಜೆಡಿಎಸ್‌ ಸದಸ್ಯರ ಸಂಖ್ಯೆ ಅರ್ಧಕ್ಕೆ ಕುಸಿದಿದೆ.

ಇದನ್ನೂ ಓದಿ:ಕಂಪನಿ ವಸ್ತು ಖರೀದಿಸಿದ್ರೆ ಉಚಿತ ಪ್ರವಾಸದ ಆಫರ್‌: ಕೋರ್ಟ್‌ ಮೆಟ್ಟಿಲೇರಿದ ಮಹಿಳೆ

ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ, ವಿಧಾನಸಭೆಯಿಂದ ವಿಧಾನಪರಿಷತ್ತು, ಶಿಕ್ಷಕರ- ಪದವೀಧರ ಕ್ಷೇತ್ರಗಳಿಂದ ವಿಧಾನಪರಿ ಷತ್ತಿಗೆ ನಡೆದ ಚುನಾವಣೆಗಳ ಬಳಿಕ ಜೆಡಿಎಸ್‌ ಸಂಖ್ಯಾ ಬಲ ಇಳಿಕೆ ಕ್ರಮಾಂಕದಲ್ಲಿ ಸಾಗಿದೆ. 2020ರ ಆರಂಭದಲ್ಲಿ 16 ಇದ್ದ ಜೆಡಿಎಸ್‌ ಸದಸ್ಯರ ಸಂಖ್ಯೆ ಇದೀಗ ಅರ್ಧದಷ್ಟು 8ಕ್ಕೆ ಇಳಿದಿದೆ. ಸದ್ಯದ ಸ್ಥಿತಿ ಗಮನಿಸಿದರೆ 2024ರವರೆಗೆ ವಿಧಾನಪರಿಷತ್ತಿನಲ್ಲಿ ಜೆಡಿಎಸ್‌ ಸಂಖ್ಯಾಬಲ ಎಂಟರ ಗಡಿ ದಾಟುವ ಸಾಧ್ಯತೆಗಳಿಲ್ಲ.

ಹಳೇ ಮೈಸೂರು ಭಾಗದ ಸ್ಥಳೀಯ ಸಂಸ್ಥೆಗಳು, ಶಿಕ್ಷಕರ-ಪದವೀಧರ ಕ್ಷೇತ್ರಗಳಲ್ಲಿ ಜೆಡಿಎಸ್‌ ಹಿಡಿತ ಸಡಿಲಗೊಳ್ಳುತ್ತಿದ್ದು, ಒಂದೊಂದಾಗಿ ಕ್ಷೇತ್ರಗಳು ಕೈತಪ್ಪಿ ಹೋಗುತ್ತಿವೆ. ಕಳೆದ ವರ್ಷ ನಡೆದ ಮಂಡ್ಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿತು. ಈಗ ದಕ್ಷಿಣ ಪದವೀಧರ ಕ್ಷೇತ್ರ ಸಹ ಜೆಡಿಎಸ್‌ನಿಂದ ಕೈತಪ್ಪಿ ಹೋಗಿದ್ದು, ಕಾಂಗ್ರೆಸ್‌ ಪಾಲಾಗಿದೆ. ಈ ಫ‌ಲಿತಾಂಶ ಪಕ್ಷ ಸಂಘಟನೆಯ ಮೇಲೆ ನೇರ ಪರಿಣಾಮ ಬೀರುವ ಲಕ್ಷಣಗಳು ಕಂಡುಬರುತ್ತಿದೆ.

2024ರಲ್ಲಿ ದಕ್ಷಿಣ ಶಿಕ್ಷಕರ ಹಾಗೂ ನೈರುತ್ಯ ಶಿಕ್ಷಕ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಸದ್ಯ ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಪ್ರತಿನಿಧಿಸುತ್ತಿದೆ. ಆದರೆ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಪ್ರತಿನಿಧಿಸುತ್ತಿರುವ ಮರಿತಿಬ್ಬೇಗೌಡ, ಈಗಾಗಲೇ ಜೆಡಿಎಸ್‌ನಿಂದ ಹೊರಗೆ ಕಾಲಿಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರ ಜೆಡಿಎಸ್‌ ಉಳಿಸಿಕೊಳ್ಳಲು ಸಾಹಸ ಪಡಬೇಕಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೇಲ್ಮನೆ ನಾಯಕ ಯಾರು?: ವಿಧಾನ ಪರಿಷತ್ತಿನಲ್ಲಿ ಜೆಡಿಎಸ್‌ ಪಕ್ಷ ಅಧಿಕೃತ ವಿರೋಧಪಕ್ಷ ಅಲ್ಲದಿದ್ದರೂ ಒಬ್ಬರನ್ನು ನಾಯಕರನ್ನಾಗಿ ನೇಮಕ ಮಾಡಲಾಗುತ್ತಿತ್ತು. ಅದರಂತೆ ಕೆ.ಟಿ. ಶ್ರೀಕಂಠೇಗೌಡ ವಿಧಾನಪರಿಷತ್ತಿನಲ್ಲಿ ಜೆಡಿಎಸ್‌ ನಾಯಕರಾಗಿದ್ದರು. ಆದರೆ, ಅವರ ಅವಧಿ ಜುಲೈ 4ರವರೆಗೆ ಇದ್ದು, ಮುಂದೆ ಹೊಸಬರ ಆಯ್ಕೆ ಮಾಡಬೇಕಾಗಿದೆ. 8 ಸದಸ್ಯರಲ್ಲಿ ಎಸ್‌.ಎಲ್‌. ಭೋಜೇಗೌಡ, ಬಿ.ಎಂ. ಫಾರೂಕ್‌, ಕೆ.ಎ ತಿಪ್ಪೇಸ್ವಾಮಿ, ಎರಡನೇ ಬಾರಿಗೆ ಆಯ್ಕೆಯಾಗಿರುವ ಟಿ.ಎ.ಶರವಣ ಅವರೂ ಇದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಬೆಂಬಲಿಸಿಲ್ಲವೆಂಬ ಆರೋಪ ತೊಳೆದುಕೊಳ್ಳಲು ಬಿ.ಎಂ. ಫಾರೂಕ್‌ ಅವರನ್ನು ವಿಧಾನಪರಿಷತ್ತಿನಲ್ಲಿ ಜೆಡಿಎಸ್‌ ನಾಯಕರಾಗಿ ಆಯ್ಕೆ ಮಾಡುವ ಸಾಧ್ಯತೆಯೂ ಇಲ್ಲದಿಲ್ಲ ಎಂದು ಪಕ್ಷದ ಮೂಲಗಳು ಹೇಳುತ್ತವೆ.

ಟಾಪ್ ನ್ಯೂಸ್

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.