ವಿಡಿಸಿಸಿ ಬ್ಯಾಂಕ್‌ಗೆ 3 ಕೋಟಿ ರೂ. ದೋಖಾ

ನಕಲಿ ದಾಖಲೆ ಸೃಷಿಸಿ ಸಾಲ ಪಡೆದ 8 ಆರೋಪಿಗಳ ವಿರುದ್ಧ ಪ್ರಕರಣ ; 14 ಜಾಮೀನುದಾರರ ವಿರುದ್ಧ ದೂರು

Team Udayavani, Jun 23, 2022, 1:17 PM IST

10

ವಿಜಯಪುರ: ನಕಲಿ ದಾಖಲೆ ಸೃಷ್ಟಿಸಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ 8 ಜನರು 3.15 ಕೋಟಿ ರೂ. ಸಾಲ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಮಾಡಿದ ಆರೋಪದಲ್ಲಿ 22 ಜನರ ವಿರುದ್ಧ ಇದೀಗ ನಗರದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.

ಹನುಮಂತ ಮುಂಜಾನೆ, ವೆಂಕಟೇಶ ಕೋರ್ಪಡೆ, ಗಜಾನಂದ ಬೀಸಣಿಕೆ, ರಾಘವೇಂದ್ರ ಚವನ, ಭಾರತಿ ಇಂಡಿ, ಸೈಯದ್‌ ಆರೀಫ್‌, ಸೈಫುದ್ದೀನ್‌ ಶೇಖ್‌ ಹಾಗೂ ನಜೀರ್‌ ಅಹ್ಮದ್‌ ಶೇಖ್‌ ಎಂಬವರ ವಿರುದ್ಧ ದೂರು ದಾಖಲಾಗಿದೆ. ಇದಲ್ಲದೇ ಸದರಿ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದ ಪ್ರಕರಣದಲ್ಲಿ ಜಾಮೀನು ಹಾಕಿದ 14 ಜನರ ವಿರುದ್ಧವೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧಿಕಾರಿಗಳು ನಗರದ ಗಾಂಧಿ ಚೌಕ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ವಿರುದ್ಧ ದೂರು ದಾಖಲಾಗಿದ್ದು ತಿಳಿಯುತ್ತಲೇ ಸದರಿ ಪ್ರಕರಣದ ಆರೋಪಿಗಳಲ್ಲಿ ಕೆಲವರು ಜಾಮೀನು ಪಡೆಯುಲು ಮಂದಾಗಿದ್ದಾರೆ ಎಂದೂ ಹೇಳಲಾಗಿದೆ.

ಸಾಲ ಪಡೆಯಲು ವಂಚಕ ಆರೋಪಿಗಳು ಹೆಸರೇ ಇಲ್ಲದ ಬೇರೊಬ್ಬರ ಹೆಸರಿನಲ್ಲಿ ಸಾಲ ಪಡೆಯುವುದು, ಹೆಸರೇ ಇಲ್ಲದವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯುವುದು, ಆಸ್ತಿ ಇಲ್ಲದವರ ಹೆಸರಿನಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ಸಾಲ ಪಡೆದಿರುವುದು ಬೆಳಕಿಗೆ ಬಂದಿದೆ. ಈ ವಂಚನೆ ಪ್ರಕರಣದಲ್ಲಿ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿ, ಆಸ್ತಿಗಳನ್ನು ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಿಸಿದಂತೆ ಅಸಲಿ ದಾಖಲೆಗಳನ್ನು ಹೋಲುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸಲಾಗಿದೆ.

ಸದರಿ 8 ಆರೋಪಿಗಳು ಹಲವು ವರ್ಷಗಳ ಹಿಂದೆ ನಕಲಿ ದಾಖಲೆಗಳನ್ನು ನೀಡಿ 3.15 ಕೋಟಿ ರೂ. ಸಾಲ ಪಡೆದಿದ್ದರು. ವರ್ಷಗಳೇ ಕಳೆದರೂ ಸಾಲ ಮರು ಪಾವತಿಗೆ ಕಂತುಗಳನ್ನು ಕಟ್ಟಿರಲಿಲ್ಲ. ಹೀಗಾಗಿ ಸಹಜವಾಗಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧಿಕಾರಿಗಳು ಸಾಲ ಮರು ಪಾವತಿಸುವಂತೆ ಸಂಬಂಧಿಸಿದವರ ಹೆಸರಿನಲ್ಲಿ ನೋಟಿಸ್‌ ಕಳುಹಿಸಿದ್ದಾರೆ. ಆದರೆ ಬ್ಯಾಂಕ್‌ ನೋಟಿಸ್‌ ಕಳುಹಿಸಿದ ಸ್ಥಳದಲ್ಲಿ ಸಾಲ ಪಡೆದವರ ಹೆಸರಿನ ವ್ಯಕಿಗಳೇ ವಾಸವಾಗಿಲ್ಲ ಎಂದ ಅಂಶ ಬೆಳಕಿಗೆ ಬಂದಿದೆ.

ಇದರಿಂದ ಆತಂಕಕ್ಕೀಡಾದ ವಿಡಿಸಿಸಿ ಬ್ಯಾಂಕ್‌ ಅಧಿ ಕಾರಿಗಳು ಸ್ಥಳ ಪರಿಶೀಲನೆ ನಡೆಸಿದಾಗ ತಮ್ಮ ಬ್ಯಾಂಕ್‌ಗೆ ನಕಲಿ ದಾಖಲೆ ನೀಡಿ ವಂಚಿಸಿರುವುದು ಸ್ಪಷ್ಟವಾಗಿದೆ. ಇದರಿಂದ ಎಚ್ಚೆತ್ತ ಅಧಿ ಕಾರಿಗಳು ಕೂಡಲೇ ವಿ.ಜಿ.ಕೇಂ. ಸ. ಬ್ಯಾಂಕ್‌ ಅಧ್ಯಕ್ಷರು ಹಾಗೂ ಮೇಲಧಿ ಕಾರಿಗಳ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ಬಳಿಕ ಮೇಲ್ನೋಟಕ್ಕೆ ಇದು ವಂಚನೆ ಪ್ರಕರಣ ಎಂದು ಸಾಬೀತಾಗುತ್ತಲೇ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಮತ್ತೂಂದೆಡೆ ಮೇ 1ರಂದು ಈ ಕುರಿತು ಗಾಂಧಿಚೌಕ್‌ ಠಾಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದರಿ ವಂಚನೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಅಧಿಕಾರಿಗಳನ್ನು ನೇಮಿಸಿದ್ದಾಗಿ ಎಸ್ಪಿ ಆನಂದಕುಮಾರ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿಡಿಸಿಸಿ ಅಧ್ಯಕ್ಷರಾದ ಶಾಸಕ ಶಿವಾನಂದ ಪಾಟೀಲ, ವಂಚನೆ ಪ್ರಕರಣ ಬೆಳಕಿಗೆ ಬರುತ್ತಲೇ ಬ್ಯಾಂಕ್‌ನ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ದೂರು ದಾಖಲಿಸಿದ್ದು, ಬ್ಯಾಂಕ್‌ ಅಧಿ ಕಾರಿ-ಸಿಬ್ಬಂದಿಗಳ ಶಾಮೀಲು ಇದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.