ರಸ್ತೆ ಮೇಲೆ ಚರಂಡಿ ನೀರು: ಸಂಚಾರಕ್ಕೆ ಕಿರಿಕಿರಿ

ಚರಂಡಿ ದುರಸ್ತಿಗೆ ಮುಂದಾಗದ ಅಧಿಕಾರಿಗಳು; ಮಲೀನ ನೀರಿನಲ್ಲಿಯೇ ಸಾರ್ವಜನಿಕರ ಓಡಾಟ

Team Udayavani, Jun 23, 2022, 3:08 PM IST

18

ಗದಗ: ನಗರದ ಪ್ರಮುಖ ರಸ್ತೆಗಳಲ್ಲೊಂದಾಗಿರುವ ಪಾಲಾ ಬಾದಾಮಿ ರಸ್ತೆಯ ತೋಂಟದಾರ್ಯ ಮಠದ ಮಹಾದ್ವಾರ ಬಳಿ ಕಳೆದೊಂದು ತಿಂಗಳಿನಿಂದ ನಿರಂತರವಾಗಿ ಚರಂಡಿ ನೀರು ಹರಿಯುತ್ತಿರುವುದರಿಂದ ಸಂಚಾರಕ್ಕೆ ಇನ್ನಿಲ್ಲದ ತೊಂದರೆಯಾಗಿದೆ. ಇತ್ತೀಚೆಗೆ ನಡೆದ ರಸ್ತೆ ಡಾಂಬರೀಕರಣದ ಸಂದರ್ಭದಲ್ಲಿ ಚರಂಡಿ ಮುಚ್ಚಿ ಹೋಗಿದ್ದರಿಂದ ಪಾದಚಾರಿಗಳು, ವಾಹನ ಸವಾರರು ಹರಸಾಹಸ ಪಡಬೇಕಾಗಿದೆ.

ಹಗಲು-ರಾತ್ರಿ ಚರಂಡಿ ನೀರು ರಸ್ತೆಯುದ್ದಕ್ಕೂ ಹರಿಯುತ್ತಿದ್ದು, ಮಲೀನ ನೀರಿನಲ್ಲಿಯೇ ಸಾರ್ವಜನಿಕರು ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ಇದೇ ರಸ್ತೆಯಲ್ಲಿ ಗದಗ-ಬೆಟಗೇರಿ ನಗರಸಭೆ ಅಧಿಕಾರಿಗಳು ನಿತ್ಯ ಸಂಚರಿಸಿದರೂ ಚರಂಡಿ ದುರಸ್ತಿಗೆ ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ತೋಂಟದಾರ್ಯ ರಥ ಬೀದಿಯ ಮಹಾದ್ವಾರಕ್ಕೆ ಹೊಂದಿಕೊಂಡಿರುವ ಪಾಲಾ ಬಾದಾಮಿ ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ಚರಂಡಿ ಬಂದ್‌ ಆಗಿದ್ದರಿಂದ ನೀರು ರಸ್ತೆ ಮೇಲೆ ಹರಿಯತೊಡಗಿದೆ. ಚರಂಡಿ ಬಂದ್‌ ಆಗಿರುವುದು ಅಧಿ ಕಾರಿಗಳ ಗಮನಕ್ಕಿದ್ದರೂ ಸರಿಪಡಿಸಲು ಮುಂದಾಗುತ್ತಿಲ್ಲ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯವರು ಅವಳಿ ನಗರದಲ್ಲಿ ಒಳಚರಂಡಿ ಕಾಮಗಾರಿ ಕೈಗೊಂಡಿದ್ದು, ಅವರೇ ಆ ಕೆಲಸ ಮಾಡುತ್ತಾರೆ ಎಂದು ನಗರಸಭೆ ಅಧಿ ಕಾರಿಗಳು ಹೇಳುತ್ತಾರೆ. ಆದರೆ, ಒಳಚರಂಡಿ ಇಲಾಖೆ ಅಧಿ ಕಾರಿಗಳು ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ. ಇದರಿಂದ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಕಳೆದೆರಡು ದಿನಗಳಿಂದ ನಿತ್ಯ ಮಳೆಯಾಗುತ್ತಿರುವುದರಿಂದ ಚರಂಡಿ ತುಂಬಿ ಹರಿಯುತ್ತಿದೆ. ಇದೇ ರಸ್ತೆ ಮಾರ್ಗದಲ್ಲಿ ರೋಣ, ಗಜೇಂದ್ರಗಡ, ಬಾಗಲಕೋಟೆ ಬಸ್‌ಗಳು ತೆರಳಬೇಕಿದ್ದು, ರಸ್ತೆ ದಿನಪೂರ್ತಿ ದಟ್ಟಣೆಯಿಂದ ಕೂಡಿರುತ್ತದೆ. ಅಲ್ಲದೇ, ನಗರದ ಕೆ.ಸಿ.ರಾಣಿ ರಸ್ತೆ, ತೋಂಟದಾರ್ಯ ಮಠ, ಮಹಾತ್ಮ ಗಾಂಧಿ  ವೃತ್ತ ಮತ್ತು ಭೂಮರಡ್ಡಿ ವೃತ್ತದ ಕಡೆಗೆ ತೆರಳುವ ಕೂಡು ರಸ್ತೆಯೂ ಇದಾಗಿದೆ. ಇಲ್ಲಿ ನಿತ್ಯ ಹಲವಾರು ಆಟೋಗಳು, ಕಾರುಗಳು, ಸಾವಿರಾರು ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ರಸ್ತೆ ಮೇಲೆ ಹರಿಯುತ್ತಿರುವ ಮಲೀನ ನೀರು ವಾಹನ ತೆರಳುವ ಸಂದರ್ಭದಲ್ಲಿ ಜನರ ಮೇಲೆ ಸಿಡಿದಿರುವ ಅನೇಕ ಉದಾಹರಣಗಳಿವೆ.

ಅಲ್ಲದೇ, ತೋಂಟದಾರ್ಯ ಮಠದ ರಥ ಬೀದಿಯಲ್ಲೂ ಚರಂಡಿ ನೀರು ಹರಿಯುತ್ತಿದ್ದು, ಸದ್ಯ ಈ ರಸ್ತೆಯಲ್ಲಿ ತೋಂಟದಾರ್ಯ ಮಠದ ಜಾತ್ರೆ ನಿಮಿತ್ತ ವ್ಯಾಪಾರಸ್ಥರು ವಿವಿಧ ಅಂಗಡಿಗಳನ್ನು ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಈ ಚರಂಡಿ ನೀರು ಅಂಗಡಿಗಳಿಗೂ ನುಗ್ಗಿ ಸಾಕಷ್ಟು ತೊಂದರೆ ಉಂಟಾಗುತ್ತಿದೆ. ಇಷ್ಟಾದ್ದರೂ ನಗರಸಭೆ ಅಧಿಕಾರಿಗಳು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ಅಧಿಕಾರಿಗಳು ಪರಸ್ಪರ ಆರೋಪ ಮಾಡಿಕೊಳ್ಳುತ್ತ ಕಾಲಹರಣ ಮಾಡುತ್ತಿದ್ದಾರೆ. ಚರಂಡಿ ಹಾಗೂ ರಸ್ತೆ ದುರಸ್ತಿ ಯಾವಾಗ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿಧಾನ ಪರಿಷತ್‌ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದುದರಿಂದ ಚರಂಡಿ ಹಾಗೂ ರಸ್ತೆ ದುರಸ್ತಿ ಕಾಮಗಾರಿ ನಡೆಸಲು ಸಾಧ್ಯವಾಗಿರಲಿಲ್ಲ. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಮುಂದಿನ ಎರಡು ದಿನದೊಳಗಾಗಿ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ. –ರಮೇಶ ಸುಣಗಾರ, ಪೌರಾಯಕ್ತ, ಗದಗ-ಬೆಟಗೇರಿ ನಗರಸಭೆ

ಕಳೆದ ಒಂದು ತಿಂಗಳಿನಿಂದ ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದೆ. ಗಲೀಜು ನೀರಿನಲ್ಲೇ ಸಂಚರಿಸುವ ಕರ್ಮ ಜನರದ್ದಾಗಿದೆ. ನಿತ್ಯ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ರಸ್ತೆಯೂ ಸಂಪೂರ್ಣ ಹಾಳಾಗಿದೆ. ರಸ್ತೆ ತುಂಬ ತಗ್ಗು-ಗುಂಡಿಗಳು ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರು ಸರ್ಕಸ್‌ ಮಾಡುತ್ತ ಸಾಗಬೇಕಿದೆ. -ತಿಪ್ಪಣ್ಣ ಹೂಗಾರ, ಗದಗ ನಿವಾಸಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.