ವೈದ್ಯರ ನಿರ್ಲಕ್ಷ್ಯ: ಶಸ್ತ್ರ ಚಿಕಿತ್ಸೆ ವೇಳೆ ರೋಗಿ ಸಾವು

ವಾಗ್ಧಾಳಿ ನಡೆದು ಅಂತಿಮವಾಗಿ ಮೃತದೇಹವನ್ನು ವಾರಸುದಾರರು ಶವಸಂಸ್ಕಾರಕ್ಕೆ ಸ್ಥಳಾಂತರಿಸಿದರು.

Team Udayavani, Jun 23, 2022, 6:18 PM IST

ವೈದ್ಯರ ನಿರ್ಲಕ್ಷ್ಯ: ಶಸ್ತ್ರ ಚಿಕಿತ್ಸೆ ವೇಳೆ ರೋಗಿ ಸಾವು

ಎಚ್‌.ಡಿ.ಕೋಟೆ: ಶಸ್ತ್ರಚಿಕಿತ್ಸೆ ವೇಳೆ ರೋಗಿಯೊಬ್ಬ ಮೃತಪಟ್ಟಿದ್ದು, ಘಟನೆಗೆ ವೈದ್ಯರ ನಿರ್ಲಕ್ಷ್ಯತನ ಕಾರಣ ಎಂದು ಆರೋಪಿಸಿ ಆಸ್ಪತ್ರೆ ಆವರಣದಲ್ಲಿ ಸಂಬಂಧಿಕರು ಮೃತ ದೇಹವಿಟ್ಟು ರಸ್ತೆತಡೆ ನಡೆಸಿ ಆಸ್ಪತ್ರೆಗೆ ಕಲ್ಲುತೂರಿ ಗಾಲು ಪುಡಿಪುಡಿ ಮಾಡಿದ ಘಟನೆ ಪಟ್ಟಣದ ಸೆಂಟ್‌ ಮೇರಿಸ್‌ ಆಸ್ಪತ್ರೆಯಲ್ಲಿ ನಡೆದಿದೆ.

ಎಚ್‌.ಡಿ.ಕೋಟೆ ಪಟ್ಟಣದ ನಿವಾಸಿ ಹೀಮಾನ್‌ ವೆಲ್‌ (21) ಮೃತಪಟ್ಟ ಯುವಕ. ಹೀಮಾನ್‌ ಹಲವು ದಿನಗಳಿಂದ ಅನಾರೋಗದಿಂದ ಬಳಲುತ್ತಿದ್ದು, ತಪಾಸಣೆ ನಡೆಸಿದ ವೈದ್ಯರು ಯುವಕನಿಗೆ ಕರುಳಿನಲ್ಲಿ ಗುಳ್ಳೆ(ಅಪೆಂಡಿಕ್ಸ್‌) ಗಳಾಗಿವೆ. ಶಸ್ತ್ರಚಿಕಿತ್ಸೆ ನೆರವೇರಿಸಿ ಗುಣಪಡಿಸಬೇಕೆಂದು ಪಟ್ಟಣದ ಸೆಂಟ್‌ ಮೇರಿಸ್‌ ಖಾಸಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಅದರಂತೆಯೇ ಮಂಗಳವಾರ ಯುವಕನಿಗೆ ಆಸ್ಪತ್ರೆಯಲ್ಲಿ ಸುಮಾರು 3 ತಾಸಿಗೂ ಅಧಿಕ ಕಾಲ ಶಸ್ತ್ರ ಚಿಕಿತ್ಸೆ ನಡೆಸಿದರು. ಅಂತಿಮ ಕ್ಷಣದಲ್ಲಿ ರಕ್ತದೊತ್ತಡ ತೀರ ಇಳಿಕೆಯಾಗುತ್ತಿದ್ದು ಕೂಡಲೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ತರಾತುರಿಯಲ್ಲಿ ಸಲಹೆ ನೀಡಿದರು. ಆಸ್ಪತ್ರೆಗೆ ಸಾಗಿಸುವಾಗ ಯುವಕ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾನೆ.ಘಟನೆಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿ ಮೃತನ ಪೋಷಕರ ಜೊತೆಗೂಡಿ ನೂರಾರು ಮಂದಿ ಬುಧವಾರ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆಗೆ ಮುಂದಾದರು.

ಏಕಾಏಕಿ ಆಸ್ಪತ್ರೆ ಮುಂದಿನ ಹುಣಸೂರು- ಬೇಗೂರು ರಸ್ತೆ ತಡೆ ನಡೆಸಿ ರಸ್ತೆ ಮಧ್ಯದಲ್ಲಿಯೇ ಕುಳಿತು ಆಸ್ಪತ್ರೆ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಹಾಕಿದರು. ಈ ಸಂದರ್ಭದಲ್ಲಿ ಶಾಲಾ ಕಾಲೇಜಿಗೆ ತೆರಳಬೇಕಾದ ವಿದ್ಯಾರ್ಥಿಗಳು, ವಯೋವೃದ್ಧರು ಕೆಲಕಾಲ ಪರದಾಡುವ ಸ್ಥಿತಿ ನಿರ್ಮಾಣಗೊಂಡಿತ್ತು.

ಆಸ್ಪತ್ರೆಯತ್ತ ಕಲ್ಲು ತೂರಾಟ: ಸ್ಥಳಕ್ಕೆ ಧಾವಿಸಿದ ಪೊಲೀಸರು ರಸ್ತೆ ತಡೆ ಕಾನೂನು ಬಾಹಿರ ಸಾರ್ವಜನಿಕರಿಗೆ ತೊಂದರೆ ನೀಡದೆ ಆಸ್ಪತ್ರೆಯತ್ತ ತೆರಳುವಂತೆ ಸಲಹೆ ನೀಡಿದಾಗ ಏಕಾಏಕಿ ಆಸ್ಪತ್ರೆ ಬಳಿಗೆ ತೆರಳಿದ ಪ್ರತಿಭಟನಾಕಾರ ಯುವಕರ ಗುಂಪಿನ ಹಲವು ಮಂದಿ ಆಸ್ಪತ್ರೆಯತ್ತ ಕಲ್ಲು ತೂರಾಟ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಗೆ ಅಳವಡಿಸಿದ್ದ ಗಾಜು ಪುಡಿಪುಡಿಯಾಯಿತು.

ಮಧ್ಯ ಪ್ರವೇಶಿಸಿದ ಪೊಲೀಸರು ಮತ್ತು ಪ್ರಜ್ಞಾವಂತ ನಾಗರಿಕರು ಪ್ರತಿಭಟನೆಯ ಮಹತ್ವ ತಿಳಿಸಿ ಸಾರ್ವಜನಿಕರಿಗೆ ತೊಂದರೆ ನೀಡದಂತೆ ಮನವೊಲಿಸುವಲ್ಲಿ ಯಶಸ್ವಿಯಾದರು. ಮೃತನ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಪ್ರತಿಭಟನಾಕಾರರು ಕೆಲಕಾಲ ಪಟ್ಟು ಹಿಡಿದಾಗ ಆಸ್ಪತ್ರೆ ಬಳಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು.

ಅಪೆಂಡಿಕ್ಸ್‌ನಿಂದ ಬಳಲುತ್ತಿದ್ದ ರೋಗಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿ ಅಂತಿಮ ಘಟ್ಟ ತಲುಪುತ್ತಿದ್ದಂತೆಯೇ 2 ಬಾಾರಿ ಹೃದಯಾಘಾತ ಸಂಭವಿಸಿ ತೀವ್ರ ನಿತ್ರಾಣಗೊಂಡಾಗ ಜಿಲ್ಲಾ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಇದರಲ್ಲಿ ವೈದ್ಯರ ನಿರ್ಲಕ್ಷ್ಯತನ ಇಲ್ಲ ಎಂದು ಆಸ್ಪತ್ರೆಯ ಶಸ್ತ್ರಚಿಕಿತ್ಸೆ ತಜ್ಞೆ ವೈದ್ಯೆ ಡಾ.ಹೀಲ್ಡಾಲೋಬೋ ಪ್ರತಿಕ್ರಿಯೆ ನೀಡಿದ್ದಾರೆ.

ಬಳಿಕ ಆಸ್ಪತ್ರೆ ಆಡಳಿತ ಮಂಡಳಿಯಿಂದ ಮೃತನ ಕುಟುಂಬಕ್ಕೆ 2.50 ಲಕ್ಷ ರೂ. ಪರಿಹಾರ ನೀಡುವ ಭರವಸೆ ನೀಡಿದಾಗಲೂ ಪ್ರತಿಭಟನಾಕಾರರಲ್ಲೇ ಮಾತಿನ ವಾಗ್ಧಾಳಿ ನಡೆದು ಅಂತಿಮವಾಗಿ ಮೃತದೇಹವನ್ನು ವಾರಸುದಾರರು ಶವಸಂಸ್ಕಾರಕ್ಕೆ ಸ್ಥಳಾಂತರಿಸಿದರು.

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.