ನಾಲ್ವಡಿ ಒಡೆಯರ್‌ ದೀನ, ದಲಿತರ ಆಶಾಕಿರಣ: ಡಾ.ತಿಮ್ಮಯ್ಯ

ಅರಸು ಪ್ರತಿಮೆ ಸ್ಥಾಪಿಸುವ ಸಂಬಂಧ ಹಲವು ವರ್ಷಗಳಿಂದ ಹೋರಾಟ ನಡೆದಿದೆ.

Team Udayavani, Jun 23, 2022, 6:31 PM IST

ನಾಲ್ವಡಿ ಒಡೆಯರ್‌ ದೀನ, ದಲಿತರ ಆಶಾಕಿರಣ: ಡಾ.ತಿಮ್ಮಯ್ಯ

ಮೈಸೂರು: ದೀನ, ದಲಿತರ ಹಾಗೂ ಹಿಂದುಳಿದವರ ಆಶಾಕಿರಣವಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಜನ್ಮದಿನವನ್ನು ನಾಡಹಬ್ಬವಾಗಿ ಸರ್ಕಾರವು ಆಚರಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ ಒತ್ತಾಯಿಸಿದರು.

ನಗರದ ಎಂಜಿನಿಯರ್ ಸಂಸ್ಥೆಯ ಸಭಾಂಗಣದಲ್ಲಿ ಅನ್ವೇಷಣಾ ಸೇವಾಟ್ರಸ್ಟ್‌ ಬುಧವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 40ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಡಾ.ಜಗನ್ನಾಥ ಶೆಟ್ಟಿ ರಚನೆಯ “ಕರ್ನಾಟಕ ಧ್ರುವತಾರೆ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

ರಾಜ್ಯದ ಸಾಧನೆಗೆ ಅಡಿಪಾಯ: ನಾಲ್ವಡಿ ಕೃಷ್ಣ ರಾಜ ಒಡೆಯರ್‌, ಡಿ.ದೇವರಾಜ ಅರಸು ರಾಜ್ಯದ ಜನರಿಗೆ ದನಿಯಾದರು. ದಲಿತರು- ಹಿಂದುಳಿ ದವರ ಏಳಿಗೆಗೆ ಶ್ರಮಿಸಿದರು. ಆಧುನಿಕ ಕರ್ನಾಟಕ ನಿರ್ಮಾಣದಲ್ಲಿ ಇಬ್ಬರೂ ನಿರಂತರ ದುಡಿದರು. ಎಲ್ಲ ಕ್ಷೇತ್ರಗಳಲ್ಲೂ ರಾಜ್ಯದ ಸಾಧನೆಗೆ ಅಡಿಪಾಯ ಹಾಕಿಕೊಟ್ಟರು ಎಂದು ಅಭಿಪ್ರಾಯ ಪಟ್ಟರು.

ನೊಂದವರಿಗೆ ಮಿಡಿದ ಒಡೆಯರ್‌: ದೇವರಾಜ ಅರಸು ರಾಜ್ಯದಲ್ಲಿ ಜೀತ ಪದ್ಧತಿ ನಿರ್ಮೂಲನೆಗೊಳಿಸಿದ್ದಲ್ಲದೆ, ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೊಳಿಸಿ ನೊಂದವರಿಗೆ ಮಿಡಿದರು. ಈ ನೆಲದ ಕಾನೂನುಗಳು ರಾಷ್ಟ್ರದಲ್ಲೂ ಜಾರಿಗೊಳ್ಳಲುಮೇಲ್ಪಂಕ್ತಿ ಹಾಕಿಕೊಟ್ಟರು ಎಂದರು.

ಅಧಿವೇಶನದಲ್ಲಿ ಪ್ರಸ್ತಾವನೆ: ಮೈಸೂರು ನಗರದಲ್ಲಿ ಅರಸು ಪ್ರತಿಮೆ ಸ್ಥಾಪಿಸುವ ಸಂಬಂಧ ಹಲವು ವರ್ಷಗಳಿಂದ ಹೋರಾಟ ನಡೆದಿದೆ. ಈ ಕುರಿತು ಅಧಿವೇಶನದಲ್ಲಿ ಪ್ರಸ್ತಾವ ಸಲ್ಲಿಸಲಾಗುವುದು. ನಗರದ ಮುಖ್ಯಭಾಗದಲ್ಲಿ ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು. ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಮಾತನಾಡಿ, ಡಿ.ದೇವರಾಜ ಅರಸು ಅವರ ಕೊಡುಗೆಗಳನ್ನು ಸ್ಮರಿಸಿದರು.

ಇದೇ ವೇಳೆ ಜೆಎಸ್‌ಎಸ್‌ ಮಹಾ ವಿದ್ಯಾಪೀಠ ಕಾಲೇಜು ಶಿಕ್ಷಣ ಮತ್ತು ಪ್ರಕಟಣಾ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ಎಸ್‌ವಿಐಇ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಪ್ರಭಾಕರಶೆಟ್ಟಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವಿಶ್ರಾಂತ ಜಿಲ್ಲಾ ವ್ಯವಸ್ಥಾಪಕರು ಜಯದೇವರಾಜೇ ಅರಸ್‌, ಉದ್ಯಮಿ ಕೊಳ್ಕಬೈಲ್‌ ಗಣೇಶ ನಾರಾಯಣ್‌ ಹೆಗ್ಡೆ, ಕಲಾವಿದೆ ಡಾ.ವಿ.ಮಾಲಿನಿ, ಎಲ್‌ಐಇಸಿ ಮಖ್ಯ ಸಂಘಟಕ ಎಸ್‌.ಎನ್‌.ಸತ್ಯಪ್ರಕಾಶ್‌ ಅರಸ್‌ ಅವರಿಗೆ “ಧ್ವನಿ
ಕೊಟ್ಟ ಧಣಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೃತಿಯ ಲೇಖಕ ಜಗನ್ನಾಥ ಶೆಟ್ಟಿ, ಅಖಿಲ ಕರ್ನಾಟಕ ಕರಾವಳಿ ಒಕ್ಕೂಟದ ಅಧ್ಯಕ್ಷ ಡಾ.ಎಸ್‌. ಶ್ರೀನಿವಾಸ ಶೆಟ್ಟಿ, ತವರು ಅರಸು ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷ್ಮೀ ಅರಸ್‌, ಅನ್ವೇಷಣಾ ಟ್ರಸ್ಟ್‌ ಅಧ್ಯಕ್ಷ ಅಮರ್‌ನಾಥರಾಜೇ ಅರಸ್‌, ಅರಸು ಸಂಘದ ಅಧ್ಯಕ್ಷ ಎಚ್‌. ಎಂ.ಟಿ.ಲಿಂಗರಾಜೇ ಅರಸ್‌, ಡಾ.ಎಂ.ಜಿ.ಆರ್‌. ಅರಸ್‌ ಇತರರು ಇದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.