ಮಂಗಳೂರು ವಿಶ್ವವಿದ್ಯಾನಿಲಯ: ಕುಂದ ಕನ್ನಡಕ್ಕೆ “ಪೀಠ’, ಅರೆ ಭಾಷೆಗೆ “ಅಧ್ಯಯನ ಕೇಂದ್ರ’


Team Udayavani, Jun 24, 2022, 8:30 AM IST

ಮಂಗಳೂರು ವಿಶ್ವವಿದ್ಯಾನಿಲಯ: ಕುಂದ ಕನ್ನಡಕ್ಕೆ “ಪೀಠ’, ಅರೆ ಭಾಷೆಗೆ “ಅಧ್ಯಯನ ಕೇಂದ್ರ’

ಮಂಗಳೂರು: ಭಾಷಾಭಿವೃದ್ಧಿ ಚಟುವಟಿಕೆಗೆ ಆದ್ಯತೆ ನೀಡುವ ಇರಾದೆಯಿಂದ ಕುಂದಾಪುರ ಭಾಗದಲ್ಲಿನ ಕುಂದ ಕನ್ನಡ ಅಧ್ಯಯನ ಪೀಠ ಹಾಗೂ ಸುಳ್ಯ ಸೇರಿದಂತೆ ವಿವಿಧ ಭಾಗಗಳಲ್ಲಿ ಬಳಕೆಯಲ್ಲಿರುವ ಅರೆಭಾಷೆಯ ಸಂಶೋಧನೆ ಮತ್ತು ಅಧ್ಯಯನ ಕೇಂದ್ರ ಆರಂಭಿಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ.

ಕುಂದ ಕನ್ನಡ ಅಧ್ಯಯನ ಪೀಠ ಆರಂಭಿಸುವ ನೆಲೆಯಲ್ಲಿ ಈಗಾಗಲೇ ವಿ.ವಿ.ಯಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಆರಂಭಿಸುವಂತೆ ವಿ.ವಿ.ಗೆ ಸೂಚನೆ ಬಂದಿದೆ. ಅದಕ್ಕಾಗಿ ವಿ.ವಿ.ಯು ಆಂತರಿಕ ಸಂಪನ್ಮೂಲದಿಂದ 25 ಲಕ್ಷ ರೂ.ಗಳನ್ನು ಮೀಸಲಿರಿಸಿದೆ. ಸರಕಾರದ ಅನುದಾನವನ್ನು ನಿರೀಕ್ಷಿಸಲಾಗಿದೆ.

ಅರೆಭಾಷೆ ಅಧ್ಯಯನ ಕೇಂದ್ರ ಆರಂಭಕ್ಕೆ ಸರಕಾರ ವಿಶೇಷ ನೆಲೆಯಲ್ಲಿ 2 ಕೋ.ರೂ. ನೀಡುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಅಲ್ಲಿವರೆಗೆ ಆಂತರಿಕ ಸಂಪನ್ಮೂಲ ಬಳಸಿ ಕೇಂದ್ರ ಆರಂಭದ ಬಗ್ಗೆ ವಿ.ವಿ. ಚಿಂತನೆ ನಡೆಸಿದೆ.

ಮಾಜಿ ಸಂಸದ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ “ಉದಯವಾಣಿ’ ಜತೆಗೆ ಮಾತನಾಡಿ, “ಕುಂದ ಕನ್ನಡ ಹಲವು ವಿಶೇಷ ಹಾಗೂ ಸಮೃದ್ಧ ವಿಚಾರಗಳ ಮೂಲಕ ಗೌರವ ಪಡೆದಿದೆ. ಈ ಭಾಷೆಯ ಶ್ರೀಮಂತಿಕೆ ಹಾಗೂ ಸೊಗಡನ್ನು ವಿವರವಾಗಿ ಅಧ್ಯಯನ ನಡೆಸಿ ಎಲ್ಲೆಡೆ ಪ್ರಚುರಪಡಿಸುವ ಅಗತ್ಯ ಇದೆ. ಹೀಗಾಗಿ ವಿ.ವಿ.ಯಲ್ಲಿ ಅಧ್ಯಯನ ಪೀಠ ಮಾಡಬೇಕು ಎಂದು ಸರಕಾರವನ್ನು ನಾನು ಒತ್ತಾಯಿಸಿದ್ದೆ. ಪೂರಕ ಸ್ಪಂದನೆ ಲಭಿಸಿದ್ದು, ಶೀಘ್ರ ಪೀಠ ರಚನೆಯ ಕಾರ್ಯ ನಡೆಯುವ ನಿರೀಕ್ಷೆಯಿದೆ’ ಎಂದರು.

ಕುಲಸಚಿವ (ಆಡಳಿತ) ಪ್ರೊ| ಕಿಶೋರ್‌ ಕುಮಾರ್‌ ಸಿ.ಕೆ. ಪ್ರಕಾರ, “ಕುಂದ ಕನ್ನಡ ಹಾಗೂ ಅರೆಭಾಷೆ ಕರಾವಳಿಯ ಬಹು ಜನರು ಮಾತನಾಡುವ ಭಾಷೆ. ಇದರಲ್ಲಿ ಹಲವು ವಿಶೇಷತೆಗಳು ಇವೆ. ಇವುಗಳ ಬಗ್ಗೆ ತುಲನಾತ್ಮಕ ಅಧ್ಯಯನ ಆಗಬೇಕು ಎಂಬ ನೆಲೆಯಿಂದ ಪೀಠ ಹಾಗೂ ಅಧ್ಯಯನ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ’ ಎನ್ನುತ್ತಾರೆ.

ಪೀಠ, ಕೇಂದ್ರಗಳಿಗೆ ವಿಶೇಷ ಜವಾಬ್ದಾರಿ :

ಮಂಗಳೂರು ವಿ.ವಿ.ಯಲ್ಲಿ ಈಗ 24 ಅಧ್ಯಯನ ಪೀಠಗಳಿದ್ದು, ಈ ಪೈಕಿ ಕೆಲವು ಮಾತ್ರ ಸಶಕ್ತವಾಗಿದೆ. ಹೀಗಾಗಿ ಹೊಸದಾಗಿ ರಚನೆಯಾಗಲಿರುವ ಪೀಠ/ಕೇಂದ್ರವನ್ನು ಸಶಕ್ತಗೊಳಿಸುವ ಮಹತ್ವದ ಜವಾಬ್ದಾರಿ ವಿ.ವಿ. ಪಾಲಿಗಿದೆ. ಕುಂದ ಕನ್ನಡ ಹಾಗೂ ಅರೆಭಾಷೆಯಲ್ಲಿನ ಸಾಹಿತ್ಯಿಕ ಚಟುವಟಿಕೆ, ಕೊಡುಗೆಯ ಅನಾವರಣ, ಐತಿಹ್ಯಗಳನ್ನು ಬೆಳಕಿಗೆ ತರುವ ಹಾಗೂ ಭಾಷಾ ಬೆಳವಣಿಗೆಗೆ ಪೂರಕವಾಗುವ ಕಾರ್ಯಚಟುವಟಿಕೆ ನಡೆಸುವ ಕಾರ್ಯ ನಡೆಯಲಿದೆ.

ಕರಾವಳಿ ಭಾಗದಲ್ಲಿ ಜನಜನಿತವಾಗಿರುವ ಕುಂದ ಕನ್ನಡ ಹಾಗೂ ಅರೆಭಾಷೆಯ ಕುರಿತಂತೆ ವಿಶೇಷ ಅಧ್ಯಯನ ನಡೆಸಲು ಅವಕಾಶ ಒದಗಿಸುವ ಪೀಠ/ಕೇಂದ್ರವನ್ನು ಪ್ರತ್ಯೇಕವಾಗಿ ಮಂಗಳೂರು ವಿ.ವಿ.ಯಲ್ಲಿ ಆರಂಭಿಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು.ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ,ಕುಲಪತಿ, ಮಂಗಳೂರು ವಿ.ವಿ.

 

-ದಿನೇಶ್‌ ಇರಾ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.