ಸ್ಯಾಂಡಲ್ ವುಡ್ ನಲ್ಲಿ ಈ ವಾರ ತೆರೆಗೆ 4 ಚಿತ್ರಗಳು


Team Udayavani, Jun 24, 2022, 9:14 AM IST

ಸ್ಯಾಂಡಲ್ ವುಡ್ ನಲ್ಲಿ ಈ ವಾರ ತೆರೆಗೆ 4 ಚಿತ್ರಗಳು

ವಿಭಿನ್ನ ಕಥೆಯ ನಿರ್ಗಮನ

ಈಗಾಗಲೇ ತನ್ನ ಟೈಟಲ್‌, ಟ್ರೇಲರ್‌ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಒಂದಷ್ಟು ಕುತೂಹಲ ಮೂಡಿಸಿರುವ ಸೈಂಟಿಫಿಕ್‌ ಫಿಕ್ಷನ್‌ ಥ್ರಿಲ್ಲರ್‌ ಶೈಲಿಯ “ತುರ್ತು ನಿರ್ಗಮನ’ ಈ ವಾರ ತೆರೆಗೆ ಬರುತ್ತಿದೆ. ಸುನೀಲ್‌ ರಾವ್‌ ನಾಯಕನಾಗಿ ಅಭಿನಯಿಸಿರುವ “ತುರ್ತು ನಿರ್ಗಮನ’ ಚಿತ್ರದಲ್ಲಿ ಸುಧಾರಾಣಿ, ರಾಜ್‌ ಬಿ ಶೆಟ್ಟಿ, ಅಚ್ಯುತ ಕುಮಾರ್‌, ಹಿತಾ ಚಂದ್ರಶೇಖರ್‌, ಸಂಯುಕ್ತಾ ಹೆಗ್ಡೆ, ಅಮೃತಾ ರಾಮಮೂರ್ತಿ, ಅರುಣಾ ಬಾಲರಾಜ್‌, ನಾಗೇಂದ್ರ ಶಾ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಸದಾ ಸೋಂಬೇರಿಯಾಗಿರುವ, ಉಡಾಫೆಯಾಗಿರುವ, ತಾನೇ ತುಂಬ ಶ್ರೇಷ್ಟ ಎಂಬ ಭ್ರಮೆಯಲ್ಲಿರುವಂಥ ಹುಡುಗನೊಬ್ಬನಿಗೆ ಇದ್ದಕ್ಕಿದ್ದಂತೆ ಲೈಫ್ನ ಎಂಡ್‌ ಸ್ಟೇಜ್‌ ಬಂದಾಗ ಹೇಗೆ ರಿಯಾಕ್ಟ್ ಮಾಡುತ್ತಾನೆ ಅನ್ನೋದು ಸಿನಿಮಾದ ಕಥೆಯ ಒಂದು ಎಳೆ. ಹುಟ್ಟು-ಸಾವು ಎರಡರ ನಡುವಿನ ಲೈಫ್ನಲ್ಲಿ ಎಮರ್ಜೆನ್ಸಿ ಎಕ್ಸಿಟ್‌ ಹೇಗಿರುತ್ತದೆ ಅನ್ನೋದನ್ನ ಸಸ್ಪೆನ್ಸ್‌-ಥ್ರಿಲ್ಲಿಂಗ್‌ ಆಗಿ ಸ್ಕ್ರೀನ್‌ ಮೇಲೆ ಹೇಳಿದ್ದೇವೆ. ಕನ್ನಡದಲ್ಲಿ ಇದೊಂದು ಅಪರೂಪದ ಟೈಮ್‌ಲೂಪ್‌ ಶೈಲಿಯ ಸಿನಿಮಾ’ ಎನ್ನುತ್ತದೆ ಚಿತ್ರತಂಡ.

“ಕುಮಾರ್‌ ಆ್ಯಂಡ್‌ ಕುಮಾರ್‌ ಫಿಲಂಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ತುರ್ತು ನಿರ್ಗಮನ’ ಚಿತ್ರಕ್ಕೆ ಹೇಮಂತ್‌ ಕುಮಾರ್‌ ನಿರ್ದೇಶನವಿದೆ. ಚಿತ್ರಕ್ಕೆ ಪ್ರಯಾಗ್‌ ಮುಕುಂದನ್‌ ಛಾಯಾಗ್ರಹಣ, ಬಿ. ಅಜಿತ್‌ ಕುಮಾರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ದಾಸ್‌ ಮೋಡ್‌ ಸಂಗೀತ ಸಂಯೋಜಿಸಿದ್ದಾರೆ.

ಕಿರಣ್‌ ರಾಜ್‌ ‘ಬಡ್ಡೀಸ್‌’ ಕನಸು

ಕಿರಣ್‌ ರಾಜ್‌ ನಾಯಕರಾಗಿರುವ “ಬಡ್ಡೀಸ್‌’ ಚಿತ್ರ ಇಂದು ತೆರೆಕಾಣುತ್ತಿದೆ. ಈ ಚಿತ್ರವನ್ನು ಗುರುವೇಂದ್ರ ಶೆಟ್ಟಿ ನಿರ್ದೇಶಿಸಿದ್ದು, ಭಾರತಿ ಶೆಟ್ಟಿ ನಿರ್ಮಿಸಿದ್ದಾರೆ. “ಈ ಹಿಂದೆ ಸಾಕಷ್ಟು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರೂ, ನನಗೆ ಸಾಕಷ್ಟು ಹೆಸರು ತಂದುಕೊಟ್ಟದ್ದು “ಕನ್ನಡತಿ’ ಧಾರಾವಾಹಿ ಪಾತ್ರ. ಆನಂತರ ಒಳ್ಳೆಯ ಸಿನಿಮಾದಲ್ಲಿ ನಟಿಸಬೇಕೆಂಬ ಆಸೆಯಿದ್ದ ನನಗೆ ಗುರುತೇಜ್‌ ಶೆಟ್ಟಿ ಅವರು ಹೇಳಿದ್ದ ಕಥೆ ಹಿಡಿಸಿತು. ಹಿಂದೆ “ಮಾರ್ಚ್‌ 22′ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿ ದ್ದೇನೆ. ಆದರೆ ನಾಯಕನಾಗಿ ಇದು ಮೊದಲ ಚಿತ್ರ. ಸ್ನೇಹದ ಮಹತ್ವ ಸಾರುವ ಈ ಚಿತ್ರದಲ್ಲಿ ಮನೋರಂಜನೆಗೆ ಬೇಕಾದ ಎಲ್ಲಾ ಅಂಶಗಳು ಇದೆ’ ಎನ್ನುವುದು ನಾಯಕ ಕಿರಣ್‌ ರಾಜ್‌ ಮಾತು. ನಾಯಕಿ ಸಿರಿ ಪ್ರಹ್ಲಾದ್‌, ನಟ ಗೋಪಾಲ್‌ ದೇಶಪಾಂಡೆ ಸೇರಿದಂತೆ ಅನೇಕರು ನಟಿಸಿದ್ದಾರೆ.

‘ತ್ರಿವಿಕ್ರಮ’ನ ಮೂಲಕ ವಿಕ್ಕಿ ಎಂಟಿ

ಕ್ರೇಜಿಸ್ಟಾರ್‌ ರವಿಚಂದ್ರನ್‌ ದ್ವಿತೀಯ ಪುತ್ರ ವಿಕ್ರಂ ಇಂದು ಹೀರೋ ಆಗಿ ಎಂಟ್ರಿಕೊಡುತ್ತಿದ್ದಾರೆ. ಅವರ ನಟನೆಯ ಚೊಚ್ಚಲ ಚಿತ್ರ “ತ್ರಿವಿಕ್ರಮ’ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು, ಟೀಸರ್‌ಗಳು ದೊಡ್ಡ ಮಟ್ಟದಲ್ಲಿ ಹಿಟ್‌ ಆಗುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಪಕ್ಕಾ ಯೂತ್‌ಫ‌ುಲ್‌ ಕಥೆಯನ್ನು ಹೊಂದಿರುವ “ತ್ರಿವಿಕ್ರಮ’ ಚಿತ್ರವನ್ನು ಪ್ರೇಕ್ಷಕರು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ

ಈ ಹಿಂದೆ “ರೋಸ್‌’, “ಮಾಸ್‌ ಲೀಡರ್‌’ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಹನಾ ಮೂರ್ತಿ “ತ್ರಿವಿಕ್ರಮ’ನಿಗೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. “ಸೋಮಣ್ಣ ಟಾಕೀಸ್‌’ ಬ್ಯಾನರ್‌ನಲ್ಲಿ ರಾಮ್ಕೋ ಸೋಮಣ್ಣ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ತುಳಸಿ ಶಿವಮಣಿ, ಸುಚೇಂದ್ರ ಪ್ರಸಾದ್‌, ಸಾಧುಕೋಕಿಲ, ರೋಹಿತ್‌ ರಾಯ್‌, ಜಯಪ್ರಕಾಶ್‌, ಶಿವಮಣಿ, ಆದಿ ಲೋಕೇಶ್‌, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದ ವರು “ತ್ರಿವಿಕ್ರಮ’ನ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಹರಿಕಥೆಯಲ್ಲ, ಗಿರಿಕಥೆ: ಇದಲ್ಲದೇ ರಿಷಭ್‌ ಶೆಟ್ಟಿ ನಟನೆಯ “ಹರಿಕಥೆಯಲ್ಲ, ಗಿರಿಕಥೆ’ ಚಿತ್ರ ಗುರುವಾರ ಬಿಡುಗಡೆಯಾಗಿದೆ. ಈ ಚಿತ್ರವನ್ನು ಸಂದೇಶ್‌ ಪ್ರೊಡಕ್ಷನ್ಸ್‌ನಡಿ ಸಂದೇಶ್‌ ನಿರ್ಮಿಸಿದ್ದಾರೆ

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.