ಹೆಚ್ಚುವರಿ ಬಸ್‌ ಕಲ್ಪಿಸಲು ಶಾಸಕ ಅಮರೇಗೌಡ ಅಧಿಕಾರಿಗಳಿಗೆ ಸೂಚನೆ


Team Udayavani, Jun 24, 2022, 10:58 AM IST

4bus

ಕುಷ್ಟಗಿ: ತಾಲೂಕಿನ ತಳವಗೇರಾ ಆದರ್ಶ ವಿದ್ಯಾಲಯಕ್ಕೆ ವಿದ್ಯಾರ್ಥಿಗಳಿಗೆ  ಬಸ್ ಸಮಸ್ಯೆ ಹಿನ್ನೆಲೆಯಲ್ಲಿ ಕೂಡಲೇ ಪ್ರತ್ಯೇಕವಾಗಿ ಕುಷ್ಟಗಿ-ಹನುಮಸಾಗರ ಮಾರ್ಗವಾಗಿ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲು ಘಟಕ ವ್ಯವಸ್ಥಾಪಕ ಜಡೇಶ್ ಅವರಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಸೂಚಿಸಿದರು.

ಶಾಸಕ ಬಯ್ಯಾಪೂರ ಶುಕ್ರವಾರ ಬೆಳಗ್ಗೆ ವಿವಿಧ ವಾರ್ಡಗಳಿಗೆ ಭೇಟಿ ಸಂದರ್ಭದಲ್ಲಿ 4 ಕೋಟಿ ರೂ. ಅಂದಾಜು ವೆಚ್ಚದ ಬಸ್ ನಿಲ್ದಾಣ ನವೀಕೃತ ಕಾಮಗಾರಿ ಪರಿಶೀಸುತ್ತಿದ್ದರು. ಇದೇ ವೇಳೆ ತಳವಗೇರಾ ಆದರ್ಶ ವಿದ್ಯಾಲಯಕ್ಕೆ ಹೋಗಲು ಬಸ್ ನಿರೀಕ್ಷೆಯಲ್ಲಿದ್ದ ಮಕ್ಕಳು, ಶಾಸಕ ಬಯ್ಯಾಪೂರ ಅವರನ್ನು ತಳವಗೇರಾಕ್ಕೆ‌ ನಿತ್ಯ ಬಸ್ ಸಮಸ್ಯೆ ಎದುರಿಸುತ್ತಿರುವುದನ್ನು ಪ್ರಸ್ತಾಪಿಸಿದರು.

ಪ್ರತಿ ದಿನ ಕುಷ್ಟಗಿಯಿಂದ ಹನುಮಸಾಗರ ಮಾರ್ಗವಾಗಿ ಬದಾಮಿ ಬಸ್ ಸೇವೆ ರದ್ದುಗೊಳಿಸಿದೆ. ಶನಿವಾರ ಶಾಲೆ 12-30ಕ್ಕೆ ಶಾಲೆ ಬಿಡುತ್ತಿದ್ದು ಆ ವೇಳೆಗೆ ಬಸ್ ಇಲ್ಲ. 3 ಗಂಟೆಯವರೆಗೂ ಹನುಮಸಾಗರದಿಂದ ಬರುವ ಬಸ್ ಗೆ ಕಾಯಬೇಕು. ಈ ಒಂದು ಬಸ್ ನಲ್ಲಿ ಎರಡು ಬಸ್ ನಷ್ಟು ವಿದ್ಯಾರ್ಥಿಗಳನ್ನು ತುಂಬಿಕೊಂಡು ಬರುತ್ತಿದ್ದು, ತಳವಗೇರಾ ದಿಂದ ಕುಷ್ಟಗಿ ವರೆಗೆ 15 ನಿಮಿಷದ ಪ್ರಯಾಣ ಹಿಂಸೆಯಾಗಿದೆ. ಹೀಗಾಗಿ  ವಿದ್ಯಾರ್ಥಿಗಳು ಬಸ್ ಗೆ ಕಾಯದೇ ಖಾಸಗಿ ವಾಹನ ಹತ್ತಿಕೊಂಡು ಬರುವಂತಾಗಿದೆ ಎಂದು ಬಸ್ ನ ವಾಸ್ತವ ಸಮಸ್ಯೆ ಬಿಚ್ಚಿಟ್ಟರು.

ಶಾಸಕ ಬಯ್ಯಾಪೂರ ಅವರು ವಿದ್ಯಾರ್ಥಿಗಳ ಅಹವಾಲು ಆಲಿಸಿ, ಘಟಕ ಬಸ್ ವ್ಯವಸ್ಥಾಪಕ ಜಡೇಶ್ ಅವರಿಗೆ ಬಸ್ಸುಗಳ ಕೊರತೆಯ ಬಗ್ಗೆ ಪ್ರಶ್ನಿಸಿದರು. ಘಟಕ ವ್ಯವಸ್ಥಾಪಕರು ಬಸ್ಸುಗಳಿವೆ, ಆದರೆ ಸಿಬ್ಬಂದಿ ಕೊರತೆಯಾಗಿದೆ ಎಂದಾಗ ಕೂಡಲೇ ಸಿಬ್ಬಂದಿ ಕೊರತೆಯಾಗಿರುವ ಬಗ್ಗೆ ಮೇಲಾಧಿಕಾರಿಗಳಿಗೆ ಅಗತ್ಯ ಇರುವ ಹುದ್ದೆಗಳ ಬಗ್ಗೆ ಪತ್ರ ಬರೆಯಿರಿ. ಅದರ ಪ್ರತಿ ನಮಗೆ ನೀಡಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರೊಂದಿಗೆ ಚರ್ಚಿಸುವೆ ಎಂದ ಅವರು, ತಳವಗೇರಾ ಆದರ್ಶ ವಿದ್ಯಾಲಯಕ್ಕೆ ಖುದ್ದು ಭೇಟಿ ನೀಡಿ ಯಾವ ಸಮಯಕ್ಕೆ ಬಸ್ ಅಗತ್ಯತೆ ತಿಳಿದುಕೊಂಡು ಹೆಚ್ಚುವರಿ ಬಸ್ ಸೇವೆ ಕಲ್ಪಿಸಲು ಸೂಚಿಸಿದರು.

ಇದನ್ನೂ ಓದಿ:ಮಂಗಳೂರು: ಸ್ಕೂಟರ್‌ ಶೋ ರೂಮ್‌ ಬೆಂಕಿಗಾಹುತಿ

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಬಿ.ಟಿ. ಬಂಡಿವಡ್ಡರ,  ಸದಸ್ಯರಾದ ಸಯ್ಯದ್ ಖಾಜಾ ಮೈನುದ್ದೀನ್ ಮುಲ್ಲಾ,ಮಹಿಬೂಬು ಕಮ್ಮಾರ, ವಸಂತ ಮೇಲಿನಮನಿ ಸೇರಿದಂತೆ ಮಂಜುನಾಥ ಕಟ್ಟಿಮನಿ, ಶೌಕತ್ ಕಾಯಿಗಡ್ಡಿ, ಮಹೇಶ ಕೋಳೂರು, ಉಸ್ಮಾನ ಕಲಬುರಗಿ, ಪುರಸಭೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.