ಹರಿದು ಬರಲಿ ಅಭಿವೃದ್ಧಿಯ ನೀರು: ಮಂಗಳೂರು ನಗರ ಈ ಗ್ರಾಮದ ನೆಂಟ


Team Udayavani, Jun 24, 2022, 5:34 PM IST

23

ಚೇಳ್ಯಾರು: ಮಂಗಳೂರು ಮಹಾನಗರ ಪಾಲಿಕೆ ಗಡಿಭಾಗದಲ್ಲಿರುವ ಚೇಳಾçರು ಕೃಷಿ, ಹೈನುಗಾರಿಕೆಯನ್ನು ನೆಚ್ಚಿ ಕೊಂಡ ಗ್ರಾಮ. ಜನಸಂಖ್ಯೆ ಅಂದಾಜು ಐದು ಸಾವಿರ.

ಪಟ್ಟಣ ಹತ್ತಿರದ ನೆಂಟನಾಗಿರುವುದರಿಂದ ಈ ಗ್ರಾಮದ ಹಲವರು ಪಟ್ಟಣದ ಕೈಗಾರಿಕೆ ಹಾಗೂ ಇತರ ಉದ್ಯೋಗಕ್ಕೆ ತೆರಳುತ್ತಾರೆ. ಮುಡಾ ಬಡಾವಣೆ, ಖಾಸಗಿ ಬಡಾವಣೆ ಇಲ್ಲಿ ನಿರ್ಮಾಣವಾಗುತ್ತಿದ್ದು ನಗರದಂತೆ ಬೆಳೆಯುವ ಮುನ್ಸೂಚನೆ ಗೋಚರಿಸುತ್ತಿದೆ.

ಕೃಷಿಯ ಕೀರ್ತಿ ಈ ಗ್ರಾಮದಲ್ಲಿ ಹಲವಾರು ಕೃಷಿಕರು ಕೃಷಿಗಾಗಿ ಉತ್ತಮ ಕೃಷಿಕ ಪ್ರಶಸ್ತಿ ಪಡೆದವರಿದ್ದಾರೆ. ಪ್ರತೀ ವರ್ಷ ನೂರಾರು ಎಕರೆ ಭೂಮಿಯಲ್ಲಿ ಭತ್ತ ಬೇಸಾಯ ಮಾಡಲಾಗುತ್ತದೆ. ನಗರಕ್ಕೆ ಹೊಂದಿಕೊಂಡ ಗ್ರಾಮದಲ್ಲಿ ಹೆಚ್ಚಿನ ಬೇಸಾಯ ನಡೆಯುತ್ತಿದೆ. ಹಡಿಲು ಭೂಮಿ ಬೇಸಾಯಕ್ಕೂ ಪ್ರೋತ್ಸಾಹ ನೀಡಲಾಗುತ್ತಿದೆ.

ಎಂಆರ್‌ಪಿಎಲ್‌ ನಿರ್ವಸಿತರ ಕಾಲನಿ ಇಲ್ಲಿದೆ. ಇಲ್ಲಿನ ಪ್ರಮುಖ ಮತ್ತು ಕಾಲನಿಯ ಹರಿದು ಬರಲಿ ಅಭಿವೃದಿ œಯ ನೀರು ಮಂಗಳೂರು ನಗರ ಈ ಗ್ರಾಮದ ನೆಂಟ ಚೇಳಾçರು ಗ್ರಾಮ ಪಂಚಾಯತ್‌ ಕಚೇರಿ. ನಂದಿನಿ ನದಿಯಲ್ಲಿ ಹೂಳು ತುಂಬಿರುವ ಪ್ರದೇಶ. ಚೇಳಾçರು ಗ್ರಾಮರಸ್ತೆಗಳು ವಿಸ್ತರಣೆಯಾಗಿವೆ. ಇನ್ನು ಕೆಲವು ರಸ್ತೆಗಳಿಗೆ ಡಾಮರು ಹಾಕಿದ್ದರೂ ದುರಸ್ತಿ ಅಗತ್ಯವಿದೆ.

ಕುಡಿಯುವ ನೀರಿನ ವ್ಯವಸ್ಥೆ ಈಗ ಸ್ವಲ್ಪ ಸುಧಾರಿಸಿದೆ. ಇನ್ನಷ್ಟು ಸುಧಾರಿಸಬೇಕಿದೆ. ಅಗತ್ಯವಿದ್ದಾಗ ಪಂಚಾಯತ್‌ ಟ್ಯಾಂಕರ್‌ ಮೂಲಕ ನೀರು ಪೂರೈಸುತ್ತಿದೆ. ಜಲಜೀವನ್‌ ಮಿಷನ್‌ ಯೋಜನೆ ಜಾರಿಗೊಂಡರೆ ನೀರಿನ ಸಮಸ್ಯೆ ಪರಿಹಾರವಾಗಬಹುದು ಎಂಬುದು ಗ್ರಾಮಸ್ಥರ ಲೆಕ್ಕಾಚಾರ. ಯೋಜನೆಯ ಅನುಷ್ಠಾನ ಪ್ರಗತಿಯಲ್ಲಿದೆ.

ಮಾಲಿನ್ಯ ತಡೆ ಇಲ್ಲಿಯೂ ನಂದಿನಿ ನದಿಯೇ ಜೀವಾಳ. ಆದರೆ ಅದರಲ್ಲಿ ಹೂಳು ತುಂಬಿದ ಪರಿಣಾಮ ಕೃಷಿಗೆ ಸಮಸ್ಯೆಯಾಗುತ್ತಿದೆ. ಹೂಳು ತೆಗೆದು ಕೃಷಿಗೆ ಅನುಕೂಲ ಮಾಡಿಕೊಟ್ಟರೆ ಗ್ರಾಮದ ಆರ್ಥಿಕತೆಯೂ ಬೆಳೆಯಬಹುದು. ಕೃಷಿಗೆ ಪೂರಕವಾಗಿ ನಂದಿನಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಿದಲ್ಲಿ ಗ್ರಾಮದ ನೀರಿನ ಬೇಡಿಕೆಯೂ ಈಡೇರಲಿದೆ. ಕೃಷಿಗೂ ಉತ್ತೇಜನ ದೊರಕಲಿದೆ. ಇದರೊಂದಿಗೆ ನದಿ ಮಾಲಿನ್ಯ ವಾಗದಂತೆ ತಡೆದರೆ ಮೀನುಗಾರಿಕೆ ವೃತ್ತಿಗೂ ಅನುಕೂಲವಾಗಲಿದೆ. ಅಕ್ರಮವಾಗಿ ಒಳಚರಂಡಿ ನೀರು ನಂದಿನಿ ನದಿಗೆ ಸೇರದಂತೆ ತಡೆಗೆ ಕ್ರಮ ಕೈಗೊಳ್ಳಬೇಕಿದೆ. ನದಿಯ ಹೂಳು ತೆಗೆಯಲು ಅಂದಾಜು 5 ಕೋ. ರೂ ಅಗತ್ಯವಿದ್ದು, ಸರಕಾರ ಅನು ಮೋದಿಸಬೇಕಿದೆ. ಹಾಗಾಗಿ ಮಾಲಿನ್ಯ ಮುಕ್ತ ಮಾಡುವ ಕೆಲಸ ಆಗ ಬೇಕಿದೆ ಎಂಬುದು ಗ್ರಾಮಸ್ಥರ ಆಗ್ರಹ.

ಘನ ತ್ಯಾಜ್ಯ ವಿಲೇವಾರಿಗೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕ್ರಮ ಕೈಗೊಂಡಿದ್ದರೂ ಹಸಿ,ಒಣ ಕಸ ವಿಂಗಡನೆ ವ್ಯವಸ್ಥೆ ಆರಂಭವಾಗಿಲ್ಲ. ಹೀಗಾಗಿ ಕಸವನ್ನು ರಸ್ತೆ ಬದಿ ಬಿಸಾಡುವ ಪ್ರವೃತ್ತಿ ಇದೆ. ಇದಕ್ಕೂ ಪರಿಹಾರ ಹುಡುಕಬೇಕಿದೆ. ದಾರಿ ದೀಪದ ವ್ಯವಸ್ಥೆ ಸುಧಾರಿಸಬೇಕಿದೆ.

ಸೀಮಿತ ಸಂಖ್ಯೆಯಲ್ಲಿ ಖಾಸಗಿ ಬಸ್‌ ಗಳ ಸಂಚಾರವಿದೆ. ಒಂದು ನರ್ಮ್ ಬಸ್‌ ಮದ್ಯ ಗ್ರಾಮದಲ್ಲಿ ಸಂಚರಿಸುತ್ತಿದ್ದು, ಚೇಳಾçರಿಗೂ ಸೇರಿ ಎರಡಾದರೂ ನರ್ಮ್ ಬಸ್‌ ಅಗತ್ಯವಿದೆ ಎಂಬುದು ಜನರ ಬೇಡಿಕೆ.

ಅಗೋಳಿ ಮಂಜಣ್ಣ ನೆನಪು ತುಳುನಾಡಿನ ವೀರ ಪುರುಷ ಅಗೋಳಿ ಮಂಜಣ್ಣ ಸುರತ್ಕಲ್‌ ಕಟ್ಲದಲ್ಲಿ ಜನಿಸಿದರೂ, ಚೇಳಾçರುಗುತ್ತು ಅವರ ಅಜ್ಜಿ ಮನೆ ಚೇಳಾçರಿನಲ್ಲಿದ್ದು 300-400 ವರ್ಷಗಳ ಇತಿಹಾಸವಿದೆ. ವಿವಿಧ ಕಾರ್ಯಕ್ರಮ ಇವರ ಹೆಸರಿನಲ್ಲಿ ಜರಗುತ್ತದೆ.

ಮೂಲ ಸೌಕರ್ಯ ಒದಗಿಸಿ ಚೇಳ್ಯಾರುವಿನಲ್ಲಿ ಶಾಲೆ, ಪದವಿಪೂರ್ವ ಕಾಲೇಜಿದೆ. ಬೇರೆ ಆರಂಭಿಸುವ ಬದಲು ಇದನ್ನೇ ಸುಸಜ್ಜಿತಗೊಳಿಸಿದರೆ ಉತ್ತಮ. ನಗರ ಸಮೀಪ ಇದ್ದು, ಇನ್ನಷ್ಟು ಮೂಲ ಸೌಕರ್ಯ ಒದಗಿಸಬೇಕು. –ವೇಣುವಿನೋದ್‌ ಶೆಟ್ಟಿ, ಚೇಳ್ಯಾರು

„ಲಕ್ಷ್ಮೀ ನಾರಾಯಣ ರಾವ್‌

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.